ಪತ್ರ | ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣ ಪ್ರಸ್ತಾಪ: ಇದು ಬಡವರ ಕಣ್ಣೀರ ಕತೆ

Date:

ಕರ್ನಾಟಕದ ಜನರು ಓದಲೇಬೇಕಾದ ಕಣ್ಣೀರ ಕತೆ ಇದು. ಸಮಾಜವಾದಿ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತದಲ್ಲೇ ಈ ದುರಂತ ನಡೆಯುತ್ತಿರುವುದು ಎಲ್ಲರಲ್ಲೂ ಹತಾಶೆ ಉಂಟು ಮಾಡಿದೆ. ಈಗಲಾದರೂ ಅವರು ಎಚ್ಚತ್ತುಕೊಂಡು ಈ ಅನ್ಯಾಯ ಸರಿಪಡಿಸುವರೋ ಏನೋ ಎಂಬ ಹಂಬಲ ಎಲ್ಲರದ್ದೂ.

ಬಿಜೆಪಿ ಸರ್ಕಾರದ ಕೊನೆಯ ದಿನಗಳ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ವಿ ಸೋಮಣ್ಣ ಅವರು ಧರ್ಮಸ್ಥಳಕ್ಕೆ ಮಿನಿ ವಿಮಾನ ನಿಲ್ದಾಣ ಮಂಜೂರು ಮಾಡಿದರು. ಧರ್ಮಸ್ಥಳಕ್ಕೆ ವಿಮಾನದಲ್ಲಿ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆ. ಆದರೂ ಯಾರು ವಿರೋಧ ವ್ಯಕ್ತಪಡಿಸಲಿಲ್ಲ.

ಈಗ ಈ ವಿಮಾನ ನಿಲ್ದಾಣದ ಹೆಸರಿನಲ್ಲಿ ನಡೆಯುತ್ತಿರುವುದು ಮಾತ್ರ ಹಗಲು ದರೋಡೆ. ಧಮಸ್ಥಳದ ಬಳಿ ನಿರ್ಮಾಣವಾಗಬೇಕಿದ್ದ ಈ ಮಿನಿ ವಿಮಾನ ನಿಲ್ದಾಣವನ್ನು ಸುಮಾರು ಐದು ಕಿಲೋ ಮೀಟರ್ ದೂರದಲ್ಲಿ ನಿರ್ಮಿಸಲು ಅಧಿಕಾರಿಗಳು, ರಾಜಕಾರಣಿಗಳು ಸ್ಕೆಚ್ ಹಾಕಿದ್ದಾರೆ. ಸರ್ವೇ ಕೂಡಾ ಆರಂಭವಾಗಿದೆ. ಬಡವರು, ನಿರ್ಗತಿಕರ ಮನೆಗಳನ್ನೆಲ್ಲ ಆಪೋಶನ ತೆಗೆದುಕೊಂಡು ಉಳ್ಳವರ ಜಮೀನಿನ ಬೆಲೆ ಇನ್ನಷ್ಟು ಗಗನಮುಖಿಯಾಗುವಂತೆ ಮಾಡುವ ರೀತಿಯಲ್ಲೇ ಇದರ ರೂಪುರೇಷೆ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಒಂದು ಪ್ರಾಜೆಕ್ಟ್ ಆರಂಭಕ್ಕೆ ಮುನ್ನ ಒಂದು ಕಾರ್ಯಸಾಧ್ಯತಾ ಸಮೀಕ್ಷೆ ನಡೆಸಲೇಬೇಕು. ಅದನ್ನು ಇಲ್ಲಿ ನಡೆಸಲಾಗಿಲ್ಲ. ಸರ್ಕಾರ 200 ಕೋಟಿ ರೂ. ಹಣ ವ್ಯಯಯಿಸುತ್ತಿದೆ. ಅದರ ಲಾಭ ಯಾರಿಗೆ? ಇದನ್ನೆಲ್ಲ ಯೋಚಿಸದೆ, ಸರ್ಕಾರ ಈಗ ಬಡವರ ಹೊಟ್ಟೆಯ ಮೇಲೆ ಹೊಡೆಯಲು ಮುಂದಾಗಿರುವುದು ಎಷ್ಟು ಸರಿ?

ಮಿನಿ ವಿಮಾನ ನಿಲ್ದಾಣ ಅಗತ್ಯವಿದ್ದರೆ, ಧರ್ಮಸ್ಥಳದ ಪಕ್ಕದಲ್ಲೇ ಸರ್ಕಾರಿ ಜಮೀನಿನಲ್ಲೇ ಅದನ್ನು ನಿರ್ಮಿಸಬಹುದು. ಅದರ ಬದಲಿಗೆ ಯಾವುದೊ ಒಂದು ಮೂಲೆಯಲ್ಲಿ ಅದನ್ನು ನಿರ್ಮಿಸುವ ಹುನ್ನಾರ ಏನು? ಅದರ ಅಂತಿಮ ಲಾಭ ಯಾರಿಗೆ? ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರವಿದೆಯೇ?

ಈಗ ಈ ವಿಮಾನ ನಿಲ್ದಾಣವನ್ನು ಸುಮಾರು ಐದು ಕಿಲೋಮೀಟರ್ ದೂರದ ಕನ್ಯಾಡಿ ಎಂಬಲ್ಲಿ ನಿರ್ಮಿಸಲಾಗುತ್ತಿದೆ. ಅಲ್ಲಿರುವವರೆಲ್ಲರೂ ಬಡವರು. ಅವರು ಖಂಡಿತಾ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಸಾಮರ್ಥ್ಯ ಹೊಂದಿಲ್ಲ. ಇದನ್ನು ಅರಿತುಕೊಂಡೆ ಈಗ ಎಲ್ಲರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ.

ಧರ್ಮಸ್ಥಳದ ಭಕ್ತರಿಗೆ ಈಗ ಬೇಕಿರುವುದು ಅಲ್ಲಿಗೆ ನೇರ ರೈಲು ಸಂಪರ್ಕ. ಅದನ್ನು ಬಿಟ್ಟು ಈ ವಿಮಾನ ನಿಲ್ದಾಣ ಅಗತ್ಯವಿದೆಯೇ? ಈ ಬಗ್ಗೆ ಕರ್ನಾಟಕ ಸರ್ಕಾರ ಮೌನ ಮುರಿಯುವುದೇ?

– ಸೌಗಂಧಿನಿ ಬಹುಜನ
ಕ್ರಾಂತಿ ನೀರ ಚಿಲುಮೆ
ಉಜಿರೆ, ಬೆಳ್ತಂಗಡಿ ತಾಲೂಕು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...