ಮಂಗಳೂರು | ಚಿಂತಕರು, ಸಾಮಾಜಿಕ ಕಾರ್ಯಕರ್ತರ ಜೊತೆ ಬಿ ಕೆ ಹರಿಪ್ರಸಾದ್‌ ಚರ್ಚೆ

Date:

ದಕ್ಷಿಣಕನ್ನಡದಲ್ಲಿ ಭುಗಿಲೆದ್ದಿರುವ ಮತೀಯ ಹಿಂಸಾಚಾರ, ದ್ವೇಷ ಭಾಷಣ, ಪ್ರತೀಕಾರದ ಹತ್ಯೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಶುಕ್ರವಾರ ಮಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ದ.ಕ‌. ಮತ್ತು ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕಾರ್ಯಕರ್ತರು, ವಿವಿಧ ಚಳವಳಿಗಳ ಪ್ರಮುಖರು ಭೇಟಿಯಾಗಿ ಚರ್ಚಿಸಿದರು.

ಹೆಚ್ಚುತ್ತಿರುವ ಕೋಮು ಸಂಘರ್ಷ, ಆಳಗೊಳ್ಳುತ್ತಿರುವ ಮತೀಯ ಧ್ರುವೀಕರಣದ ಕುರಿತು ಕಳವಳ ವ್ಯಕ್ತಪಡಿಸಿದ ಸಮಾನ ಮನಸ್ಕರು ಶಾಂತಿ, ಸಾಮರಸ್ಯ ಮರಳಿ ನೆಲೆಗೊಳಿಸಲು ಸರಕಾರ ಕೈಗೊಳ್ಳಬೇಕಾದ ಕೆಲಸಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು, ಸಲಹೆಗಳನ್ನು ನೀಡಿದರು. ಸುಮಾರು ಎರಡು ತಾಸುಗಳ ಕಾಲ ಸಭೆ ನಡೆಯಿತು.

ಮೂರು ದಶಕಗಳಿಗಿಂತೂ ದೀರ್ಘ ಅವಧಿಯಲ್ಲಿ ವ್ಯವಸ್ಥಿತವಾಗಿ ಕೋಮುವಾದಿ ಸಿದ್ದಾಂತವನ್ನು ಕರಾವಳಿ ಜಿಲ್ಲೆಯಲ್ಲಿ ಹರಡಲಾಗಿದೆ. ಸರಿಯಾದ ಪ್ರತಿರೋಧ ಒಡ್ಡದಿರುವುದರಿಂದ ಇಂದು ಕೋಮುವಾದ ಯಾರ ಅಂಕೆಗೂ ಸಿಗದಷ್ಟು ರಾಕ್ಷಸೀ ರೂಪ ತಾಳಿದೆ. ಈ ಅವಧಿಯಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈ ಕುರಿತು ಸ್ಪಷ್ಟ ಧೋರಣೆ ಹೊಂದದಿರುವುದರಿಂದ ಬಿಜೆಪಿ ಸರಕಾರದ ಪತನದ ಹೊರತಾಗಿಯು ಸಂಘ ಪರಿವಾರದ ಶಕ್ತಿಗಳ ಚಟುವಟಿಕೆ ತಡೆ ಇಲ್ಲದೆ ಮುಂದುವರಿದಿದೆ. ದ್ವೇಷ ಭಾಷಣಗಳು ತಡೆ ರಹಿತವಾಗಿ ನಡೆಯುತ್ತಿದೆ. ಇದು ಭೀಕರ ಹತ್ಯೆಗಳಿಗೂ ಸಾಕ್ಷಿ ಆಗುತ್ತಿರುವುದು ಭೀತಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಸರಕಾರ ಕೋಮು ಶಕ್ತಿಗಳ ನಿಗ್ರಹಕ್ಕೆ ಈಗಲಾದರೂ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಂತಕರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಸಂಸ್ಥೆಗಳು, ಸಾಂಸ್ಕೃತಿಕ ವಲಯಗಳಲ್ಲಿ ಸೌಹಾರ್ದತೆಯನ್ನು ಉದ್ದೀಪನಗೊಳಿಸುವ ಕಾರ್ಯಕ್ರಮಗಳು ನಡೆಯಬೇಕು. ದ.ಕ‌. ಉಡುಪಿ ಜಿಲ್ಲೆಗಳಲ್ಲಿ ದಂಧೆಗಳ ಲೋಕ ಹಾಗೂ ಮತೀಯ ಗೂಂಡಾಗಳ ಲೋಕ ಒಂದಕ್ಕೊಂದು ಬೆಸೆದುಕೊಂಡಿದ್ದು, ಇವುಗಳನ್ನು ಮುಲಾಜಿಲ್ಲದೆ ಮಟ್ಟ ಹಾಕಬೇಕು. ದ್ವೇಷ ಭಾಷಣ, ಮಾಬ್ ಲಿಂಚಿಂಗ್, ಹತ್ಯಾ ಪ್ರಕರಣಗಳಲ್ಲಿ ಜಾಮೀನು ದೊರಕದಂತೆ ಕಾನೂನಾತ್ಮಕ ದೃಢ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲಾಡಳಿತದ ಎಲ್ಲಾ ವಿಭಾಗಗಳು, ಪೊಲೀಸ್ ಇಲಾಖೆ, ವಿ ವಿ ಸೇರಿದಂತೆ ಆಯಕಟ್ಟಿನ ವಿಭಾಗಗಳಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಬೇಕು. ಮಾನವೀಯತೆ, ಸಂವಿಧಾನದ ಮೌಲ್ಯಗಳನ್ನು ಜನತೆಗೆ ತಲುಪಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸರಕಾರ ವ್ಯಾಪಕವಾಗಿ ನಡೆಸಬೇಕು, ಸಾಮಾಜಿಕ ಚಳವಳಿಗಳು ನಡೆಸುವ ಸೌಹಾರ್ದ ಕಾರ್ಯಕ್ರಮಗಳಿಗೆ ಬೆಂಬಲ ನೀಡಬೇಕು, ಸಾಮರಸ್ಯ, ಸಹಬಾಳ್ವೆಯ ಕರೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಚಿಂತಕರ ನಿಯೋಗದ ಅಭಿಪ್ರಾಯಗಳನ್ನು ಆಲಿಸಿದ ಬಿ ಕೆ ಹರಿಪ್ರಸಾದ್ ಈ ಕುರಿತು ಜಾತ್ಯತೀತ ಶಕ್ತಿಗಳ ಜೊತೆಗಿರುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಜೊತೆಗೆ ಕರಾವಳಿಯ ಚಿಂತಕರು, ಬರಹಗಾರರು, ಸಂಘಟನೆಗಳ ಪ್ರಮುಖರ ಸಭೆ ಏರ್ಪಡಿಸುವುದಾಗಿ ತಿಳಿಸಿದರು.

ಇದನ್ನೂ ಓದಿ ಮಂಗಳೂರು | ದ್ವೇಷ ಭಾಷಣಗಳಿಗೆ ಕಡಿವಾಣವಿಲ್ಲ, ತಡೆಯಾಜ್ಞೆಗೂ ತಡೆಯಿಲ್ಲ: ಕಾನೂನು ಏನು ಹೇಳುತ್ತದೆ?

ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಸಂಚಾಲಕರಾದ ಮುನೀರ್ ಕಾಟಿಪಳ್ಳ ಸ್ವಾಗತಿಸಿ ಸಭೆಯ ಉದ್ದೇಶವನ್ನು ವಿವರಿಸಿದರು. ಡಾ. ಶ್ರೀನಿವಾಸ ಕಕ್ಕಿಲ್ಲಾಯ, ವಿಚಾರವಾದಿ ಪ್ರೊ.ನರೇಂದ್ರ ನಾಯಕ್, ಜನಪದ ವಿದ್ವಾಂಸ ಡಾ‌.ಗಣನಾಥ ಶೆಟ್ಟಿ ಎಕ್ಕಾರು, ನಿವೃತ್ತ ಪ್ರಾಂಶುಪಾಲರು ಡಾ.ಉದಯ ಇರ್ವತ್ತೂರು, ನಿವೃತ್ತ ಪ್ರಾಧ್ಯಾಪಕ ಡಾ ಶಿವರಾಮ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಡಾ ಎನ್ ಇಸ್ಮಾಯಿಲ್, ಡಾ‌.ಅಮರಶ್ರೀ ಮೂಡಬಿದ್ರೆ, ವಾಸುದೇವ ಉಚ್ಚಿಲ್, ಸಹಬಾಳ್ವೆ ಉಡುಪಿಯ ಅಮೃತ್ ಶೆಣೈ, ರಥಬೀದಿ ಗೆಳೆಯರು ಉಡುಪಿ ಇದರ ನಾಗೇಶ್ ಉದ್ಯಾವರ, ಕೀರ್ತಿ ಶೆಟ್ಟಿ ಅಂಬಲಪಾಡಿ, ಸಿಪಿಎಂ ಮುಖಂಡರಾದ ಕೆ ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಹಿರಿಯ ನ್ಯಾಯವಾದಿಗಳಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ, ಯಶವಂತ ಮರೋಳಿ, ದಲಿತ ಚಳವಳಿಯ ನಾಯಕರಾದ ಎಂ ದೇವದಾಸ್, ಕೃಷ್ಣಾನಂದ ಬಜ್ಪೆ, ಸದಾಶಿವ ಪಡುಬಿದ್ರೆ, ರಘು ಎಕ್ಕಾರು, ಮಾಜಿ ಮೇಯರ್ ಕೆ ಅಶ್ರಫ್, ಸಾಮಾಜಿಕ ಹೋರಾಟಗಾರರಾದ ಮಂಜುಳಾ ನಾಯಕ್, ಬಿ ಎನ್ ದೇವಾಡಿಗ, ಟಿ ಆರ್ ಭಟ್, ಸ್ವರ್ಣಾ ಭಟ್, ದಿಲ್ ರಾಜ್ ಆಳ್ವ, ಸಮರ್ಥ್ ಭಟ್, ಕಾರ್ಮಿಕ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಸೀತಾರಾಮ ಬೇರಿಂಜ,ಕರುಣಾಕರ್ ಮಾರಿಪಳ್ಳ, ಸಿಪಿಐ ನ.ವಿ ಕುಕ್ಯಾನ್, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ರೋಯ್ ಕ್ಯಾಸ್ಟಲಿನೋ, ಪ್ಲೇವಿಕ್ರಾಸ್ತಾ ಅತ್ತಾವರ, ಡೋಲ್ಪಿ ಡಿಸೋಜ, ರಚನಾ ಸಂಸ್ಥೆಯ ಜೋನ್ ಮುಂತೇರೋ, ಕೆಥೋಲಿಕ್ ಸಭಾದ ಸಂತೋಷ್ ಡಿಸೋಜ, ಡಿವೈಎಫ್ಐ ನ ನ‌ ಬಿಕೆ ಇಮ್ತಿಯಾಜ್, ಮಹಿಳಾ ಸಂಘಟನೆಯ ಅಸುಂತ ಡಿಸೋಜ, ಪ್ರಮೀಳಾ ಶಕ್ತಿನಗರ, ಸಾಂಸ್ಕೃತಿಕ ರಂಗದ ಸಂತೋಷ್ ಶೆಟ್ಟಿ ಹಿರಿಯಡ್ಕ, ವಿದ್ದು ಉಚ್ಚಿಲ್, ಹರೀಶ್ ಪೇಜಾವರ, ಶ್ಯಾಮಸುಂದರ್ ರಾವ್, ಚಿತ್ತರಂಜನ್ ಶೆಟ್ಟಿ ಬೊಂಡಾಲ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...