ಧರ್ಮಸ್ಥಳ ಪ್ರಕರಣ | ಎಂಟು ತಿಂಗಳ ಹಿಂದೆ ಸತ್ತ ವ್ಯಕ್ತಿಯ ಅಸ್ಥಿಪಂಜರ ಎಂಬುದು ಸುಳ್ಳು: ಎಸ್‌ಐಟಿ ಅಧಿಕಾರಿಗಳ ಸ್ಪಷ್ಟನೆ

Date:

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ ಸಿಕ್ಕಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ “ಈ ವರದಿ ಸುಳ್ಳು, ಸಿಕ್ಕಿರುವುದು ಹಳೆಯ ಅಸ್ಥಿಪಂಜರ, ಹೊಸದಲ್ಲ” ಎಂದು ಎಸ್ಐಟಿ ಮೂಲಗಳು ಈದಿನ ಡಾಟ್‌ ಕಾಮ್‌ಗೆ ತಿಳಿಸಿದೆ.

ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ ಆರನೇ ಪಾಯಿಂಟ್‌ ಮತ್ತು 11ನೇ ಪಾಯಿಂಟ್‌ನ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. 11ನೇ ಪಾಯಿಂಟ್‌ನ ಸಮೀಪದಲ್ಲಿ ಮರದ ಬುಡದಲ್ಲಿ ಸಂಪೂರ್ಣ ಅಸ್ಥಿಪಂಜರ ಸಿಕ್ಕಿದೆ, ಅದು 8-9 ತಿಂಗಳು ಹಳೆಯದ್ದು ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ ಇದು ಸುಳ್ಳು ಮಾಹಿತಿ. ಈವರೆಗೆ ಸಿಕ್ಕಿರುವುದೆಲ್ಲವೂ ಹಳೆಯ ಅಸ್ಥಿಪಂಜರಗಳು ಎಂದು ಎಸ್‌ಐಟಿ ಮೂಲಗಳು ಈದಿನ ಡಾಟ್‌ ಕಾಮ್‌ಗೆ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆ ನಡೆದ ಕಾರ್ಯಾಚರಣೆ ವೇಳೆ ದೂರುದಾರ 11ನೇ ಪಾಯಿಂಟ್‌ನ ಸಮೀಪದ ಪ್ರದೇಶದಲ್ಲೂ ಅಕ್ರಮವಾಗಿ ಮೃತದೇಹ ಹೂತಿರುವುದಾಗಿ ತಿಳಿಸಿದ್ದಾನೆ. ಹಾಗೆಯೇ ಹೊಸದಾಗಿ ಇನ್ನೂ 17 ಸ್ಥಳಗಳನ್ನು ಗುರುತಿಸಲಾಗಿದ್ದು, ಒಟ್ಟು 30 ಸ್ಥಳಗಳನ್ನು ಗುರುತು ಮಾಡಲಾಗಿದೆ. 11ನೇ ಪಾಯಿಂಟ್ ಸಮೀಪ ಅಸ್ಥಿಪಂಜರದ ಅವಶೇಷವೂ ಪತ್ತೆಯಾಗಿದೆ.

ಈ ಬೆನ್ನಲ್ಲೇ ಟಿವಿ9 ಸೇರಿದಂತೆ ಹಲವು ಮಾಧ್ಯಮಗಳು ದೂರುದಾರ ಹೊಸದಾಗಿ ಗುರುತಿಸಿದ ಸ್ಥಳದಲ್ಲಿ ಮರದ ಬುಡದಲ್ಲಿ 8ರಿಂದ 9 ತಿಂಗಳು ಹಳೆಯ ಅಸ್ಥಿಪಂಜರ ಸಿಕ್ಕಿದೆ. ಸಂಪೂರ್ಣ ಅಸ್ಥಿಪಂಜರ ಸಿಕ್ಕಿದ್ದು, ಅದು ಪುರುಷನದ್ದು ಎಂದು ವರದಿ ಮಾಡಿದೆ. ದೂರುದಾರ 1990-2000ರ ವ್ಯಾಪ್ತಿಯಲ್ಲಿ ಆಗಿರುವ ಪ್ರಕರಣಗಳ ಬಗ್ಗೆ ತಿಳಿಸಿದ್ದಾನೆ. ಆದರೆ ಇದು 8ರಿಂದ 9 ತಿಂಗಳು ಹಳೆಯ ಅಸ್ಥಿಪಂಜರ ಎಂದು ಮಾಧ್ಯಮಗಳು ಹೇಳಿಕೊಂಡಿದೆ.

ಈ ಬಗ್ಗೆ ಎಸ್‌ಐಟಿ ತಂಡವನ್ನು ಈದಿನ ಡಾಟ್‌ ಕಾಮ್ ಸಂಪರ್ಕಿಸಿದ್ದು, “ಇವೆಲ್ಲವೂ ಸುಳ್ಳು ಸುದ್ದಿಗಳು. ನಿನ್ನೆ ಸಿಕ್ಕಿರುವಂತದ್ದು ಹಳೆಯ ಮೃತದೇಹ, ಹೊಸದಲ್ಲ. ಮಾಧ್ಯಮಗಳು ಸುಳ್ಳು ಸುದ್ದಿ ಹರಡುತ್ತಿದ್ದು ಅದನ್ನು ನಂಬಬೇಡಿ” ಎಂದು ಎಸ್‌ಐಟಿ ಮೂಲಗಳು ಈದಿನ ಡಾಟ್‌ ಕಾಮ್‌ಗೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...