21ನೇ ಶತಮಾನದಲ್ಲೂ ಅಸ್ಪೃಶ್ಯತೆ ಆಚರಿಸಲಾಗುತ್ತದೆ ಎಂದರೆ ಸರ್ಕಾರಕ್ಕೆ ನಾಚಿಕೆಯಾಗಬೇಕು : ಶಿವಕುಮಾರ ಗೋಲಾ

Date:

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ ಮಾಡಿದ ಘಟನೆಯನ್ನು ಖಂಡನೀಯ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ತಿಳಿಸಿದ್ದಾರೆ.

ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಯಮನೂರಪ್ಪ ಬಂಡಿಹಾಳನನ್ನು ಕ್ಷೌರಿಕ ಮುದುಕಪ್ಪ, ನೀನು ಹರಿಜನ ಇದ್ದೀಯಾ. ನಿನಗೆ ಕ್ಷೌರ ಮಾಡುವುದಿಲ್ಲ ಅಂತ ತಕರಾರು ಮಾಡಿ ಕೊನೆಗೆ ಕಟಿಂಗ್ ಮಾಡುವ ಕತ್ತರಿಯಿಂದ ಹೊಟ್ಟೆಗೆ ಬಲವಾಗಿ ತಿವಿದು ಕೊಲೆ ಮಾಡಿದ್ದಾನೆ. 21 ನೇ ಶತಮಾನದಲ್ಲೂ ಕೂಡ ಅಸ್ಪೃಶ್ಯತೆ ಆಚರಿಸಲಾಗುತ್ತದೆ ಎಂದರೆ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ತಿಳಿಸಿದರು.

ಈ ಘಟನೆಯ ನೇರ ಹೊಣೆ ಸರಕಾರ ಮತ್ತು ಅಧಿಕಾರಿಗಳದ್ದು. ಅಧಿಕಾರಿಗಳ ಬೇಜವಬ್ದಾರಿತನದಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕೊಪ್ಪಳ ಜಿಲ್ಲೆಯ ಡಿ.ಸಿ.ಎಸ್.ಪಿ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು, ಯಲಬುರ್ಗಾ ತಾಲೂಕಿನ ಶಾಸಕರು, ತಹಶೀಲ್ದಾರರು ನೇರ ಹೊಣೆ ಹೊರಬೇಕು. ಇವರೆಲ್ಲರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಬೇಕು. ನೊಂದ ಕುಟುಂಬಕ್ಕೆ ಪರಿಹಾರ ನೀಡಬೇಕು. ಕುಟುಂಬದಲ್ಲಿನ ಒಬ್ಬ ಸದಸ್ಯರಿಗೆ ಸರಕಾರಿ ನೌಕರಿ ನೀಡಬೇಕೆಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ರೀಲ್ಸ್ ಹುಚ್ಚು: ಬೈಕ್‌ನ ಮೂಲಕ ಯುವತಿಯರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದವ ಈಗ ಪೊಲೀಸರ ಅತಿಥಿ!

ಕೊಪ್ಪಳ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಅಸ್ಪೃಶ್ಯತೆ ಆಚರಿಸಲಾಗುತ್ತದೆ. ಇದನ್ನೂ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವ ಅಲ್ಲಿನ ಸರಕಾರಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಈ ಘಟನೆ ಬಗ್ಗೆ ವಿಚಾರ ಮಾಡಿ ದಲಿತ ಸೇನೆ ರಾಜ್ಯ ಅಧ್ಯಕ್ಷರಾದ ಹಣಮಂತ ಯಳಸಂಗಿ ಅವರ ನೇತೃತ್ವದಲ್ಲಿ ಕೊಲೆಯಾದ ಯಮನೂರಪ್ಪ ಕುಟುಂಬಕ್ಕೆ ಭೇಟಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...