ರಾಯಚೂರು | ಜಿಟಿ ಜಿಟಿ ಮಳೆ; ಮುಂದುವರೆದ ದಸಂಸ ಧರಣಿ

Date:

ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್)ಯ ಬೋಧಕ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಜಿಟಿ ಜಿಟಿ ಮಳೆಯ ನಡುವೆಯೂ 5ನೇ ದಿನಕ್ಕೆ ಮುಂದುವರೆದಿದೆ.

ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಮೂಲಸೌಕರ್ಯದ ಕೊರತೆ ಹಾಗೂ ವೈದ್ಯರ ಕರ್ತವ್ಯ ನಿರ್ವಹಣೆಯಲ್ಲಿನ ಲೋಪದಿಂದಾಗಿ ಒಳ ಹಾಗೂ ಹೊರ ರೋಗಿಗಳಿಗೆ ಸರಿಯಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ ಎಂದು ಆರೋಪಿಸಿ ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ ಅವರನ್ನು ಅಮಾನತುಗೊಳಿಸುವಂತೆ ಧರಣಿ ನಡೆಯುತ್ತಿದೆ.

“ರಿಮ್ಸ್ ಆಸ್ಪತ್ರೆಯು ಬಡವರಿಗೆ ವರದಾನವಾಗಬೇಕಿತ್ತು. ಆದರೆ ಇಲ್ಲಿನ ಮುಖ್ಯಸ್ಥ ಡಾ. ಬಸವರಾಜ ಪೀರಾಪುರ ಸಮರ್ಥವಾಗಿ ಆಡಳಿತ ನಡೆಸಲು ವಿಫಲರಾಗಿದ್ದು, ಅಗತ್ಯ ಸೌಲಭ್ಯ ದೊರೆಯುತ್ತಿಲ್ಲ. ಆಸ್ಪತ್ರೆಯಲ್ಲಿ ಔಷಧಿಗಳ ದೊಡ್ಡ ಉಗ್ರಾಣವಿದ್ದರೂ ರೋಗಿಗಳಿಗೆ ಅಗತ್ಯ ಔಷಧಿ ನೀಡದೆ, ಹೊರೆಗಿನ ಖಾಸಗಿ ಔಷಧಿ ಅಂಗಡಿಗಳಲ್ಲಿ ತೆಗೆದುಕೊಳ್ಳುವಂತೆ ವೈದ್ಯರು ಚೀಟಿ ಬರೆಯುತ್ತಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ದೊಡ್ಡ ಲಾಭಿ, ಮೆಡಿಕಲ್ ಮಾಫಿಯಾ ನಡೆಯುತ್ತಿದೆ” ಎಂದು ಪ್ರತಿಭಟನಾನಿರತ ಸಂಘದ ಜಿಲ್ಲಾ ಘಟಕದ ಸಂಚಾಲಕ ಎನ್. ನರಸಿಂಹಲು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರ ಶಾಸಕ ಡಾ. ಶಿವರಾಜ ಪಾಟೀಲರು ವೈದ್ಯ ವೃತ್ತಿಯಿಂದ ಬಂದಿದ್ದಾರೆ. ಮೂರು ಬಾರಿ ಶಾಸಕರಾದರೂ ರಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಸುಧಾರಣೆ ಮಾಡುತ್ತಿಲ್ಲ. ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಬೇಕಿರುವ ರಿಮ್ಸ್ ಆಸ್ಪತ್ರೆಯು ಅವ್ಯಸ್ಥೆಯ ಆಗರವಾಗಿದೆ. ಪ್ರತಿಯೊಂದಕ್ಕೂ ಖಾಸಗಿ ಪ್ರಯೋಗಾಲಯ ಮಾಡಿಸಲಾಗುತ್ತಿದೆ. ರಿಮ್ಸ್ ಆಸ್ಪತ್ರೆಯಲ್ಲಿನ ವೈದ್ಯರು ಬೆಳಿಗ್ಗೆ ಹಾಗೂ ಸಂಜೆ ಒಮ್ಮೆ ಬಯೋಮೆಟ್ರಿಕ್‌ ಹಾಜರಾತಿ ಹಾಕಿ ಕೇವಲ ಒಂದೆರಡು ತಾಸು ಕೆಲಸ ಮಾಡುತ್ತಿದ್ದಾರೆ. ಉಳಿದ ಸಮಯ ತಮ್ಮ ಖಾಸಗಿ ಕ್ಲಿನಿಕ್‌ಗಳಲ್ಲಿ ಇರುತ್ತಾರೆ. ಶಾಸಕರು ಖಾಸಗಿ ಆಸ್ಪತ್ರೆಗಳ ಮಾಲೀಕರ ಪರವಾಗಿದ್ದಾರೆ. ಬಡವರ ಮೇಲೆ ಕಾಳಜಿಯಿಲ್ಲ” ಎಂದು ದೂರಿದರು.

“ಈ ಕುರಿತು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಶಕ್ತಿ ಯೋಜನೆ ಫಲ; ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ ₹55 ಲಕ್ಷ ಸಂಗ್ರಹ

“ರಿಮ್ಸ್ ಬೋಧಕ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಮತ್ತು ಒಳರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಧೋರಣೆಯಡಿ ಕರ್ತವ್ಯಲೋಪ ಎಸಗಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ರಿಮ್ಸ್ ಡೀನ್ ಡಾ.ಬಸವರಾಜ ಪಿರಾಪುರ, ರಿಮ್ಸ್ ಆಡಳಿತ ಅಧಿಕಾರಿ ಡಾ.ಹಂಪಣ್ಣ ಸಜ್ಜನ್ ಮತ್ತು ಮೆಡಿಕಲ್ ಸೂಪರಡೆಂಟ್ ಭಾಸ್ಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ವೈದ್ಯಕೀಯ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಕಾನೂನ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಜಿಲ್ಲಾ ಸಮಿತಿಯ ಮುಖಂಡ ಡಿಂಗ್ರಿ ನರಸಪ್ಪ, ನೀಲಕಂಠ, ಎಲ್ ವಿ ಸುರೇಶ, ಹನುಮೇಶ ಅರೋಲಿ, ಜಿ ನರಸಿಂಹ ಕುರ್ಡಿ, ಫಕ್ರುದ್ದೀನ್ ಅಲಿ ಅಹ್ಮದ್, ಪ್ರದೀಪ, ತಿಕ್ಕಯ್ಯ, ವಿಜಯ ಕುಮಾರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...