ದಕ್ಷಿಣ ಕನ್ನಡ | ಮುಲ್ಕಿಯಲ್ಲಿ ನಡೆಯಲಿದೆ ಭಾರತದ ಮೊದಲ ಎಸ್‌ಯುಪಿ ರೇಸ್ ಕ್ಲಿನಿಕ್

Date:

ಮಂಗಳೂರು ಬಳಿಯ ಮುಲ್ಕಿಯಲ್ಲಿ ಭಾರತದ ಮೊದಲ ವೃತ್ತಿಪರ ಸ್ಟ್ಯಾಂಡ್-ಅಪ್ ಪ್ಯಾಡಲ್ಬೋರ್ಡಿಂಗ್ (ಎಸ್‌ಯುಪಿ) ರೇಸ್ ಕ್ಲಿನಿಕ್ಅನ್ನು ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸುತ್ತಿದೆ. ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ರೇಸ್ ಕ್ಲಿನಿಕ್ ನಡೆಯಲಿದೆ ಎಂದು ಫೌಂಡೇಶನ್ ತಿಳಿಸಿದೆ.

ಸರ್ಫಿಂಗ್ ಸ್ವಾಮಿ ಫೌಂಡೇಶನ್‌ನ ನಿರ್ದೇಶಕ ರಾಮಮೋಹನ್ ಪರಾಂಜಪೆ ಮಾತನಾಡಿ, “ರೇಸ್‌ ಕ್ಲಿನಿಕ್ ಆಯೋಜನೆಯ ಉದ್ದೇಶವು ಭಾರತದಲ್ಲಿ ಹರ್ಷದಾಯಕ ಮತ್ತು ಸುಲಭದ ಜಲ ಕ್ರೀಡೆಯಾಗಿ ಎಸ್‌ಯುಪಿಯ ಸಾಮರ್ಥ್ಯವನ್ನು ಅನ್ವೇಷಿಸುವುದಾಗಿದೆ” ಎಂದು ತಿಳಿಸಿದ್ದಾರೆ.

“ಸರ್ಫಿಂಗ್‌ನಿಂದ ಹುಟ್ಟಿಕೊಂಡ ಎಸ್‌ಯುಪಿ, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಲ ಕ್ರೀಡೆಗಳಲ್ಲಿ ಒಂದಾಗಿದೆ. ಅಲೆಗಳ ಮೇಲೆ ಅವಲಂಬಿತವಾಗಿರುವ ಸಾಂಪ್ರದಾಯಿಕ ಸರ್ಫಿಂಗ್‌ಗಿಂತ ಭಿನ್ನವಾಗಿ, ವಿವಿಧ ಜಲಮೂಲಗಳ ಮೇಲೆ ಪ್ಯಾಡಲ್ ಮಾಡಲು ಎಸ್‌ಯುಪಿ ಉತ್ಸಾಹಿಗಳಿಗೆ ಇದು ಅವಕಾಶ ಮಾಡಿಕೊಡುತ್ತದೆ. ಎಸ್‌ಯುಪಿ ಮುಂದಿನ 8-10 ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಸೇರುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದಲ್ಲಿ, ವಿಶೇಷವಾಗಿ ಕೇರಳ, ಕರ್ನಾಟಕ, ಗೋವಾ ಮತ್ತು ಪೂರ್ವ ಕರಾವಳಿಯಂತಹ ಪ್ರದೇಶಗಳಲ್ಲಿ ಕ್ರೀಡೆಯು ವೇಗವನ್ನು ಪಡೆಯುತ್ತಿದೆ. ಭಾರತವು ಸ್ಪರ್ಧಾತ್ಮಕ ಎಸ್‌ಯುಪಿ ರೇಸರ್‌ಗಳ ಸಮೂಹವನ್ನು ಹೊಂದಿದೆ”ಎಂದು ಅವರು ಹೇಳಿದ್ದಾರೆ.

“ಎಸ್‌ಯುಪಿ ರೇಸ್ ಕ್ಲಿನಿಕ್ ಕೇವಲ 12 ಸ್ಲಾಟ್‌ಗಳನ್ನು ಹೊಂದಿರಲಿದೆ. ಮಧ್ಯಂತರ ಮತ್ತು ಮುಂದುವರಿದ ಪ್ಯಾಡ್ಲರ್‌ಗಳು ಮತ್ತು ಕ್ರೀಡಾಪಟುಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ಭಾಗವಹಿಸುವವರಿಗೆ ತಜ್ಞರ ಮಾರ್ಗದರ್ಶನ, ಪರಿಸರ ಪ್ರಜ್ಞೆಗೆ ಬದ್ಧತೆ ಮತ್ತು ಇತ್ತೀಚಿನ ಅತ್ಯಾಧುನಿಕ ಉಪಕರಣಗಳೊಂದಿಗೆ ಅಲೆಗಳನ್ನು ನ್ಯಾವಿಗೇಟ್ ಮಾಡುವ ಅನುಭವ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...