ಹಿಂದೂ ದಂಪತಿ 3ಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು- ದೀಪಾವಳಿ ಕಾರ್ಯಕ್ರಮದಲ್ಲೂ ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಭಟ್

Date:

“ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಜನಪ್ರತಿನಿಧಿಗಳು ಆಯ್ಕೆಯಾಗುವುದು ಜನಗಳ ವೋಟಿನ ಆಧಾರದ ಮೇಲೆ. ಹಾಗಾಗಿ, ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಹಿಂದೂಗಳ ಮನೆಯಲ್ಲಿ ವೋಟಿನ ಸಂಖ್ಯೆ ಕಡಿಮೆ ಆಗಬಾರದು. ಈ ಬಗ್ಗೆ ಹಿಂದೂ ದಂಪತಿಗಳು ನಿರ್ಣಯ ಮಾಡಿಕೊಳ್ಳಬೇಕು” ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಈ ಹೇಳಿಕೆ ನೀಡಿದ್ದಾರೆ.

ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಪ್ರತಿನಿಧಿಸುವ ಮಂಗಳೂರು(ಉಳ್ಳಾಲ) ಕ್ಷೇತ್ರದ ಬಗ್ಗೆ ಮಾತನಾಡಿದ ಪ್ರಭಾಕರ್ ಭಟ್, “ಉಳ್ಳಾಲದಲ್ಲಿ ಹಿಂದೂ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಯಾಕೆಂದರೆ ಅಲ್ಲಿನ ಬ್ಯಾರಿ(ಕರಾವಳಿಯ ಮುಸ್ಲಿಮರು)ಗಳ ಮನೆಯಲ್ಲಿ ಆರರಿಂದ ಏಳು ಮಕ್ಕಳಿದ್ದಾರೆ. ಅಲ್ಲಾನ ಹೆಸರಿನಲ್ಲಿ ಅವರು ಮಕ್ಕಳು ಮಾಡುತ್ತಲೇ ಇದ್ದಾರೆ. ಹಿಂದೂಗಳಲ್ಲಿ ವೋಟಿಲ್ಲದ ಕಾರಣ ನಮ್ಮವರು ಸೋಲುತ್ತಿದ್ದಾರೆ. ಉಳ್ಳಾಲದಲ್ಲಿ ಕೇವಲ 90 ಸಾವಿರ ಹಿಂದೂಗಳ ವೋಟಿದೆ. ಆದರೆ, ಒಂದು ಲಕ್ಷದ 10 ಸಾವಿರ ಬ್ಯಾರಿಗಳೇ ಇದ್ದಾರೆ. ಹಾಗಾಗಿ, ಖಾದರ್ ಗೆಲ್ಲುತ್ತಲೇ ಇದ್ದಾರೆ. ಹಾಗಾಗಿ, ಹಿಂದೂಗಳು ಮಕ್ಕಳು ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೂಗಳನ್ನು ವ್ಯವಸ್ಥಿತವಾಗಿ ನಿರ್ನಾಮ ಮಾಡುವ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಹಿಂದೂ ದಂಪತಿಗಳು ಮದುವೆಯಾಗಿ ಏಳೆಂಟು ವರ್ಷವಾದರೂ ಮಕ್ಕಳನ್ನು ಹೆರುವುದಿಲ್ಲ. ಹಿಂದೂ ಸಮಾಜ ಉಳಿಯಬೇಕೂಂತಾದರೆ ಹಿಂದೂಗಳು ಮಕ್ಕಳು ಮಾಡುವುದಕ್ಕೆ ಹಿಂದೆ-ಮುಂದೆ ಯೋಚಿಸಬಾರದು. ಹಿಂದೂಗಳ ಸಂಖ್ಯೆ ಹೆಚ್ಚಾಗಬೇಕಾದರೆ ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು. ಹಿಂದೂಗಳ ಸಂಖ್ಯೆ ಉಳಿಯಬೇಕಾದರೆ ಹಿಂದೂ ಹೆಣ್ಣು ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಇದನ್ನು ನಿರ್ಣಯವಾಗಿ ಮಾಡಿಕೊಂಡು, ಬ್ಯಾರ್ದಿಗಳಿಗಿಂತ ಹೆಚ್ಚು ಮಕ್ಕಳನ್ನು ಹೆರಬೇಕು. ಇದೆಲ್ಲವನ್ನೂ ಯೋಜನೆ ಹಾಕಿಕೊಂಡು ಹಿಂದೂಗಳು ಬದುಕಬೇಕಾದ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.

RSS ನಿಷೇಧಕ್ಕೆ ನಿಮ್ಮ ಸಹಮತವಿದೆಯೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...