ಭಾರತದಲ್ಲಿ ವೇದಗಳ ಕಾಲದಿಂದಲೂ ‘ಗಂಡು-ಹೆಣ್ಣು’ ಎಂಬ ಭೇದ ಇರಲಿಲ್ಲ: ಮಾಳವಿಕಾ

Date:

ವೇದಗಳ ಕಾಲದಿಂದಲೂ ಭಾರತೀಯ ಚಿಂತನೆಯಲ್ಲಿ ಗಂಡು-ಹೆಣ್ಣು ಎಂಬ ಭೇದ ಭಾವ ಇರಲಿಲ್ಲ. ವಿದೇಶಿಯರ ಆಕ್ರಮಣ ಮತ್ತು ಶೋಷಣೆಯ ಭಯದಿಂದ ಮಹಿಳೆ ಹಿಂದಕ್ಕೆ ಸರಿದಿದ್ದಾಳೆ ಎಂದು ನಟಿ, ಬಿಜೆಪಿ ಮುಖಂಡೆ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿ ಆಯೋಜಿಸಿದ್ದ ‘ನಾರಿ ಶಕ್ತಿ ಸಂಗಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವಿದೇಶಿಯರ ಆಕ್ರಮಣ ಮತ್ತು ಶೋಷಣೆಯಿಂದ ತಪ್ಪಿಸಿಕೊಳ್ಳಲು ಆತ್ಮಾಹುತಿಯಂತಹ ಭಯಾನಕ ಕೃತ್ಯಕ್ಕೆ ಮಹಿಳೆ ತುತ್ತಾಗಿದ್ದರು. ಹಿಂದು ಧರ್ಮದಲ್ಲಿ ಮಹಿಳೆಯರು ಪುರುಷರಂತೆ ಇರುವ ಅಗತ್ಯವಿಲ್ಲ” ಎಂದರು.

“ಹಿಂದು ಧರ್ಮವನ್ನು ಬೇರೆಯವರು ಸುಧಾರಣೆ ಮಾಡಿಲ್ಲ. ಧರ್ಮದ ಒಳಗಿನ ಹಲವರು ಸಮಾಜದಲ್ಲಿ ಸುಧಾರಣೆಗಳನ್ನು ಮಾಡಿದ್ದಾರೆ. ಲಿಂಗ ತಾರತಮ್ಯವೇ ಇಲ್ಲದ ಸಮಾನತೆಯಿಂದ ಬದುಕುವುದು ಹಿಂದು ಧರ್ಮದ ತಿರುಳಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...