ಆಳ ಸಮುದ್ರದಲ್ಲೂ ಸಿಗುತ್ತಿಲ್ಲ ಮೀನುಗಳು; ಬಂದರ್‌ನಲ್ಲೇ ಲಂಗರು ಹಾಕಿವೆ ಬೋಟ್‌ಗಳು

Date:

ಚಳಿಗಾಲದಲ್ಲಿ ಮೀನುಗಾರಿಕೆಯಲ್ಲಿ ತೊಡಗಬೇಕಿದ್ದ ಬೋಟ್‌ಗಳು ಕಡಲ ತೀರದಲ್ಲೇ ನಿಂತಿವೆ. ಮೀನು ಹಿಡಿಯುವ ಕಾಯಕದಲ್ಲಿ ತೊಡಗಬೇಕಿದ್ದ ಮೀನುಗಾರರು ಬೋಟ್‌ಗಳು ಮತ್ತು ಬಲೆಗಳ ರಿಪೇರಿ ಕೆಲಸ ಮಾಡುತ್ತಾ ಕುಳಿತಿದ್ದಾರೆ. ಸಮುದ್ರದಲ್ಲಿ ಹೆಚ್ಚಾಗಿ ಮೀನುಗಳು ಸಿಗದ ಕಾರಣ, ಮೀನುಗಾರಿಕೆ ಕುಂಟಿತಗೊಂಡಿದೆ ಎಂದು ಹೇಳಲಾಗಿದೆ.

ಸರ್ಕಾರದ ಆದೇಶದಂತೆ ಆಗಸ್ಟ್‌ 1ರಿಂದ ಮೀನುಗಾರಿಕೆ ಆರಂಭವಾಗುತ್ತದೆ. ಪ್ರತಿವರ್ಷ ಜೂನ್ 1ರಿಂದ ಜುಲೈ 30ರವರೆಗೆ ಎರಡು ತಿಂಗಳುಗಳ ಕಾಲ ಮೀನುಗಾರಿಕೆಗೆ ನಿರ್ಬಂಧವಿರುತ್ತದೆ. ಮೀನುಗಳು ಮೊಟ್ಟೆ ಇಟ್ಟು, ಮರಿ ಮಾಡುವ ಕಾರಣದಿಂದಾಗಿ ಆ ಅವಧಿಯಲ್ಲಿ ಮೀನುಗಾರಿಕೆ ಮಾಡಿದರೆ, ಮೀನುಗಳ ಸಂತತಿ ವೃದ್ಧಿಯಾಗುವುದಿಲ್ಲ ಎಂಬ ಕಾರಣಕ್ಕೆ ನಿರ್ಬಂಧ ಹೇರಲಾಗಿರುತ್ತದೆ. ಇಳಿದಂತೆ ಆಗಸ್ಟ್‌ 1ರಿಂದ ಮೇ 31ರವರೆಗೆ ಮೀನುಗಾರಿಕೆ ಅವಕಾಶ ಇರುತ್ತದೆ. ಮೀನುಗಾರರು ಸಮುದ್ರದಲ್ಲಿ ಮೀನು ಹಿಡಿಯುವಲ್ಲಿ ತೊಡಗುತ್ತಾರೆ.

ಆದರೆ, ಈ ಬಾರಿ, ಮೀನುಗಾರಿಕೆ ಆರಂಭವಾಗಿ ನಾಲ್ಕು ತಿಂಗಳು ಕಳೆದಿಲ್ಲ. ಆಗಲೇ, ಮೀನುಗಾರಿಕಾ ಬೊಟ್‌ಗಳು ಬಂದರಿನಲ್ಲಿ ಲಂಗರು ಹಾಕುತ್ತಿವೆ. 30 ನಾಟಿಕಲ್ ಮೈಲ್‌ಗಳ ಆಳ ಸಮುದ್ರಕ್ಕೆ ಹೋದರೂ ಕೂಡ ಮೀನುಗಳು ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಮೀನುಗಾರರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಳ ಸಮುದ್ರದಲ್ಲಿ ಒಮ್ಮೆ ಮೀನುಗಾರಿಕೆಗೆ ತೆರಳಲು 40-50 ಸಾವಿರ ರೂ. ವೆಚ್ಚವಾಗುತ್ತದೆ. ಆದರೆ, ಆದ ವೆಚ್ಚ ಹಿಂದಿರುಗುವಷ್ಟು ಮೀನುಗಳು ಸಿಗುತ್ತಿಲ್ಲ. ಹಾಕಿದ ಬಂಡವಾಳದ ಅರ್ಧದಷ್ಟು ಮಾತ್ರವೇ ಹಣ ದೊರೆಯುತ್ತಿದೆ. ಮೀನುಗಾರಿಕೆಯಲ್ಲಿ ನಷ್ಟ ಎದುರಾಗಿದೆ” ಎಂದು ಮೀನುಗಾರರು ಹೇಳುತ್ತಿದ್ದಾರೆ.

“ಪ್ರತಿವರ್ಷವೂ ಆಳ ಸಮುದ್ರದಲ್ಲಿ ತರಹೇವಾರಿ ಮೀನುಗಳು ಸಿಗುತ್ತಿದ್ದವು. ಹಾಕಿದ್ದ ಬಂಡವಾಳಕ್ಕಿಂತ ಹೆಚ್ಚಿನ ಆದಾಯ ಸಿಗುತ್ತಿತ್ತು. ಜೀವನವೂ ಉತ್ತಮವಾಗಿ ನಡೆಯುತ್ತಿತ್ತು. ಆದರೆ, ಈ ಬಾರಿ, 40 ಸಾವಿರ ರೂ. ಬಂಡವಾಳ ಹಾಕಿ ಮೀನುಗಾರಿಕೆ ಹೋದರೆ, 15-20 ಸಾವಿರ ರೂ.ಗಳಷ್ಟು ಮೌಲ್ಯದ ಮೀನುಗಳು ದೊರೆಯುತ್ತಿವೆ. ಬೋಟ್‌ಗಳಿಗೆ ಹಾಕಿದ ಡೀಸೆಲ್‌ ಹಣವೂ ವಾಪಸ್‌ ಬರುತ್ತಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...