ರಾಜ್ಯ ಟ್ವೆಕಾಂಡೋ ಚಾಂಪಿಯನ್‌ಶಿಪ್‌-2026: ದಕ್ಷಿಣ ಕನ್ನಡಕ್ಕೆ 2 ಚಿನ್ನ, 2 ಬೆಳ್ಳಿ

Date:

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಟ್ವೆಕಾಂಡೋ ಚಾಂಪಿಯನ್‌ಶಿಪ್–2026 (8ನೇ ಕೆಟಿಎ ಕಪ್)ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮೆರೆದಿದ್ದು, 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಫಾನ್ ರಹಮತುಲ್ಲಾ ಅಹ್ಮದ್ (ಸುರತ್ಕಲ್) ಹಾಗೂ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ವಿಷ್ಣು ಇಡ್ಯಾ (ಸುರತ್ಕಲ್) ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ರಫಾನ್ ರಹಮತುಲ್ಲಾ ಅಹ್ಮದ್ ಅವರು ರಹಮತುಲ್ಲಾ ಅಹ್ಮದ್-ಫಾತಿಮಾ ಫರ್ಝಾನಾ ದಂಪತಿಯ ಪುತ್ರರಾಗಿದ್ದು, ವಿಷ್ಣು ಅವರು ರವಿ–ಜ್ಯೋತಿ ದಂಪತಿಯ ಪುತ್ರರಾಗಿದ್ದಾರೆ.

15 ವರ್ಷ ಮೇಲ್ಪಟ್ಟ ಬಾಲಕರ ವಿಭಾಗದಲ್ಲಿ ಆಯಾನ್ ಅಹ್ಮದ್ (ಮಂಗಳೂರು) ಹಾಗೂ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅವಂತಿಕಾ ಎಸ್ (ಕುಳಾಯಿ–ಸುರತ್ಕಲ್) ಅವರು ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಮತ್ತಷ್ಟು ಗೌರವ ತಂದಿದ್ದಾರೆ. ಆಯಾನ್ ಅಹ್ಮದ್ ಅವರು ನಜೀಮ್ ಅಹ್ಮದ್–ಸುನೇನಾ ನಜೀಮ್ ಅವರ ಪುತ್ರರಾಗಿದ್ದು, ಅವಂತಿಕಾ ಅವರು ವಿನೋದ್ ಎಸ್–ಸುಮಾ ಕೆ ದಂಪತಿಯ ಪುತ್ರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

ಪ್ರತಿಷ್ಠಿತ ಈ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಯುವ ಕ್ರೀಡಾಪಟುಗಳು ಭಾಗವಹಿಸಿ, ವಿವಿಧ ಜಿ4 ವಿಭಾಗಗಳಲ್ಲಿ ಪೈಪೋಟಿ ನಡೆಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟು ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಟ್ವೆಕಾಂಡೋ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತುದಾರ ಇಶಾಕ್ ಇಸ್ಮಾಯಿಲ್ ನಂದಾವರ ತರಬೇತಿ ನೀಡಿದ್ದು, ಅವರ ಪತ್ನಿ ದಕ್ಷಿಣ ಕನ್ನಡ ಟ್ವೆಕಾಂಡೋ ತಂಡದ ಫಿಸಿಯೋಥೆರಪಿಸ್ಟ್ ಡಾ. ಫಾತಿಮಾ ಭಾಷಿಯಾ (ಪಿಟಿ) ದೈಹಿಕ ಬೆಂಬಲ ಒದಗಿಸಿದ್ದಾರೆ. ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸುರತ್ಕಲ್ ಎಕ್ಸ್ ಟ್ರೀಮ್ ಫಿಟ್ ಅಂಡ್ ಫೈಟ್ ಕ್ಲಬ್ ತರಬೇತಿ ಹಾಗೂ ತಾಂತ್ರಿಕ ಬೆಂಬಲ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಈ ಸಾಧನೆಗೆ ಕ್ರೀಡಾಭಿಮಾನಿಗಳಿಂದ ಹಾಗೂ ಕ್ರೀಡಾ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...