ಮಂಗಳೂರು ಜೈಲು ತಪಾಸಣೆ ವೇಳೆ ನಿಷೇಧಿತ ವಸ್ತುಗಳ ಪತ್ತೆ: 2 ಮೊಬೈಲ್, ಸಿಮ್ ಕಾರ್ಡ್, ಚಾರ್ಜರ್ ವಶ

Date:

ಮಂಗಳೂರು ನಗರ ಕಾರಾಗೃಹದ ಅಧೀಕ್ಷಕ ಶರಣ ಬಸಪ್ಪ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಿಢೀರ್ ಜೈಲು ತಪಾಸಣೆ ನಡೆಸಿದ್ದು, ಈ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್‌ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇವುಗಳು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿದೆ.

“ಇಲಾಖೆಯ ಮುಖ್ಯಸ್ಥರಾದ ಐಪಿಎಸ್‌ ಅಲೋಕ್ ಕುಮಾರ್, ಕರ್ನಾಟಕ ಕಾರಾಗೃಹ ಮಹಾನಿರ್ದೇಶಕರು ಮತ್ತು ಸುಧಾರಣಾ ಸೇವೆ ಬೆಂಗಳೂರು ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಕಾರಾಗೃಹಗಳು ಕೈದಿಗಳ ಸುಧಾರಣೆಗೆ ಮೀಸಲಾದ ಸ್ಥಳಗಳು. ಆದರೆ, ನಿಷೇಧಿತ ವಸ್ತುಗಳು ಒಳಹೊಕ್ಕುವುದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಇದು ಕೈದಿಗಳು ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಿ ಅಪರಾಧ ಚಟುವಟಿಕೆಗಳನ್ನು ಮುಂದುವರೆಸುವ ಅಪಾಯವನ್ನು ಹೆಚ್ಚಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಈ ರೀತಿಯ ಘಟನೆಗಳು ಮಂಗಳೂರು ಜೈಲಿನಲ್ಲಿ ಹೊಸದಲ್ಲ. ಕಳೆದ ಡಿಸೆಂಬರ್‌ನಲ್ಲೇ ಗಲಾಟೆಯ ನಂತರ 4 ಮೊಬೈಲ್‌ಗಳು ಪತ್ತೆಯಾಗಿದ್ದವು ಮತ್ತು ಹಿಂದಿನ ವರ್ಷಗಳಲ್ಲೂ ಮಾದಕ ವಸ್ತುಗಳು, ಫೋನ್‌ಗಳು ಜಪ್ತಿಯಾಗಿರುವ ಉದಾಹರಣೆಗಳಿವೆ. ಜೈಲು ಸಿಬ್ಬಂದಿ, ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವುದು, ಮೊಬೈಲ್‌ಗಳ ಸಮರ್ಪಕ ಬಳಕೆ ಮತ್ತು ನಿಗಾವಣೆಯನ್ನು ಹೆಚ್ಚಿಸುವುದು ಅತ್ಯಗತ್ಯ. ಇಂತಹ ಕ್ರಮಗಳು ಇಲ್ಲದಿದ್ದರೆ ಕಾರಾಗೃಹಗಳು ಸುಧಾರಣಾ ಕೇಂದ್ರಗಳಾಗದೆ ಅಪರಾಧ ಕೇಂದ್ರಗಳಾಗಿ ಪರಿವರ್ತನೆಯಾಗುವ ಅಪಾಯವಿದೆ.

ಕಾರಾಗೃಹ ಇಲಾಖೆಯು ಈ ಘಟನೆಯಿಂದ ಪಾಠ ಕಲಿತು ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಇಂತಹ ಪುನರಾವರ್ತನೆ ತಡೆಯಲು ಕಠಿಣ ನಿಯಮಗಳನ್ನು ಜಾರಿಗೊಳಿಸಿದರೆ ಒಳಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...