ದಕ್ಷಿಣ ಕನ್ನಡ | ಬೀದಿಬದಿ ವ್ಯಾಪಾರಿಗಳಿಂದ ಸೌಹಾರ್ದ ಕ್ರಿಸ್‌ಮಸ್ ಆಚರಣೆ

Date:

ಯೇಸು ಕ್ರಿಸ್ತನ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಪ್ರತಿ ಹಬ್ಬಗಳನ್ನು ಎಲ್ಲ ಜನರೂ ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯವಾಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಮತ್ತು ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಸಹಾಭಾಗಿತ್ವದಲ್ಲಿ ಮಂಗಳೂರಿನ ಬೀದಿ ವ್ಯಾಪಾರಿಗಳ ಕಚೇರಿಯಲ್ಲಿ ನಡೆದ ಸೌಹಾರ್ದ ಕ್ರಿಸ್‌ಮಸ್ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬೀದಿಬದಿ ವ್ಯಾಪಾರಿಗಳು ಅತ್ಯಂತ ಶ್ರಮಜೀವಿಗಳು, ಅಭದ್ರತೆಯಲ್ಲಿ ಬದುಕುತ್ತಿರುವವರು. ವ್ಯಾಪಾರದಲ್ಲಿ ವ್ಯಾಪಾರ ಧರ್ಮ, ನ್ಯಾಯ, ನಿಷ್ಠೆ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಸಮಾಜ ಗುರುತಿಸುವಂತೆ ಜೀವನ ನಡೆಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದುವ ಪ್ರೌಢ ಶಾಲೆಯ ಶಿಕ್ಷಕ ಸ್ಟ್ಯಾನಿ ತಾವ್ರೊ ಮಾತನಾಡಿ, “ನಿನ್ನ ಶತ್ರುಗಳನ್ನು ಪ್ರೀತಿಸು, ನಿನ್ನನ್ನು ದ್ವೇಷಿಸುವವರಿಗೆ ಒಳಿತನ್ನು ಬಯಸಬೇಕೆಂದು ಮಾನವ ಜನಾಂಗಕ್ಕೆ ಸಾರಿ ಹೇಳಿದ ಯೇಸು ಕ್ರಿಸ್ತ ಸಕಲ ಮಾನವರಿಗೆ ಭ್ರಾತೃತ್ವದ ಸಂದೇಶ ನೀಡಿದ ಮಹಾನ್ ಶಕ್ತಿಯಾಗಿದ್ದಾರೆ. ಬೀದಿ ವ್ಯಾಪಾರಿಗಳು ಎಲ್ಲ ಧರ್ಮದ ಹಬ್ಬಗಳನ್ನು ಆಚರಿಸುವ ಮೂಲಕ ಮಂಗಳೂರಿನ ನಿಜವಾದ ಸೌಹಾರ್ದತೆಯ ರಾಯಭಾರಿಗಳಾಗಿದ್ದೀರಿ. ಬೀದಿ ವ್ಯಾಪಾರಿಗಳಲ್ಲಿರುವ ಸಾಮರಸ್ಯದ ಸದ್ಭಾವನೆ ಸರ್ವರಿಗೂ ಅನುಕರಣೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ನವೀನ್ ಕೊಂಚಾಡಿ, ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಕ್ರಿಸ್‌ಮಸ್ ಹಬ್ಬಕ್ಕೆ ಶುಭ ಕೋರಿ ಮಾತನಾಡಿದರು.

ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ಅಧ್ಯಕ್ಷತೆ ವಹಿಸಿದ್ದರು. ಮುಖಂಡರುಗಳಾದ ಹರೀಶ್ ಪೂಜಾರಿ ಆಸೀಫ್ ಬಾವ ಉರುಮನೆ, ಮೇಬಲ್ ಡಿಸೋಜ, ಮೇರಿ ಡಿಸೋಜಾ, ಫಿಲೋಮೀನಾ, ಪ್ರವೀಣ್ ಕದ್ರಿ, ನೌಷಾದ್ ಉಳ್ಳಾಲ, ಇಸ್ಮಾಯಿಲ್, ಆದಂ ಬಜಾಲ್, ಶ್ರೀಧರ ಭಂಡಾರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...