ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

Date:

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ. ನಿವೃತ್ತಿ ಅರಣ್ಯ ಅಧಿಕಾರಿ ಪರಮೇಶ್ವರ್ ಎನ್‌ ಪಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತರು ದಾಳಿ ಮಾಡಿದ್ದು, ಲಂಚ ಸ್ವೀಕರಿಸುವಾಗಲೇ ಭಾರತಮ್ಮನನ್ನು ಶನಿವಾರ ಬಂಧಿಸಿದ್ದಾರೆ.

ಸದ್ಯ ಇಲಾಖೆಯಿಂದ ನಿವೃತ್ತರಾಗಿರುವ ಪರಮೇಶ್ವರ್ ಎನ್‌ ಪಿ ಅವರು ಕರ್ತವ್ಯದ ವೇಳೆ 2022-23 ಮತ್ತು 2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ’ ಯೋಜನೆಯಡಿ ಸಜಿಪ ಮುನ್ನೂರು, ಸಜಿಪ ಮೂಡ, ಸಜಿಪ ಪಡು, ಸಜಿಪ ನಡು, ಕುರ್ನಾಡು, ನರಿಂಗಾನ ಬಾಳೆಪುಣಿ, ಮಂಜನಾಡಿ ಗ್ರಾಮಗಳ ಸಾರ್ವಜನಿಕರರಿಗೆ ಸರ್ಕಾರದ ವತಿಯಿಂದ 50 ಲಕ್ಷ ರೂ. ಮೌಲ್ಯದ ಹಲವು ಜಾತಿಯ ಅರಣ್ಯ ಮತ್ತು ತೋಟಗಾರಿಕಾ ಸಸಿಗಳನ್ನು ಉಚಿತವಾಗಿ ಸರಬರಾಜು ಮತ್ತು ನಾಟಿ ಕಾಮಗಾರಿ ಮಾಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೋಟಗಾರಿಕಾ ಸಸಿಗಳನ್ನು ಕಣ್ಣನ್ ನರ್ಸರಿ ಮಾಲಕ ಧೋರಿ, ಶಬರೀಶ್ ನರ್ಸರಿಯ ಭೈರೇಗೌಡ ಮುಂತಾದವರಿಂದ ಈ ಸಸಿಗಳನ್ನು ಪಡೆಯಲಾಗಿತ್ತು. ಅವರಿಗೆ ನೀಡಬೇಕಾದ 18 ಲಕ್ಷ ರೂ. ಮತ್ತು ಅರಣ್ಯ ಗುತ್ತಿಗೆದಾರರಿಂದ ನಾಟಿ ಮಾಡಿಸಿದ್ದ 32 ಲಕ್ಷ ರೂ. ಕೊಡಲು ಬಾಕಿಯಿತ್ತು.

ಈ ನರ್ಸರಿಯ ಮಾಲೀಕರು ಮತ್ತು ಗುತ್ತಿಗೆದಾರರಿಗೆ ಕೊಡಲು ಬಾಕಿಯಿದ್ದ 50 ಲಕ್ಷ ರೂ.ನಗದನ್ನು ನೀಡಲು ಪರಮೇಶ್ವರ್ ಎನ್‌ ಪಿ ಅವರು ಅಕ್ಟೋಬರ್‌ 4 ರಂದು ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮರನ್ನು ಭೇಟಿ ಮಾಡಿ ಹೇಳಿದ್ದರು. ʼಬಿಲ್‌ನ ಮೊತ್ತ ಪಾವತಿಸಬೇಕಾದರೆ ತನಗೆ ಶೇ.15ರಷ್ಟು ಕಮೀಷನ್ ನೀಡಬೇಕು. ಇಲ್ಲದಿದ್ದರೆ ಬಿಲ್ ಪಾವತಿ ಮಾಡುವುದಿಲ್ಲʼ ಎಂದು ಭಾರತಮ್ಮ ಹೇಳಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಅಕ್ಟೋಬರ್‌ 20ರಂದು ಉಪನಿರ್ದೇಶಕರ ಕಚೇರಿಗೆ ತೆರಳಿ ಬಿಲ್ ಬಗ್ಗೆ ಮಾತನಾಡಿದಾಗ 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಮುಂದಿಟ್ಟರು ಎನ್ನಲಾಗಿದೆ. ಅದರಂತೆ ಅಕ್ಟೋಬರ್ 21ರಂದು ಕಚೇರಿಯಲ್ಲಿ 1 ಲಕ್ಷ ರೂ.‌ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೆಯೇ ಸಾಕ್ಷಿ ಸಹಿತ ಉಪನಿರ್ದೇಶಕಿಯನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿ ಸಿ ಎ ಸೈಮನ್, ಡಿವೈಎಸ್‌ಪಿಗಳಾದ ಕಲಾವತಿ ಮತ್ತು ಚಲುವರಾಜು ಬಿ, ಇನ್ಸ್‌ಪೆಕ್ಟರ್ ಸುರೇಶ್ ಕುಮಾರ್ ಪಿ ಇದ್ದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...