ದಲಿತರು ಸಿಎಂ ಸ್ಥಾನ ಬೇಡದೇ; ಹಕ್ಕಾಗಿ ಮಂಡಿಸಬೇಕು: ಲೇಖಕ ಸಿ. ಹರಕುಮಾರ್

Date:

ಮೈಸೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ದಸಂಸ ರಾಜ್ಯ ಸಂಚಾಲಕ ದಿ. ಲಕ್ಷ್ಮಿನಾರಾಯಣ ನಾಗವಾರ ಅವರ ಪ್ರಥಮ ವರ್ಷದ ಸ್ಮರಣಾರ್ಥ ನಡೆದ ‘ಗುರಿಮುಟ್ಟದ ದಲಿತ ರಾಜಕಾರಣ ಮತ್ತು ಮುಂದಿನ ನಡೆ’ ವಿಚಾರ ಸಂಕೀರಣದಲ್ಲಿ ಮಾತನಾಡಿದ ಲೇಖಕ ಸಿ. ಹರಿಕುಮಾರ್, ‘ದಲಿತರು ಸಿಎಂ ಸ್ಥಾನಕ್ಕಾಗಿ ಬೇಡದೇ, ಹಕ್ಕಾಗಿ ಮಂಡಿಸಬೇಕು’ ಎಂದು ಕಿವಿಮಾತು ಹೇಳಿದರು.

“ಸಿದ್ದರಾಮಯ್ಯ ಅಹಿಂದ ನಾಯಕರಾಗಿ, ಕೋಮುವಾದಿಗಳ ಕಡು ವಿರೋಧಿಯಾಗಿ ಗುರುತಿಸಿಕೊಂಡು, ಕಂದಾಚಾರ, ಮೌಢ್ಯಗಳನ್ನು ದಿಕ್ಕರಿಸಿ ರಾಜಕಾರಣದ ವಿಚಾರ ಬಂದಾಗ ಅಧಿಕಾರಕ್ಕಾಗಿ ಬೇಡಿಕೆಯ ಹಕ್ಕನ್ನು ಸಮರ್ಥವಾಗಿ ಮಂಡಿಸುತ್ತಾರೆ. ಎಲ್ಲಾ ಸಮುದಾಯದವರನ್ನು ತಮ್ಮೊಟ್ಟಿಗೆ ಕರೆದೊಯ್ಯುವ ಚಾಣಾಕ್ಷತನ ಎರಡು ಬಾರಿ ಮುಖ್ಯಮಂತ್ರಿಯಾಗುವಂತೆ ಮಾಡಿದೆ. ಇದುವರೆಗೆ ದಲಿತರು ಹಕ್ಕು ಮಂಡಿಸದೆ, ಕೇವಲ ಬೇಡುವುದೇ ಆಗಿರುವುದು ಸಮಾಜದ ಹಿನ್ನಡೆಗೆ ಕಾರಣ. ಸಚಿವ ಸತೀಶ್ ಜಾರಕಿಹೊಳಿ 2028ಕ್ಕೆಮುಖ್ಯಮಂತ್ರಿಹುದ್ದೆ ಕೇಳುವುದಾಗಿ ಹೇಳಿದ್ದಾರೆ. ಆದರೇ, ಹಕ್ಕು ಮಂಡಿಸುತಿಲ್ಲ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, “ದಲಿತರ ಮುಂದಿನ ನಡೆ ಅಧಿಕಾರ ಹಿಡಿಯುವ ಕಡೆಗೆ ಸಾಗಬೇಕಿದೆ. ಕೇವಲ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟರೆ ಸಾಲದು. ಆರಂಭದಲ್ಲಿಯೇ ಷರತ್ತು ವಿಧಿಸಿ ಬೆಂಬಲ ಕೊಡುವಂತೆ ಹೇಳಿದ್ದೆ. ಆದರೇ, ಮುಖಂಡರು ಈ ಬಾರಿ ಸಮುದಾಯಕ್ಕೆ ಅಧಿಕಾರ ಸಿಗಲಿದೆ ಎನ್ನುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದರು. ಇದರಿಂದ, ರಾಜಕೀಯ ಶಕ್ತಿ ಹೊಂದುವ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್ ಮಾತನಾಡಿ, “ಅಹಿಂದ ವರ್ಗ ಇರುವುದು ತಮಗಾಗಿ ಮಾತ್ರವೋ, ಇಲ್ಲಾ ಎಲ್ಲಾ ಸಮುದಾಯಗಳ ಒಳಗೊಳ್ಳುವಿಕೆಗೆ ಎಂಬುದನ್ನು ಸಿಎಂ ಸಿದ್ದರಾಮಯ್ಯನವರು ಅರಿತುಕೊಳ್ಳಬೇಕು. ದಲಿತರನ್ನು ಕೇವಲ ಮತ ಬ್ಯಾಂಕಾಗಿ ಬಳಸುವುದನ್ನು ಮೊದಲು ನಿಲ್ಲಿಸಬೇಕು. ರಾಜ್ಯದಲ್ಲಿ ಉನ್ನತ ಸ್ಥಾನಮಾನಗಳನ್ನು ನೀಡುವುದರ ಮೂಲಕ ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನಾಮಧಾರಿ ಗೌಡ ಸಮುದಾಯವನ್ನು ಪ್ರವರ್ಗ 2ಎ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕ ಬೆಂಬಲ: ಹೆಚ್ ಡಿ ಕುಮಾರಸ್ವಾಮಿ

ವಿಚಾರಸಂಕೀರಣದಲ್ಲಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಸಂಸ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ, ವಿಭಾಗಿಯ ಸಂಚಾಲಕ ರಾಜಶೇಖರ್ ಕೋಟೆ, ಜಿಲ್ಲಾ ಸಂಚಾಲಕ ಸರಗೂರು ಸಣ್ಣಸ್ವಾಮಿ,ರಾಜ್ಯ ದಲಿತ ಮಹಿಳಾ ಒಕ್ಕೂಟದ ಸಂಚಾಲಾಕಿ ಜಾನಕಮ್ಮ ಲಕ್ಸ್ಮಿ ನಾರಾಯಣ ನಾಗವಾರ, ರಾಜ್ಯ ಕಾರ್ಯಕಾರಿ ಸಂಚಾಲಕ ಭುಗತಗಳ್ಳಿ ಕೆ. ಮಣಿಯಯ್ಯ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...