ವಿದ್ಯಾಭ್ಯಾಸ ಎಂದರೆ ಕೇವಲ ಪುಸ್ತಕ ಓದುವುದಲ್ಲ; ಸುತ್ತಲಿನ ಆಗುಹೋಗು ಅರಿಯುವುದು: ಪ್ರೊ. ನಿತ್ಯಾನಂದ ಶೆಟ್ಟಿ

Date:

ವಿದ್ಯಾಭ್ಯಾಸ ಎಂದರೆ ಕೇವಲ ಪುಸ್ತಕದ ಓದುವುದಲ್ಲ; ಬದಲಾಗಿ ನಮ್ಮ ಸುತ್ತಮುತ್ತ ನಡೆಯುತ್ತಿರುವ ಪ್ರತಿಯೊಂದು ಘಟನೆಯಲ್ಲೂ ಅಡಗಿಕೊಂಡಿರುವ ರಾಜಕೀಯವನ್ನು ಅರಿಯುವ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು. ಆಗ ಮಾತ್ರ ಓದು ಅರ್ಥವತ್ತಾಗುತ್ತದೆ ಎಂದು ಇತಿಹಾಸ ತಜ್ಞ, ಸಾಹಿತಿ, ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊಫೆಸರ್ ನಿತ್ಯಾನಂದ ಬಿ ಶೆಟ್ಟಿ ಅಭಿಪ್ರಾಯಪಟ್ಟರು.

ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದಲ್ಲಿ ಕನ್ನಡ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ‘ಸಮಕಾಲೀನ ವಿದ್ಯಮಾನಗಳು ಮತ್ತು ಯುವಜನತೆ’ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಭಗವದ್ಗೀತೆ, ಬೈಬಲ್, ಕುರ್ಆನ್ ಇತ್ಯಾದಿ ಧರ್ಮ ಗ್ರಂಥಗಳನ್ನು ಎಷ್ಟು ನಿಷ್ಠೆಯಿಂದ ಓದುತ್ತೇವೆಯೋ, ಅದೇ ನಿಷ್ಠೆಯೊಂದಿಗೆ ದೇಶದ ಸಂವಿಧಾನವನ್ನು ಅರ್ಥ ಮಾಡಿಕೊಂಡಾಗ ನಮ್ಮೆಲ್ಲರ ಬದುಕು ಅತ್ಯಂತ ಸ್ಪಷ್ಟವಾದ ಸಾಮರಸ್ಯ ಹೊಂದಿದ ಬದುಕಾಗುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದ ಒಲವನ್ನು ಲೋಕಜ್ಞಾನದ ಪುಸ್ತಕಗಳನ್ನು ಓದುವ ಮೂಲಕ ಬೆಳೆಸಿಕೊಳ್ಳಬೇಕು” ಎಂದು ಪ್ರೇರೇಪಿಸಿದರು.
ತದನಂತರ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಾಯಿತು. ವಿಚಾರ ಶಕ್ತಿಯೇ ಮನುಷ್ಯನ ನಿಜವಾದ ಆಸ್ತಿ ಎಂಬುದನ್ನು ಈ ಉಪನ್ಯಾಸ ಕಾರ್ಯಕ್ರಮ ಸಾಬೀತುಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿಂದು ಜಾಗರಣ ವೇದಿಕೆ ನಾಯಕ ಸಮಿತ್ ವಿರುದ್ಧ ಎಫ್‌ಐಆರ್

ಇತ್ತೀಚೆಗೆ ಬಿಡುಗಡೆಗೊಂಡ ಶೆಟ್ಟಿ ಅವರು ʼಅಳವು ಅರಿಯದ ಭಾಷೆ- ಕಲೆ, ಸಮಾಜ,ಇತಿಹಾಸʼ ಎಂಬ ಬೃಹತ್ ಅಧ್ಯಯನಾತ್ಮಕ ಕೃತಿಯನ್ನು ಕಾಲೇಜು ಲೈಬ್ರರಿಗೆ ಉಡುಗೊರೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಯಾಸಿನ್ ಬೇಗ್, ಖಜಾಂಜಿ ಹೈದರ್ ಅಲಿ, ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತ ಬಿ ಡಿ , ಕನ್ನಡ ಸಂಘದ ಪದಾಧಿಕಾರಿ ರೇಷ್ಮಾ, ತುಮಕೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಗಳಾದ ಅಮರ್ ಮತ್ತು ಧನುಷ್, ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...