ದಕ್ಷಿಣ ಕನ್ನಡ | ಕಾನ-ಕಟ್ಲ ಜನತಾ ಕಾಲನಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ; ಜಿಲ್ಲಾಡಳಿತ ನಿರ್ಲಕ್ಷ್ಯ

Date:

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.‌

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಾನ-ಕಟ್ಲ ಜನತಾ ಕಾಲನಿಯಲ್ಲಿನ ಸರ್ಕಾರಿ ಶಾಲೆಯ ಭೂ ಒತ್ತುವರಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

“ಕಾನ-ಕಟ್ಲ ಜನತಾ ಕಾಲನಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕರೆಯಷ್ಟು ಭೂಮಿ ಕಬಳಿಕೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾದರೂ ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಾಗಲೀ ಈವರೆಗೆ ಶಾಲೆಗೆ ಭೇಟಿ ನೀಡಿಲ್ಲ. ಭೂ ಹಗರಣವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಸರ್ಕಾರಿ ಶಾಲೆಗಳ ಸಂರಕ್ಷಣೆ ಬಗ್ಗೆ ಜಿಲ್ಲಾಡಳಿತಕ್ಕೆ ಇಚ್ಛಾಶಕ್ತಿ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ” ಎಂದು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಸಂಚಾಲಕ, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಶಾಲೆಯ ಭೂಮಿಯನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರೂ ಕೂಡ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕಾನ-ಕಟ್ಲ ಜನತಾಕಾಲನಿ ನಿವಾಸಿಗಳು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ: ಬಡಗಲಪುರ ನಾಗೇಂದ್ರ

ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ವಾರಿಜ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟ ಸಮಿತಿಯ ಪ್ರಮುಖರುಗಳಾದ ಶರೀಫ್, ಫಾರೂಕ್ ಜನತಾ ಕಾಲನಿ, ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಆಸೀಫ್, ಅಶ್ರಫ್, ಶಬನಾ, ಸಿಸಿಲಿ ಡಿಸೋಜಾ, ಶೈಫರ್ ಆಲಿ, ಅಸ್ಕಾಫ್, ಐ ಮೊಹಮ್ಮದ್, ಸಾದಿಕ್ ಕಿಲ್ಪಾಡಿ, ಹನೀಫ್ ಇಡ್ಯಾ, ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...