ದಾಂಡೇಲಿ | ಕಾಡಿನಲಿ ಬಾನಾಡಿಗಳ ಸಮ್ಮಿಲನ: ಜನೆವರಿ 16ರಿಂದ ಅದ್ದೂರಿ ‘ಹಾರ್ನ್‌ಬಿಲ್ ಪಕ್ಷಿ ಹಬ್ಬ’

Date:

ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿಯ ಅಪ್ರತಿಮ ಸೌಂದರ್ಯದ ಗಣಿಯಾಗಿರುವ ದಾಂಡೇಲಿ ಅರಣ್ಯ ಪ್ರದೇಶವು ಮತ್ತೊಮ್ಮೆ ಪಕ್ಷಿ ಪ್ರೇಮಿಗಳ ಸಮ್ಮಿಲನಕ್ಕೆ ಸಜ್ಜಾಗುತ್ತಿದೆ.

ಪ್ರತಿ ವರ್ಷ ಜನವರಿ 5 ರಂದು ಆಚರಿಸಲಾಗುವ ‘ರಾಷ್ಟ್ರೀಯ ಪಕ್ಷಿ ದಿನ’ದ ಅಂಗವಾಗಿ, ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲದ ರಕ್ಷಣೆ ಮತ್ತು ಪರಿಸರ ಸಮತೋಲನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಖ್ಯಾತ ಪಕ್ಷಿ ತಜ್ಞ ರಾಹುಲ್ ಭಾವಾಜಿ ತಿಳಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಮಾನವನ ಹಸ್ತಕ್ಷೇಪ ಹಾಗೂ ಪರಿಸರ ಬದಲಾವಣೆಯಿಂದಾಗಿ ಪಕ್ಷಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅವುಗಳ ನೈಸರ್ಗಿಕ ವಾಸಸ್ಥಾನಗಳ ರಕ್ಷಣೆ ಮತ್ತು ಜೀವವೈವಿಧ್ಯದ ಮಹತ್ವವನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವುದು ಇಂದಿನ ತುರ್ತು ಅಗತ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000429165
ರಾಹುಲ್ ಭಾವಜಿ

ಈ ನಿಟ್ಟಿನಲ್ಲಿ ದಾಂಡೇಲಿಯ ಅರಣ್ಯ ಇಲಾಖೆಯ ವತಿಯಿಂದ ಜನವರಿ 16 ಮತ್ತು 17 ರಂದು ಆಯೋಜಿಸಲಾಗಿರುವ ‘ಹಾರ್ನ್‌ಬಿಲ್ ಪಕ್ಷಿ ಹಬ್ಬ’ವು ಪ್ರಕೃತಿ ಪ್ರೇಮಿಗಳಲ್ಲಿ ಹೊಸ ಸಂಚಲನ ಮೂಡಿಸಲಿದೆ. ದಕ್ಷಿಣ ಭಾರತದ ಪ್ರಮುಖ ಆಕರ್ಷಣೆಯಾಗಿರುವ ಈ ಹಾರ್ನ್‌ಬಿಲ್ ಹಬ್ಬಕ್ಕೆ ವಿವಿಧ ರಾಜ್ಯಗಳ ಪಕ್ಷಿ ವೀಕ್ಷಕರು, ಸಂಶೋಧಕರು ಹಾಗೂ ಛಾಯಾಗ್ರಾಹಕರು ಆಗಮಿಸುವ ನಿರೀಕ್ಷೆಯಿದೆ ಎಂದು ಕಾರ್ಯಕ್ರಮದ ಕುರಿತು ಭಾವಜಿ ಅವರು ಮಾಹಿತಿ ನೀಡಿದರು.

ಸ್ಥಳೀಯ ಯುವ ಸಮುದಾಯಕ್ಕೆ ಹಾಗೂ ಪ್ರಕೃತಿ ಬಗ್ಗೆ ಆಸಕ್ತಿಯುಳ್ಳವರಿಗೆ ಇದೊಂದು ಅತ್ಯುತ್ತಮ ಶೈಕ್ಷಣಿಕ ವೇದಿಕೆಯಾಗಲಿದೆ ಎಂದು ರಾಹುಲ್ ಭಾವಾಜಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ

ಪಕ್ಷಿ ವೀಕ್ಷಣೆ ಎಂಬುದು ಕೇವಲ ಕಾಲಹರಣದ ಹವ್ಯಾಸವಲ್ಲ, ಅದೊಂದು ರೋಮಾಂಚಕಾರಿ ವೈಜ್ಞಾನಿಕ ಅಧ್ಯಯನ” ಎನ್ನುತ್ತಾರೆ ಭಾವಾಜಿ. ಕಾಡಿನ ಮೌನದಲ್ಲಿ ಪಕ್ಷಿಗಳ ಕಲರವ ಆಲಿಸುವುದು ಮನಸ್ಸಿಗೆ ನೆಮ್ಮದಿ ನೀಡುವುದಲ್ಲದೆ, ದೈಹಿಕ ಆರೋಗ್ಯಕ್ಕೂ ಪೂರಕವಾಗಿದೆ.

ಪಕ್ಷಿಗಳ ಆಹಾರ ಪದ್ಧತಿ, ಗೂಡು ಕಟ್ಟುವ ಕಲೆ, ಅವುಗಳ ಸಂತಾನೋತ್ಪತ್ತಿ ಕ್ರಿಯೆ ಹಾಗೂ ಬೇಟೆಯಾಡುವ ಕೌಶಲ್ಯಗಳನ್ನು ಹತ್ತಿರದಿಂದ ಗಮನಿಸುವುದು ಒಂದು ಅಪರೂಪದ ಅನುಭವ. ಇಂತಹ ಸೂಕ್ಷ್ಮ ವಿಷಯಗಳನ್ನು ದಾಖಲಿಸಿಕೊಳ್ಳುವುದು ಪ್ರವಾಸೋದ್ಯಮದ ಬೆಳವಣಿಗೆಗೂ ಪೂರಕವಾಗಲಿದೆ.

ಪ್ರಕೃತಿಯ ಅತಿಥಿಗಳಾದ ಪಕ್ಷಿಗಳನ್ನು ಪ್ರೀತಿಸೋಣ ಮತ್ತು ಅವುಗಳ ಸಂರಕ್ಷಣೆಗೆ ಕೈಜೋಡಿಸೋಣ ಎಂಬ ಆಶಯದೊಂದಿಗೆ ದಾಂಡೇಲಿಯ ಈ ಪಕ್ಷಿ ಹಬ್ಬಕ್ಕೆ ಅರಣ್ಯ ಇಲಾಖೆ ಮತ್ತು ಪಕ್ಷಿ ಪ್ರೇಮಿಗಳು ಸ್ವಾಗತ ಕೋರುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...