ದಾಂಡೇಲಿ | ವಾಣಿಜ್ಯ ಸೈಟ್‌ ಹಂಚಿಕೆ ವಿವಾದ: ಪೌರಾಯುಕ್ತ ಸೇರಿ ಮೂವರಿಗೆ ಲೋಕಾಯುಕ್ತ ನೋಟಿಸ್‌

Date:

ದಾಂಡೇಲಿ: ನಗರಸಭೆಯ ವ್ಯಾಪ್ತಿಯ ವಾಣಿಜ್ಯ ಸೈಟ್ ಅಕ್ರಮ ಹಂಚಿಕೆ ಪ್ರಕರಣ ಹೊಸ ತಿರುವು ಪಡೆದಿದೆ. ಆಶ್ರಯ ಮನೆ ಯೋಜನೆಯ ಅಡಿಯಲ್ಲಿ ವಾಣಿಜ್ಯ ಸೈಟೊಂದು ಅಕ್ರಮವಾಗಿ ಹಂಚಿಕೆಯಾಗಿದೆ ಎಂಬ ದೂರಿನ ಆಧಾರದ ಮೇಲೆ ಲೋಕಾಯುಕ್ತರು ದಾಂಡೇಲಿ ನಗರಸಭೆಯ ಪೌರಾಯುಕ್ತರು ಹಾಗೂ ಇಬ್ಬರು ನೌಕರರಿಗೆ ನೋಟಿಸ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿಯ ಪ್ರಕಾರ, 2019ರಲ್ಲಿ ನಗರಸಭೆಯ ವ್ಯಾಪ್ತಿಯ ಸರ್ವೇ ನಂ. 3122ರ ಸೈಟನ್ನು ಆಶ್ರಯ ಪ್ಲಾಟ್ ಎಂದು ತೋರಿಸಿ, ಜೋಯಿಡಾ ತಾಲ್ಲೂಕಿನ ಕೊಂಡಪಾ ಗ್ರಾಮದ ನಿವಾಸಿ ವೆಂಕಟೇಶ್ ಸುಬ್ಬಯ್ಯ ಎಂಬುವವರಿಗೆ ಹಂಚಲಾಗಿತ್ತು, ಆದರೆ ಕೆಲವೇ ದಿನಗಳಲ್ಲಿ ಆ ಸೈಟನ್ನು ಜಲಜಾಕ್ಷಿ ಬೊಮ್ಮಯ್ಯ ನಾಯಕ ಎಂಬುವವರ ಹೆಸರಿಗೆ ಪರಭಾರೆ ಮಾಡಲಾಗಿದೆ. ಸೈಟ್ ಸಿಕ್ಕ ಕೇವಲ ನಾಲ್ಕು ದಿನಗಳಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಬೇರೆ ಅವರ ಹೆಸರಿಗೆ ನೊಂದಣಿ ಆಗಿರುವುದರಿಂದ ಈ ಪ್ರಕರಣದ ಸುತ್ತ ಅನುಮಾನ ವ್ಯಕ್ತವಾಗಿದೆ.

ಈ ಘಟನೆ ದಾಂಡೇಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಿವಾನಂದ ಗಗ್ಗರಿ ಅವರ ಗಮನಕ್ಕೆ ಬಂದು, ಅವರು ಕಾರವಾರ ಲೋಕಾಯುಕ್ತ ಎಸ್ಪಿಗೆ ಲಿಖಿತ ದೂರು ಸಲ್ಲಿಸಿದ್ದರು. ಆ ದೂರಿನ ಆಧಾರದ ಮೇಲೆ ಬೆಂಗಳೂರು ಉಪ ಲೋಕಾಯುಕ್ತರು ತನಿಖೆ ಪ್ರಾರಂಭಿಸಿ, ನಗರಸಭೆಯ ಪೌರಾಯುಕ್ತರು, ಇಬ್ಬರು ಎಸ್‌ಡಿಎಗಳು ಮತ್ತು ಹಳಿಯಾಳ ಸಬ್‌ ರಿಜಿಸ್ಟ್ರಾರ್‌ ಅಧಿಕಾರಿಗಳಿಗೆ ನೋಟಿಸ್‌ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ದೂರುದಾರರ ಪ್ರಕಾರ, 50 ಲಕ್ಷ ಮೌಲ್ಯದ ಸೈಟ್‌ನ್ನು ಕೇವಲ ಹತ್ತು ಸಾವಿರ ರೂಪಾಯಿಗೆ ಹಂಚಿ, ನಗರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ. ಹಾಗೂ ಆಶ್ರಯ ಯೋಜನೆಯಡಿ ಸಿಕ್ಕ ಪ್ಲಾಟ್ ಅನ್ನು ಹದಿನೈದು ವರ್ಷಗಳವರೆಗೂ ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ. ಕೇವಲ ನಾಲ್ಕು ದಿನಗಳಲ್ಲೇ ಸೈಟ್‌ ಹಂಚಿಕೆಯಾಗಿ ನಂತರ ಖರೀದಿಯಾಗಿದ್ದು ಗಮನಿಸಿದರೆ ಅಕ್ರಮದ ಶಂಕೆ ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಪುರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ! ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಕೆ.

ಈ ಹಿನ್ನೆಲೆಯಲ್ಲಿ ಸೈಟ್‌ ಮಂಜೂರಾದ ವ್ಯಕ್ತಿ ವೆಂಕಟೇಶ ಸುಬ್ಬಯ್ಯ ತಾನು ಆಶ್ರಯ ಸೈಟ್ ಗೆ ಅರ್ಜಿ ಸಹ ಹಾಕಿಲ್ಲ. ತನಗೆ ಸೈಟ್ ಮಂಜೂರಾದ‌ ಸಂಗತಿ ಗೊತ್ತಿಲ್ಲ. ನನಗೆ ಗೊತ್ತಿಲ್ಲದೆ ನನ್ನನ್ನು ವಂಚಿಸಿ,‌ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನನ್ನ ಸಹಿ ಪಡೆಯಲಾಗಿದೆ‌ . ಸೈಟ್ ಪಡೆದವರು ನನಗೆ ಮೋಸ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ, ಲೋಕಾಯುಕ್ತರಿಗೆ ಅಫಿಡೆವಿಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಮಹತ್ವ ಪಡೆಯಲು ಮತ್ತೊಂದು ಕಾರಣವೆಂದರೆ, ಸೈಟ್ ಖರೀದಿಸಿದ ಜಲಾಜಾಕ್ಷಿ ನಾಯಕ ,ಅವರು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬೊಮ್ಮಯ್ಯ ನಾಯಕ ವಾಸರೆ ಅವರ ಪತ್ನಿಯಾಗಿದ್ದು, ಪ್ರಕರಣ ಮಹತ್ವ ಪಡೆಯಲು ಕಾರಣವಾಗಿದೆ. ಲೋಕಾಯುಕ್ತರು ದಾಂಡೇಲಿ ನಗರಸಭೆಯ ಹಾಲಿ ಪೌರಾಯುಕ್ತರು, ಎಸ್ ಡಿಎ ಗಳಾದ ಬಿ.ಎಫ್.ಗವಾಸ್ , ಹನುಮಂತ ಉಪ್ಪಾರ ಅವರಿಂದ ಸೈಟ್ ನ ದಾಖಲೆಗಳು ಹಾಗೂ ಆಕ್ಷೇಪಣೆಯನ್ನು ವಾರದಲ್ಲಿ ಸಲ್ಲಿಸುವಂತೆ ಸೂಚಿಸಿ. ಹಾಗೂ ಹಳಿಯಾಳ ಸಬ್ ರಿಜಿಸ್ಟ್ರಾರ್ ಅವರಿಂದ ಮಾಹಿತಿ ಕೇಳಿದ್ದು,‌ ಈ ಪ್ರಕರಣದ‌ ಬಗ್ಗೆ ಆದ ವಹಿವಾಟು, ದಾಖಲೆಗಳು ಹಾಗೂ ವಾಸ್ತವ ವರದಿಯನ್ನು ಈಗಾಗಲೇ ಅವರು ಲೋಕಾಯುಕ್ತರ ಕಚೇರಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...