ಧರ್ಮಸ್ಥಳ ಪ್ರಕರಣ | ರೇಡಾರ್‌ ಬಳಸಿ ಕಾರ್ಯಾಚರಣೆ ನಡೆಸಲು ಸುಜಾತಾ ಭಟ್ ಪರ ವಕೀಲರ ಆಗ್ರಹ

Date:

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸ್ಥಳಗಳಲ್ಲಿ GROUND PENETRATING RADAR(ರೇಡಾರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್‌ ಎನ್ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಈವರಗೆ, ಸಾಕ್ಷಿ-ದೂರುದಾರ ತೇರಿರುವ 10 ಸ್ಥಳಗಳಲ್ಲಿ ಕೆಲವು ಸ್ಥಳದಲ್ಲಿ ಕಳೇಬರಗಳು ಪತ್ತೆ ಯಾಗಿರುತ್ತದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿರುತ್ತಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಸುಜಾತಾ ಭಟ್ ಪರ ವಕೀಲರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟಿಕೊಂಡ ಗುರುತ್ತಿನಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ನಾವು ಈಗಾಗಲೇ ದಿನಾಂಕ ಜುಲೈ 29ರಂದು ಮನವಿ ಮಾಡಿಕೊಂಡಂತೆ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ GROUND PENETRATING RADAR (ಗ್ರೌಂಡ್ ಪೆನೇಟ್ರೇಟಿಂಗ್‌ ರೆೇಡಾರ್) ಗಳನ್ನು ಬಳಸಿ ಈಗಾಗಲೇ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ” ಎಂದು ಆಗ್ರಹಿಸಿದ್ದಾರೆ.

“ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಬಳಸುವ ಯಂತ್ರದಷ್ಟು ಗಾತ್ರವಿರುವ GPRಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನು ಎಸ್‌ಐಟಿ ತಂಡವನ್ನು ಶ್ಲಾಘಿಸಿರುವ ಅವರು, “ಅತ್ಯುತ್ತಮ ತಂಡದ ನೆರವಿನೊಂದಿಗೆ ಎಸ್‌ಐಟಿಯು ಹೊರತೆಗೆಯುವ ಪ್ರಕ್ರಿಯೆಯನ್ನು ನಡೆಸುತ್ತಿರುವುದು ಶ್ಲಾಘನೀಯ. ಪ್ರಣಬ್ ಮೊಹಂತಿಯವರ ನೇತೃತ್ವದ ಎಸ್‌ಐಟಿಯು GPRಗಳನ್ನು ಅಳವಡಿಸುವುದೆಂಬ ನಿರೀಕ್ಷೆಯನ್ನು ಅನೇಕ ತಜ್ಞರು ಹೊಂದಿರುತ್ತಾರೆ. GPRಗಳನ್ನು ನಿಯೋಜಿಸಲು ಎಸ್‌ಐಟಿಯವರಿಗೆ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನೆರವಾಗುತ್ತಾರೆಂಬ ಅಚಲ ನಂಬಿಕೆ ಮತ್ತು ವಿಶ್ವಾಸ ನಮ್ಮದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...