ದಕ್ಷಿಣ ಕನ್ನಡ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ; ತರಗತಿಗಳು ವಿಳಂಬ

Date:

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಜಿಎಫ್‌ಜಿಸಿ) ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಒಂದು ತಿಂಗಳ ಹಿಂದೆಯೇ ಶೈಕ್ಷಣಿಕ ವರ್ಷ ಪ್ರಾರಂಭವಾಯಿತು. ಆದರೆ, ಶಿಕ್ಷಕರ ಕೊರತೆಯಿಂದ ಈವರೆಗೆ ಪಾಠ ಪ್ರವಚನಗಳು ಆರಂಭವಾಗಿಲ್ಲ. ಸುಮಾರು 37 ಜಿಎಫ್‌ಜಿಸಿಗಳಿಗೆ ಸುಮಾರು 700 ಮಂದಿ ಅತಿಥಿ ಬೋಧಕರ ಅಗತ್ಯವಿದೆ. ಸರ್ಕಾರವು ಅತಿಥಿ ಬೋಧಕರನ್ನು ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಎಲ್ಲವೂ ಸರಿಯಾಗಿ ನಡೆದರೆ, ಅಕ್ಟೋಬರ್ 1 ರಿಂದ ಈ ಕಾಲೇಜುಗಳಲ್ಲಿ ಬೋಧನೆಯನ್ನು ಪ್ರಾರಂಭಿಸಬಹುದೆಂಬುದು ಸ್ಥಳೀಯ ಶಿಕ್ಷಕರ ಅಭಿಪ್ರಾಯ.

“ನಮ್ಮ ಕಾಲೇಜಿನಲ್ಲಿ ಶೇ.40ರಷ್ಟು ಕಾಯಂ ಬೋಧಕರಿದ್ದಾರೆ, ಉಳಿದವರು ಅತಿಥಿ ಬೋಧಕರು. ಸಿಬ್ಬಂದಿ ಕೊರತೆಯಿಂದ ತರಗತಿಗಳನ್ನು ತೆಗೆದುಕೊಳ್ಳುವುದು ಎಷ್ಟು ಕಷ್ಟ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಮಂಗಳೂರಿನ ಕಾರ್‌ಸ್ಟ್ರೀಟ್‌ನ ಡಾ. ಪಿ ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪರಿಸ್ಥಿತಿಯನ್ನು ನಿಭಾಯಿಸಲು, ಬಲ್ಮಠದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವಿಭಾಗಗಳನ್ನು ಒಂದೇ ತರಗತಿಯಾಗಿ ಸಂಯೋಜಿಸಲಾಗುತ್ತಿದೆ” ಎಂದು ಬೋಧಕ ಸಿಬ್ಬಂದಿಯೊಬ್ಬರು ಹೇಳಿದರು.

“ಸಿಬ್ಬಂದಿ ಲಭ್ಯವಿಲ್ಲದ ಕಾರಣ ದಿನಕ್ಕೆ 2ರಿಂದ 3 ಗಂಟೆಗಳ ಕಾಲ ಮಾತ್ರ ತರಗತಿಗಳು ನಡೆಯುತ್ತಿವೆ” ಎಂದು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

“ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳು ಈಗಾಗಲೇ ಆಗಸ್ಟ್ 23 ರಿಂದ ಪುನರಾರಂಭಗೊಂಡಿದ್ದು, ಅತಿಥಿ ಬೋಧಕರ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿವೆ. ಅತಿಥಿ ಉಪನ್ಯಾಸಕರನ್ನು 10 ತಿಂಗಳಿಗೆ ಅಥವಾ ವಿಶ್ವವಿದ್ಯಾಲಯದ ಕೊನೆಯ ಕೆಲಸದ ದಿನದವರೆಗೆ ನೇಮಕ ಮಾಡಲಾಗುತ್ತದೆ. ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿನ ಕಾಲೇಜುಗಳೂ ಕಳೆದ ವಾರ ಆಗಸ್ಟ್‌ನಲ್ಲಿ ಆರಂಭವಾಗಿವೆ. ಆದರೆ ಇತರ ವಿಶ್ವವಿದ್ಯಾಲಯಗಳಲ್ಲಿ, ಪರೀಕ್ಷೆಗಳು ಅಥವಾ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಮಂಗಳೂರು ವಿವಿ ಹಾಗೂ ದಾವಣಗೆರೆ ವಿವಿ ವ್ಯಾಪ್ತಿಯ ಕಾಲೇಜುಗಳು ಸಮಸ್ಯೆ ಎದುರಿಸುವಂತಾಗಿದೆ” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಧೀರಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

“ಕಲ್ಯಾಣ ಕರ್ನಾಟಕ ಮೀಸಲಾತಿ ಸಮಸ್ಯೆ ಇಲ್ಲದಿದ್ದರೆ ಈ ವೇಳೆಗಾಗಲೇ ಅತಿಥಿ ಉಪನ್ಯಾಸಕರ ನೇಮಕಾತಿ ಪೂರ್ಣಗೊಳ್ಳುತ್ತಿತ್ತು. ಇದೀಗ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮರು ನಿಗದಿಪಡಿಸಿದೆ. ಈ ಹಿಂದೆ, ಸೆಪ್ಟೆಂಬರ್ ಮೊದಲ ವಾರದಲ್ಲಿ ಅರ್ಜಿಗಳನ್ನು ಕೋರಲಾಗಿತ್ತು. ಬೋಧಕರು ಸೆಪ್ಟೆಂಬರ್ 16ರೊಳಗೆ ಸೇರಬೇಕಾಗಿತ್ತು. ಇದೀಗ ಸೆಪ್ಟೆಂಬರ್ 28ರೊಳಗೆ ಕೌನ್ಸೆಲಿಂಗ್ ನಡೆಯಲಿದ್ದು, ಅಕ್ಟೋಬರ್ ಮೊದಲ ವಾರದಿಂದ ಬೋಧಕರು ಕೆಲಸಕ್ಕೆ ಹಾಜರಾಗಲಿದ್ದಾರೆ” ಎಂದು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ದೇವಿಪ್ರಸಾದ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ; ವಿರೋಧದ ನಡುವೆ ಪೊಲೀಸ್ ಬಂದೋಬಸ್ತ್

ಉಡುಪಿ ನಗರದ ಮಿಷನ್ ಕಾಂಪೌಂಡ್ ಮೈದಾನದಲ್ಲಿ ಮೂರು ದಿನಗಳ ‘ಸಮಾಧಾನ ಮಹೋತ್ಸವ’...

ಉಡುಪಿ | ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ...

ಉಡುಪಿ‌ | ಯುದ್ಧವೇ ಸಾಮ್ರಾಜ್ಯಶಾಹಿಗಳ ವ್ಯಾಪಾರ : ಸುರೇಶ್ ಕಲ್ಲಾಗರ

ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ...

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...