ರಾಯಚೂರು | ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಒಳಮೀಸಲಾತಿ ಘೋಷಣೆ ಮಾಡಿ; ಎಂ ವಿರೂಪಾಕ್ಷಿ

Date:

ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಯಚೂರು ಜಿಲ್ಲೆಯಲ್ಲಿಯೇ ಘೋಷಣೆ ಮಾಡಬೇಕು ಎಂದು ಮಾದಿಗ ಮೀಸಲಾತಿ ಐಕ್ಯ ಹೋರಾಟ ಸಮಿತಿ ಸಂಚಾಲಕ ಎಂ ವಿರೂಪಾಕ್ಷಿ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಏಳು ಜನ ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಿ ಎರಡು ತಿಂಗಳು ಗತಿಸಿದೆ. ಆದರೆ ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಣವನ್ನು ಸ್ವಾಗತಿಸಿ ಸುಮ್ಮನೆ ಕುಳಿತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿಯೇ ಮೀಸಲಾತಿ ವರ್ಗೀಕರಣಕ್ಕೆ ಅಗತ್ಯವಿರುವ ದತ್ತಾಂಶವಿದೆ ಎಂದು ಈಗಾಗಲೇ ಅನೇಕ ತಜ್ಞರು ಹೇಳುತ್ತಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ್ ಸಮಿತಿ ಸೇರಿದಂತೆ ಅನೇಕರು ಹೇಳಿರುವುದು ವರದಿಗಳಿವೆ. ಕಾಂಗ್ರೆಸ್ ಸರ್ಕಾರ ಇನ್ನೊಬ್ಬರ ಪ್ರಭಾವಕ್ಕೆ ಗುರಿಯಾಗಿದೆ. ಆದಿ ಕರ್ನಾಟಕ, ಆದಿ ದ್ರಾವಿಡ ಪ್ರತ್ಯೇಕ ಕಾಲಂಗಳಲ್ಲಿ ಗಣತಿ ಮಾಡಲಾಗಿದೆ. ಗೊಂದಲವಾಗುವ ಪ್ರಶ್ನೆಯೇ ಇಲ್ಲ. ಕುಂಟುನೆಪ ಹೇಳದೇ ಸಿಂಧನೂರು, ಮಾನ್ವಿ ಮತ್ತು ರಾಯಚೂರು ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿಯೇ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, ಒಳಮೀಸಲಾತಿ ವರ್ಗೀಕರಣದಿಂದ ಕೇವಲ ಮಾದಿಗ ಸಮುದಾಯಕ್ಕೆ ಮಾತ್ರ ಅನುಕೂಲವಾಗುವದಿಲ್ಲ. ಎಲ್ಲ ಸಮುದಾಯಗಳಿಗೂ ಅನುಕೂಲವಾಗುತ್ತದೆ. ಒಳ ಮೀಸಲಾತಿ ಹೋರಾಟ ಯಾವುದೇ ಒಂದು ಪಕ್ಷ, ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯಗಳ ಪರವಾಗಿ ಮಾದಿಗ ಸಮಾಜ ಹೋರಾಟ ನಡೆಸುತ್ತಿದೆ. ಮೀಸಲಾತಿ ವರ್ಗೀಕರಣ ಕುರಿತಂತೆ ಸರ್ಕಾರ ವಿಳಂಬವಿಲ್ಲದೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಹಿಂದೂ ಮಾಲೀಕತ್ವದ ಶಾಲೆಗಳಿಗೆ ಮಾತ್ರ ಮಕ್ಕಳನ್ನು ಕಳುಹಿಸಬೇಕು; ದ್ವೇಷ ಬಿತ್ತಿದ ಪ್ರೊಫೆಸರ್!

ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ, ಪಿ.ಯಲ್ಲಪ್ಪ, ಜೆ.ಬಿ.ರಾಜು,ಕೆ.ಪಿ.ಅನಿಲ್‌ಕುಮಾರ, ರಾಘವೇಂದ್ರ ಬೋರೆಡ್ಡಿ ,ಎಸ್.ರಾಜು ಸೇರಿ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...