ಮಂಗಳೂರು | ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ನಿಧನ

Date:

ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದಒಲುಮೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಅಮೃತ ಸೋಮೇಶ್ವರ ಅವರು ತುಳುನಾಡಿನ ಓರ್ವ ಸಾಹಿತಿ. ಹಿರಿಯ ಜಾನಪದ ವಿದ್ವಾಂಸ. ಕಾವ್ಯ, ಸಣ್ಣಕತೆ, ನಾಟಕ, ಯಕ್ಷಗಾನ, ವಿಮರ್ಶೆ ಹಾಗೂ ಜಾನಪದ ಕ್ಷೇತ್ರದಲ್ಲಿ ವಿಶೇಷವಾಗಿ ಕೆಲಸ ಮಾಡಿದವರು.

ಅಮೃತ ಸೋಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು ಜನಿಸಿದ್ದರು. ಇವರ ತಂದೆ ಚಿರಿಯಂಡ ಮತ್ತು ತಾಯಿ ಅಮುಣಿ ಇವರ ಮಾತೃಭಾಷೆ ಮಲಯಾಳಂ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.

ನಿವೃತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು.

ಇವರ ಮಾತೃ ಭಾಷೆ ಮಲಿಯಾಳಂ ಆದರೂ ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಸಾಹಿತ್ಯ ರಚನೆಗೆ ತೊಡಗಿದ್ದರು. ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಬೆಳೆಸಿಕೊಂಡಿದ್ದ ಅವರು ಕಥೆ, ಕವನ ರಚನೆಗೆ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವೊಂದನ್ನೂ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದಾರೆ.

ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿ ಗುರುತಿಸಿಕೊಂಡವರು. ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಾಡಿನಕೀರ್ತಿ ಹೆಚ್ಚಿಸಿದ ಅಮೃತರನ್ನು ಮಂಗಳೂರುವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ನೇ ಸಾಲಿನಗೌರವಶ್ರೀ’ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಯಿಂದ ಸಂಘ ಸಂಸ್ಥೆಗಳ ಸನ್ಮಾನದಿಂದ ಪುರಸ್ಕೃತರಾಗಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನಗೌರವಶ್ರೀ’ ಪ್ರಶಸ್ತಿಯನ್ನು ಅವರ 86ನೇ ಹುಟ್ಟುದಿನದಂದು ಅವರ ಮನೆಯಲ್ಲಿಯೇ ಪ್ರದಾನ ಮಾಡಲಾಗಿತ್ತು.

ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಮೃತರು ಪತ್ನಿ ನರ್ಮದಾ, ಮಕ್ಕಳಾದ ಚೇತನ್, ಜೀವನ್ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸೋಮೇಶ್ವರ ಪುರಸಭೆ ಕಚೇರಿ ಬಳಿಯ ಅವರ ಸ್ವಗೃಹದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, .7ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...