ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

Date:

ಜಾರ್ಖಂಡ್‌ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ.

ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಪತ್ರಿಕಾ ಹೇಳಿಕೆ ನೀಡಿದ್ದು, “ಹಲ್ಲೆಗೊಳಗಾದ ಕಾರ್ಮಿಕನ ಹೆಸರು ದಿಲ್ಜಾನ್ ಅನ್ಸಾರಿ. ಇವರು ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಪ್ರತಿ ವರ್ಷ 4-6 ತಿಂಗಳು ಕೆಲಸ ಮಾಡುತ್ತಿದ್ದರು. ಇದೀಗ ಆರೋಪಿಗಳು ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಿ, ವಿವಿಧ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಕೆಲವು ಅನಾವಶ್ಯಕ ಮತ್ತು ಅಪಹಾಸ್ಯದ ಟೀಕೆಗಳನ್ನು ಮಾಡಿದ್ದಾರೆ. ದಿಲ್ಜಾನ್ ಅನ್ಸಾರಿ ಅವರು ಬಾಂಗ್ಲಾದೇಶಿ ಅಲ್ಲವೆಂದು ಹೇಳಿದಾಗ, ಆರೋಪಿಗಳು ಅವರ ತಲೆಗೆ ಹೊಡೆದು ದಾಳಿ ಮಾಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ” ಎಂದು ಹೇಳಿದ್ದಾರೆ.

“ಸ್ಥಳೀಯ ಹಿಂದೂ ಮಹಿಳೆಯೊಬ್ಬರು ಬಂದು ಅವರನ್ನು ರಕ್ಷಿಸಿದ್ದಾರೆ. ವಲಸೆ ಕಾರ್ಮಿಕನಾಗಿದ್ದರಿಂದ ಭಯದಿಂದ ದಿಲ್ಜಾನ್ ಅನ್ಸಾರಿ ದೂರು ನೀಡದೆ ಮನೆಗೆ ತೆರಳಿದ್ದರು. ನಂತರ ಸ್ಥಳೀಯ ನಾಯಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ ದಿಲ್ಜಾನ್ ಅನ್ಸಾರಿ ಭಾರತೀಯರಾಗಿದ್ದು, ಕೆಲಸಕ್ಕಾಗಿ ಇಲ್ಲಿಗೆ ಬಂದಿರುವುದು ದೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಎಸ್‌ಐಆರ್ ನೆಪದಲ್ಲಿ ಮುಸ್ಲಿಂ ಮತದಾರರ ಹೊರಗುಳಿವು; ರಾಜಕೀಯ ದುರುದ್ದೇಶ ಆರೋಪ – ಶಿವಸುಂದರ

ಈ ಘಟನೆಗೆ ಸಂಬಂಧಿಸಿ ಬಿಎನ್​ಎಸ್​ ಕಾಯ್ದೆಯಡಿ 126(2), 109, 352, 351(3),353, 118(1) r/w 3(5) ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ಮತ್ತು ಮೋಹನ್ ಎಂದು ಗುರುತಿಸಲಾಗಿದ್ದು, ಅವರನ್ನು ಕೂಡಲೇ ಬಂಧಿಸುವಂತೆ ಸೂಚನೆ ನೀಡಲಾಗಿದೆ” ಎಂದು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ನಮ್ಮ ಸಮಾಜದಲ್ಲಿ ದ್ವೇಷ, ಅಪಪ್ರಚಾರ ಮತ್ತು ಅಜ್ಞಾನದಿಂದ ಉಂಟಾಗುತ್ತಿವೆ. ಸ್ಥಳೀಯರ ಸಹಾಯ ಮತ್ತು ಪೊಲೀಸ್ ಇಲಾಖೆಯ ತ್ವರಿತ ಕ್ರಮದಿಂದ ಮಾತ್ರ ಇಂತಹ ದುರಂತಗಳನ್ನು ತಡೆಗಟ್ಟಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...