ಚಿಕ್ಕಬಳ್ಳಾಪುರ | ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ

Date:

ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪಟ್ರೇನಹಳ್ಳಿ ಕೃಷ್ಣ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಬುಧವಾರ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟಗಳ ಸಹಯೋಗದಲ್ಲಿ ನಡೆದ ಒಳಮೀಸಲಾತಿ ಜಾರಿ ಸಂಬಂಧದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧಕ್ಷರಾಗಿದ್ದ ಪರಮೇಶ್ವರ್ ಅವರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಾಕಿದಂತೆ ಸರಕಾರ ಅಧಿಕಾರಕ್ಕೆ ಬಂದಿದೆ. ಈಗ ಇರುವ ಸದಾವಕಾಶವನ್ನು ಬಳಸಿಕೊಂಡು ಒಳಮೀಸಲು ಜಾರಿಗೆ ಮುಖ್ಯಮಂತ್ರಿಗಳ ಮನ ಒಲಿಸಲು ಮುಂದಾಗಬೇಕು. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಇದರ ನೇತೃತ್ವವಹಿಸಿ ಇದೇ ಸರಕಾರದ ಅವಧಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಮಾದಿಗ ಸಮುದಾಯದ ನ್ಯಾಯಯುತ ಹಕ್ಕನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಅಲ್ಲಿಯವರೆಗೆ ಹೊಸ ನೇಮಕಾತಿಗಳಿಗೆ ತಡೆ ನೀಡಬೇಕು. ಈಗ ತುಂಬಿಕೊಳ್ಳುತ್ತಿರುವ ಹುದ್ದೆಗಳಿಗೂ ಒಳಮೀಸಲಾತಿ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಸಮುದಾಯಗಳಲ್ಲೇ ಮಾದಿಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಕೂಡ ಭಾರತವು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರೂ, ನಮ್ಮ ಸಮುದಾಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬಲಹೀನವಾಗಿದ್ದು ಸಮಾಜದ ಮುಖ್ಯವಾಹಿಯಿಂದ ದೂರವೇ ಉಳಿದಿದೆ. 4 ದಶಕಗಳಿಗೂ ಹೆಚ್ಚಿನ ಕಾಲದಿಂದ ದಲಿತ ಸಮುದಾಯಗಳಲ್ಲಿ ಒಳಮೀಸಲಾತಿ ಜಾರಿ ಮಾಡಿ ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ನ್ಯಾಯ ಮರೀಚಿಕೆಯಾಗಿತ್ತು. ಸುಪ್ರಿಂ ತೀರ್ಪು ನಮಗೆ ಜೀವದಾನ ನೀಡಿದೆ ಎಂದರು.

ಆದರೆ ಈ ತೀರ್ಪು ಬರುವ ಮುನ್ನವೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಇದರಂತೆ ಸುಪ್ರಿಂ ಕೋರ್ಟ್ ತೀರ್ಪು ನೀಡಿ ಸರಕಾರಕ್ಕೆ ರಹದಾರಿ ನಿರ್ಮಿಸಿಕೊಟ್ಟಿದೆ. ಈ ತೀರ್ಪು ಬಂದಾಗ ಪ್ರತಿಕ್ರಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಳಮೀಸಲು ಕಲ್ಪಿಸಲು ಸರಕಾರ ಸಿದ್ಧವಿದೆ ಎಂದಿದ್ದರು. ಸರಕಾರಕ್ಕೆ ಈಗ ಎಲ್ಲಾ ಅವಕಾಶಗಳು ಮುಕ್ತವಾಗಿದ್ದರೂ ಜಾರಿ ಮಾಡದೆ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ಕೂಡಲೇ ಒಳಮೀಸಲು ಜಾರಿ ಮಾಡಿ ನುಡಿದಂತೆ ನಡೆಯಬೇಕು. ಕಾಂಗ್ರೆಸ್ ಪಕ್ಷ ಮಾದಿಗರ ಪರವಾಗಿದೆ ಎಂದು ಹೇಳಬೇಕಿದೆ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಚಿಂತಾಮಣಿಯ ಅಮರ್ ಮಾತನಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ಸಾಮಾಜಿಕ ನ್ಯಾಯದ ಹರಿಕಾರ ಎನಿಸಿಕೊಳ್ಳಬೇಕು.ಇಲ್ಲವಾದಲ್ಲಿ ಮುಂಬರುವ ಯಾವುದೇ ಚುನಾವಣೆಗಳಲ್ಲಿ ನಮ್ಮ ಸಮುದಾಯ ಪಕ್ಷವನ್ನು ಬೆಂಬಲಿಸಲು ಚಿಂತಿಸಲಿದೆ.ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲಿ ಎಂದು ಹಗಲಿ ಇರುಳು ಕೆಲಸ ಮಾಡಿದೆ.ನಮ್ಮ ಒಗ್ಗಟ್ಟಿನ ಕಾರಣವಾಗಿಯೇ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡು ಕೂಡಲೇ ಒಳಮೀಸಲು ಜಾರಿ ಮಾಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಎಂಎಲ್‌ಎ ಪ್ರದೀಪ್‌ ಈಶ್ವರ್‌ ಸ್ಕಾಲರ್‌ಶಿಪ್‌ – 2024 ಘೋಷಣೆ

ಪ್ರತಿಭಟನೆಯಲ್ಲಿ ಬಾಲಕುಂಟಹಳ್ಳಿ ಗಂಗಾಧರ್, ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಂ.ವಿ.ರಾಮಪ್ಪ, ಮಾಜಿ ಜಿಲ್ಲಾಧ್ಯಕ್ಷ ಪೆದ್ದಣ್ಣ, ಮುರಳಿ ಮೋಹನ್, ಸುರೇಶ್, ವೀಣಾರಾಮು, ಪಿ.ಎಂ.ನರಸಿಂಹಯ್ಯ, ಗೌರಿಬಿದನೂರು ಗಂಗಾಧರ್, ಲಾಯರ್ ಹೆಚ್‌ಎಲ್‌ವಿ ವೆಂಕಟೇಶ್, ಕೃಷ್ಣಪ್ಪ ಚಿಂತಾಮಣಿ, ಹಳ್ಳಿ ಮಕ್ಕಳ ಸಂಘದ ವೆಂಕಟರಮಣಪ್ಪ, ಶಿಡ್ಲಘಟ್ಟ ಜೀವಿಕ ಮುನಿಯಪ್ಪ, ಹೆಚ್.ಎಂ.ಜಗದೀಶ್, ಕುಂದಗುರ್ಕಿ ಮುನೀಂದ್ರ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...