ಈದ್ ಮಿಲಾದ್ | ಮೀನುಗಾರರಿಗೆ ರಜೆ ಬ್ಯಾನರ್; ಖಂಡನೆ-ಸ್ಪಷ್ಟನೆ

Date:

ಈದ್ ಮಿಲಾದ್ ಹಬ್ಬ ಆಚರಿಸುವ ಉದ್ದೇಶಕ್ಕಾಗಿ ಮೀನುಗಾರರು ಸೆ.28ರಂದು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕೆಂಬ ಬ್ಯಾನರ್‌ಅನ್ನು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಲಾಗಿದೆ.

ಹಸಿ ಮೀನು ವ್ಯಾಪಾರಸ್ಥರ ಸಂಘವು ಬ್ಯಾನರ್ ಅಳವಡಿಸಿದ್ದು, ಬ್ಯಾನರ್ ಹಾಕಿರುವುದರ ವಿರುದ್ಧ ಆಕ್ಷೇಪಗಳು ವ್ಯಕ್ತವಾಗಿವೆ. ಆದರೆ, ಬ್ಯಾನರ್ ಅಳವಡಿಕೆಯ ಹಿಂದಿನ ಉದ್ದೇಶವನ್ನು ಸಂಘವು ಸ್ಪಷ್ಟಪಡಿಸಿದೆ.

ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಿರುವ ಬ್ಯಾನರ್‌ನಲ್ಲಿ, “ವ್ಯಾಪಾರಸ್ಥರ ಸಂಘದ ನಿರ್ಧಾರದಂತೆ ಸೆ.28ರಂದು ಮುಂಜಾನೆ 3:45ರ ನಂತರ ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕು. ರಜೆ ಮಾಡದೇ ಕಾನೂನು ಉಲ್ಲಂಘಿಸಿದರೆ, ದಕ್ಕೆಯಲ್ಲಿ ಒಂದು ತಿಂಗಳು ವ್ಯಾಪಾರ ಮಾಡದಂತೆ ಸಂಘವು ಕ್ರಮಕೈಗೊಳ್ಳುತ್ತದೆ ಮತ್ತು ದಂಡನೆ ವಿಧಿಸುತ್ತದೆ” ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾನರ್ ಅಳವಡಿಕೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್, “ಧಕ್ಕೆಯಲ್ಲಿ ದಂಡನೆ ವಿಧಿಸಲು ಷರಿಯ ಕಾನೂನು ಜಾರಿಯಲ್ಲಿದೆಯೇ? ಇವರ ಬೆದರಿಕೆ ತಂತ್ರಗಳಿಗೆ ಹಿಂದೂ ಮೀನುಗಾರರು ಮಣಿಯಬಾರದು. ನಿಮ್ಮ ಜೊತೆ ಇಡೀ ಹಿಂದೂ ಸಮಾಜ ಇದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಹಿಂದುತ್ವ ಕೋಮು ರಾಜಕೀಯಕ್ಕೆ ಯತ್ನಿಸಿದ್ದಾರೆ.

ಆದರೆ, ಬ್ಯಾನರ್ ಅಳವಡಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ಮೀನುಗಾರರ ಸಂಘ, “ಹಸಿ ಮೀನು ವ್ಯಾಪಾರಸ್ಥರ ಸಂಘದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಮಂಗಳೂರು ದಕ್ಕೆಯಲ್ಲಿ ವರ್ಷದಲ್ಲಿ ಒಟ್ಟು 9 ದಿನ ರಜೆಯಿರುತ್ತದೆ. ಅದರಲ್ಲಿ, ಹಿಂದುಗಳ ಹಬ್ಬಕ್ಕೆ 4 ದಿನ, ಮುಸ್ಲಿಮರ ಹಬ್ಬಕ್ಕೆ 3 ದಿನ, ಕ್ರೈಸ್ತರ ಹಬ್ಬಕ್ಕೆ ಎರಡು ದಿನದಂತೆ ರಜೆಯನ್ನು ಹಂಚಲಾಗಿದೆ. ಮೊನ್ನೆ ಚೌತಿಯ (ಗಣೇಶ ಹಬ್ಬ) ದಿನ ರಜೆ ಇತ್ತು. ಆದ್ರೆ ಪರ್ಸಿನ್ ಬೋಟ್‌ಗಳು ನಿಯಮವನ್ನು ಮೀರಿ ವ್ಯಾಪಾರವನ್ನು ಮುಂದುವರೆಸಿದ್ದರು. ಹೀಗಾಗಿ, ರಜೆಯ ರಜೆ ತೆಗೆದುಕೊಳ್ಳಲೇಬೇಕೆಂದು ಬ್ಯಾನರ್ ಅಳವಡಿಸಬೇಕಾಯಿತು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...