ದಾಂಡೇಲಿ | ಅಧಿಕಾರಾವಧಿ ಮುಗಿಯುವ ಮುನ್ನ ನಗರಸಭೆ ಸದಸ್ಯರ ಹೈದ್ರಾಬಾದ್ ಪ್ರವಾಸ; ಚರ್ಚೆಗೆ ಕಾರಣ

Date:

ದಾಂಡೇಲಿ: ನಗರಸಭಾ ಸದಸ್ಯತ್ವದ ಅವಧಿ ಮುಗಿಯಲು ಕೇವಲ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿ, ದಾಂಡೇಲಿ ನಗರಸಭೆಯ ಪೌರಾಯುಕ್ತರು, ಆಡಳಿತಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರನ್ನೊಳಗೊಂಡ ಸುಮಾರು 30 ಮಂದಿ ತಂಡ ಹೈದ್ರಾಬಾದಿಗೆ ಅಧ್ಯಯನ ಪ್ರವಾಸ ಕೈಗೊಂಡಿದೆ. ನಗರಸಭೆ ತಂಡ ಕಸದಿಂದ ಇಂಧನ ಉತ್ಪಾದನೆ ಪ್ರಕ್ರಿಯೆ ಕುರಿತು ಸಮಗ್ರ ಅಧ್ಯಯನ ಮಾಡುವ ಉದ್ದೇಶದಿಂದ ಈ ಪ್ರವಾಸ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರವಾಸ ಇದೀಗ ನಗರದಲ್ಲಿ ಚರ್ಚೆಯ ವಿಷಯವಾಗಿದೆ. ಹೈದ್ರಾಬಾದ್‌ನ ದಕ್ಷಿಣ ಭಾರತದ ಪ್ರಪ್ರಥಮ ಕಸದಿಂದ ಇಂಧನ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಸದಸ್ಯರು ಅಲ್ಲೇ ನಿಂತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ, ರಸ್ತೆಗಳ ಗುಂಡಿಗಳು ಹಾಗೂ ಧೂಳಿನ ತೊಂದರೆಗಳಿಂದ ಜನತೆ ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಲಕ್ಷಗಟ್ಟಲೆ ಹಣವನ್ನು ನಗರಸಭೆ ನಿಧಿಯಿಂದ ಖರ್ಚುಮಾಡಿ ಟೂರ್‌ಗೆ ತೆರಳಿರುವುದು ಸಾರ್ವಜನಿಕ ಟೀಕೆಗೆ ಗ್ರಾಸವಾಗಿದೆ.

ಸದಸ್ಯರ ಅಧಿಕಾದ ಅವಧಿ ಇದೆ ಅಕ್ಟೋಬರ್ 31ರಂದು ಮುಗಿಯುತ್ತದೆ ಈ ಸಂದರ್ಭದಲ್ಲಿ, ಅಧ್ಯಯನ ಯಾತ್ರೆಯಿಂದ ನಗರಕ್ಕೆ ಏನು ಪ್ರಯೋಜನವಾಗಲಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಆಡಳಿತ ಪಕ್ಷದ ಸದಸ್ಯರ ಲೋಪ ದೋಷಗಳನ್ನು ವಿರೋಧಿಸಬೇಕಾದ ವಿರೋಧ ಪಕ್ಷದ ನಗರಸಭಾ ಸದಸ್ಯರು ಅವರೊಟ್ಟಿಗೆ ಕೈ ಜೋಡಿಸಿ ಯಾತ್ರೆ ಹೊರಟಿದ್ದು ಟೀಕೆಗೆ ಗುರಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತಾವಧಿ ನವೆಂಬರ್ 9ರೊಳಗೆ ಮುಗಿಯಲಿದೆ. ದಾಂಡೇಲಿ ನಗರಸಭೆಯ ಆಡಳಿತಾವಧಿ ಅಕ್ಟೋಬರ್ 31 ರಂದು ಮುಗಿಯಲಿದೆ ಎಂದು ಮಾಹಿತಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕರ್ನಾಟಕ ಬ್ಯಾಂಕ್‌ನಲ್ಲಿ ₹3.51 ಕೋಟಿ ರೂ.ಗಳ ವಂಚನೆ ಬೆಳಕಿಗೆ; ಪ್ರಕರಣ ದಾಖಲು.

ಈ ಹಂತದಲ್ಲಿ ಮತ್ತೇ ಸದ್ಯದಲ್ಲಿ ನಗರಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ. ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ. ಹೀಗಿರುವಾಗ ನಗರಸಭೆ ಬೊಕ್ಕಸಕ್ಕೆ ಖರ್ಚು ಹಾಕಿ ನಗರೋದ್ಧಾರಕ್ಕಾಗಿ ಅಧ್ಯಯನ ಮಾಡಿ ಬಂದಿರುವ ನಗರಸಭಾ ಸದಸ್ಯರ ಅವಧಿಯೇ ಮುಗಿಯುತ್ತಿರುವಾಗ ಈ ಅಧ್ಯಯನ ಪ್ರವಾಸದಿಂದ ನಗರಕ್ಕೇನು ಉಪಯೋಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...