ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಹಾಳಾದ ಸರ್ವೀಸ್‌ ರಸ್ತೆ; ಮಣ್ಣು ಸುರಿದ ಅಧಿಕಾರಿಗಳು

Date:

  • ಒಂದೇ ಮಳೆಗೆ ಕೊಚ್ಚಿಹೋದ ಸರ್ವೀಸ್‌ ರಸ್ತೆ
  • ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹ

ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್‌ ರಸ್ತೆ ಒಂದೆಡೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವೀಸ್‌ ರಸ್ತೆಯನ್ನು ಸರಿಪಡಿಸುವ ಬದಲಿಗೆ ರಸ್ತೆ ಮೇಲೆ ಕಲ್ಲು–ಮಣ್ಣು ಸುರಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

“ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಾಮನಗರ–ಚನ್ನಪಟ್ಟಣ ಬೈಪಾಸ್‌ ರಸ್ತೆಯ ಬಿಳಗುಂಬ ಅಂಡರ್‌ಪಾಸ್‌ದಲ್ಲಿ (ನೇಟಸ್‌ ಶಾಲೆ ಸಮೀಪ) ಮಳೆ ನೀರು ನಿಲ್ಲುತ್ತದೆ. ಒಂದು ದಿನ ಸುರಿದ ಮಳೆಯ ರಭಸಕ್ಕೆ ಇಲ್ಲಿನ ಸರ್ವೀಸ್‌ ರಸ್ತೆಯು ಹತ್ತಾರು ಅಡಿಗಳವರೆಗೆ ಭಾಗಶಃ ಕೊಚ್ಚಿ ಹೋಗಿದೆ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿತ್ತು ಹೋದ ಈ ರಸ್ತೆಯ ಫೋಟೊಗಳನ್ನು ಪ್ರಯಾಣಿಕರೊಬ್ಬರು ತಮ್ಮ ಫೇಸುಬುಕ್ ಖಾತೆಯಲ್ಲಿ ಜಿಪಿಎಸ್‌ ಲೊಕೇಶನ್‌ ಮಾಹಿತಿ ಸಹಿತ ಹಂಚಿಕೊಂಡಿದ್ದರು. ಈ ಫೋಟೊಗಳು ಜಾಲತಾಣದಲ್ಲಿ ಹರಿದಾಡಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಳಾಗಿದ್ದ ರಸ್ತೆಗೆ ಬೆಳ್ಳಂಬೆಳಿಗ್ಗೆ ಮಣ್ಣು ಸುರಿದು ಮುಚ್ಚಿದ್ದಾರೆ. ಅಲ್ಲಿಂದ ಸ್ವಲ್ಪ ದೂರದಲ್ಲಿಯೇ ರಸ್ತೆ ಇನ್ನಷ್ಟು ಹಾಳಾಗಿದ್ದು, ಅದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆ ಹಾಳಾಗಿರುವ ಮಾಹಿತಿ ಸಿಕ್ಕ ಬಳಿಕ ಅಧಿಕಾರಿಗಳು ಸೂಕ್ತವಾಗಿ ರಸ್ತೆ ದುರಸ್ತಿ ಕಾರ್ಯ ಮಾಡಬೇಕಿತ್ತು. ಆದರೆ, ರಸ್ತೆಗೆ ಮಣ್ಣು ಸುರಿದಿದ್ದಾರೆ. ಮತ್ತೊಂದು ಮಳೆ ಸುರಿದರೆ ಅದೂ ಕೊಚ್ಚಿ ಹೋಗುತ್ತದೆ. ಇದರಿಂದ ವಾಹನ ಸವಾರರಿಗೆ ಇನ್ನಷ್ಟು ತೊಂದರೆ ಉಂಟಾಗುತ್ತದೆ. ಹಾಗಾಗಿ ಎಲ್ಲೆಲ್ಲಿ ಸರ್ವೀಸ್ ರಸ್ತೆ ಹಾಳಾಗಿದೆ ಎಂಬುದನ್ನು ಗುರುತಿಸಿ ರಸ್ತೆ ದುರಸ್ತಿ ಮಾಡುವ ಕೆಲಸ ನಡೆಯಬೇಕು” ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...