ಜೈಪುರ್-ಮುಂಬಯಿ ಎಕ್ಸ್‌ಪ್ರೆಸ್‌ನಲ್ಲಿ ನಡೆದ ಘಟನೆಗೆ ದ್ವೇಷ ರಾಜಕಾರಣವೇ ಕಾರಣ: ವೆಲ್ಫೇರ್ ಪಾರ್ಟಿ

Date:

ಸೋಮವಾರ ಜೈಪುರದಿಂದ ಮುಂಬೈಗೆ ಹೋಗುವ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ನೌಕರನೊಬ್ಬ ನಾಲ್ವರು ಅಮಾಯಕರನ್ನು ಗುಂಡು ಹಾರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಿಯ. ಇಂತಹ ಕೃತ್ಯಗಳಿಗೆ ದೇಶದಲ್ಲಿ ಹರಡುತ್ತಿರುವ ದ್ವೇಷ ರಾಜಕಾರಣವೇ ಕಾರಣ ಎಂದು ವೆಲ್ಫೇರ್ ಪಾರ್ಟಿ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ, ಅಡ್ವೋಕೇಟ್ ತಾಹೇರ್ ಹುಸೇನ್ ಆರೋಪಿಸಿದ್ದಾರೆ.

ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಅಧಿಕಾರದ ಅಸೆಗೆ ಜನರ ಮಧ್ಯ ದ್ವೇಷ ಹರಡುವ ಕೆಲಸ ಬಹಳ ವೇಗದಿಂದ ನಡೆಯುತ್ತಿವೆ. ರಾಜಕೀಯ ಪಕ್ಷಗಳು ಅದರಲ್ಲೂ ಬಿಜೆಪಿ ಸುಳ್ಳು ಸುದ್ದಿಗಳು ಮತ್ತು ಪರಸ್ಪರ ದ್ವೇಷ ಹುಟ್ಟಿಸುವ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮುಖಾಂತರ ವ್ಯಾಪಾಕವಾಗಿ ಹಬ್ಬಿಸುತ್ತಿದೆ. ಅದರಿಂದ ಪ್ರಚೋದಿತರಾದ ಕೆಲ ಗುಂಪುಗಳು ದ್ವೇಷದ ಅಮಲಿನಲ್ಲಿ ಅಮಾಯಕರನ್ನು ಹತ್ಯೆ ಮಾಡುವುದನ್ನು ರೂಢಿ ಮಾಡಿಕೊಂಡಿವೆ. ಮಣಿಪುರ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳಲ್ಲಿ ಇದೇ ದ್ವೇಷದ ಪರಿಣಾಮ ಗಲಭೆಗಳು ನಡೆಯುತ್ತಲೇ ಇವೆ. ಒಂದೇ ಕೋಮಿನ ಜನರನ್ನು ಗುರಿಯಾಗಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ದೇಶದಲ್ಲಿ ಇಷ್ಟೆಲ್ಲ ಅನಾಹುತಗಳು ನಡೆಯುತ್ತಿದ್ದರೂ, ಪ್ರಧಾನಿ ಮಾತ್ರ ತನ್ನ ಮೌನ ಮುರಿಯುತ್ತಿಲ್ಲ. ಇದರಿಂದ ದ್ವೇಷ ಹರಡಿಸುವವರಿಗೆ ಇನ್ನಷ್ಟು ಧೈರ್ಯ ಬಂದಹಾಗೆ ಕಾಣುತ್ತಿದೆ” ಎಂದು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಮವಾರ ಜೈಪುರ-ಮುಂಬೈ ಎಕ್ಸ್‌ಪ್ರೆಸ್‌ನಲ್ಲಿ ನಡೆದ ಘಟನೆಯಲ್ಲಿ ಜನರ ಸುರಕ್ಷತೆಯ ಹೊಣೆಗಾರಿಕೆ ಹೊತ್ತಿರುವ ಒಬ್ಬ ಪೊಲೀಸ್‌ ಪೇದೆ, ಒಂದು ಸಮುದಾಯಕ್ಕೆ ಸೇರಿದವರನ್ನು ಹುಡುಕಿ ಕೊಂದಿರುವುದು ಅಪಾಯಕಾರಿ ಬೆಳವಣಿಗೆ. ‘ದೇಶದಲ್ಲಿ ಇರಬೇಕಾದರೆ ಮೋದಿ ಮತ್ತು ಯೋಗಿಗೆ ಮತ ಹಾಕಬೇಕು’ ಎಂದು ಆ ಪೇದೆ ಧಮ್ಕಿ ಹಾಕುತ್ತಾ, ಕೊಲೆ ಮಾಡಿದ್ದಾನೆ. ಇದು ದ್ವೇಷ ರಾಜಕಾರಣವನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...