ದಕ್ಷಿಣ ಕನ್ನಡ | ಐಟಿಡಿಪಿ ಇಲಾಖೆಯ ಧೋರಣೆ ಖಂಡಿಸಿ ಕೊರಗ ಸಮುದಾಯದ ಪ್ರತಿಭಟನೆ

Date:

ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಬೇಕಿದ್ದ ಐಟಿಡಿಪಿ ಇಲಾಖೆಯು ಜನ ವಿರೋಧಿ ಧೋರಣೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿ ಆದಿವಾಸಿ ಕೊರಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಟಿಐಡಿಪಿ) ಕಚೇರಿಯ ಎದುರು ‘ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ’ ನೇತೃತ್ವದಲ್ಲಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. “ವಸತಿ ಯೋಜನೆಯ ಫಲಾನುಭವಿಗಳಿಗೆ ಕಳೆದ 8 ತಿಂಗಳಿನಿಂದ ಸಹಾಯಧನದ ಕಂತು ಬಿಡುಗಡೆ ಮಾಡಿಲ್ಲ. ಕೇಳಿದರೂ ಸತಾಯಿಸುತ್ತಿದ್ದಾರೆ” ಎಂದು ಸಿಐಟಿಯು ಮುಖಂಡ ಸುನೀಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದರ ಡಿವೈಎಫ್‌ಯ ಜಿಲ್ಲಾಧ್ಯಕ್ಷ ಜಿ.ಕೆ.ಇಮ್ತಿಯಾಜ್, “ಅತ್ಯಂತ ಶೋಷಿತ ಸಮುದಾಯವಾದ ಕೊರಗರ ಬದುಕನ್ನು ಉತ್ತಮ ಪಡಿಸಲು ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೆಕು. ಆದರೆ, ಸಮುದಾಯದ ಹಕ್ಕನ್ನು ಕಸಿಕೊಳ್ಳುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಿವಾಸಿ ಹಕ್ಕುಗಳ ಸಮಿತಿಯ ಯೋಗೀಶ್ ಜಪ್ಪಿನಮೊಗರು ಮಾತನಾಡಿ, “ಕೆರೆಕಾಡು ಪ್ರದೇಶದ ಕೊರಗ ಸಮುದಾಯದ ಮನೆ ನಿರ್ಮಾಣಕ್ಕೆ ಕಳೆದ 14 ತಿಂಗಳಿನಿಂದ ಹಣ ಬಿಡುಗಡೆ ಮಾಡಿಲ್ಲ. ವಿನಃಕಾರಣ ವಿಳಂಬ ಮಾಡಲಾಗುತ್ತಿದೆ. ಇದು ಆದಿವಾಸಿ ವಿರೋಧಿ ಮನೋಭಾವವನ್ನು ತಳೆದಿರುವ ಐಟಿಡಿಪಿ ಅಧಿಕಾರಿಗಳ ಧೋರಣೆಯಾಗಿದೆ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ ಕೆ, ಕೃಷ್ಣ ಇನ್ನ, ರಶ್ಮಿ ವಾಮಂಜೂರು, ತುಳಸಿ ಪಡುಬಿದ್ರಿ, ಕಾರ್ಮಿಕ ಮುಖಂಡ ಅಶೋಕ್ ಶ್ರೀಯಾನ್, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಶೇಖರ್ ವಾಮಂಜೂರು, ಕೆರೆಕಾಡು ಘಟಕದ ಮುಖಂಡರಾದ ಅಭಿಜಿತ್, ಶಶಿಧರ್, ಕೇಶವ, ಮನೋಹರ್, ರಮೇಶ್ ಕೆರೆಕಾಡು ರವೀಂದ್ರ, ಕಿಶನ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮಂಗಳೂರಿನ ಉಪಾಧ್ಯಕ್ಷರಾದ ಪ್ರಶಾಂತ್ ಕಂಕನಾಡಿ,ನವೀನ್ ಕಂಕನಾಡಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮಹಿಳಾ ಮುಖಂಡರಾದ ನಿಶ್ಚಿತ, ಮಂಜುಳಾ, ಪೂರ್ಣಿಮಾ, ಶ್ವೇತ, ಸುಶೀಲ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...