ಮಂಡ್ಯ | ಹೊಳಲು ಗ್ರಾಮದ ರಸ್ತೆ ಕಾಮಗಾರಿಗೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Date:

ಮಂಡ್ಯ ತಾಲ್ಲೂಕು ಹೊಳಲು ಗ್ರಾಮದಲ್ಲಿ ಕರ್ನಾಟಕ ಭೂಸೇನಾ ನಿಗಮ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಂದಾಜು ₹2.9 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಿದರು.

ಹೊಳಲು ಗ್ರಾಮದ ಚಿಕ್ಕಬೀದಿ, ದೊಡ್ಡ ಬೀದಿ, ಚರಂಡಿ ಕಾಂಕ್ರೀಟ್ ರಸ್ತೆ ಹಾಗೂ ಗ್ರಾಮದ ಕೆರೆ ಏರಿಯಿಂದ ಗದ್ದೆಯ ಕಡೆಗೆ ಸರಿ ಸುಮಾರು ನಾಲ್ಕು ಕಿಲೋಮೀಟರ್ ಡಾಂಬರ್ ರಸ್ತೆ ಕಾಮಗಾರಿ ನಡೆಯಲಿದೆ. ಚಿಕ್ಕ ಬೀದಿ ರಸ್ತೆಗೆ ₹45 ಲಕ್ಷ, ದೊಡ್ಡ ಬೀದಿ ರಸ್ತೆಗೆ ₹45 ಲಕ್ಷ ಒಟ್ಟು ₹90 ಲಕ್ಷ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ₹2 ಕೋಟಿ ರೂಪಾಯಿ ಅನುದಾನದಲ್ಲಿ ರೈತರಿಗೆ ಅನುಕೂಲ ಆಗುವಂತೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿರುವುದಾಗಿ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಯುವಜನತೆ ಮತದಾನದ ಮಹತ್ವ ಅರಿಯಬೇಕು: ನ್ಯಾ. ಈಶ್ವರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಎಚ್.ಬಿ. ರಾಮು, ಗ್ರಾಮ ಪಂಚಾಯತಿ ಅಧ್ಯಕ್ಷೆ ರಮ್ಯ ಚೇತನ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಲ್. ಅಭಿನಂದನ್, ಅರ್ಪಿತ, ಮಾಜಿ ಉಪಾಧ್ಯಕ್ಷ ನಾರಾಯಣಪ್ಪ, ಡೈರಿ ಅಧ್ಯಕ್ಷ ಸಾವಿತ್ರಮ್ಮ, ಸೊಸೈಟಿ ಅಧ್ಯಕ್ಷ ಸಚ್ಚಿದಾನಂದ, ಮಾಜಿ ಅಧ್ಯಕ್ಷ ನಿಂಗೇಗೌಡ, ಗ್ರಾಮದ ಮುಖಂಡರಾದ ಸದಾನಂದ, ಜೆಟ್ಟಿ ಕುಮಾರ್, ಪಟೇಲ್ ರಾಮ್, ತಿಮ್ಮೇಗೌಡ, ತಾಂಡವಯ್ಯ, ಶಿವಪ್ಪ, ತಂಟಿರ ಶಿವಪ್ಪ, ರಾಜಶೇಖರ್, ವಿನೋದ್, ಎಚ್.ಬಿ. ಕೃಷ್ಣ, ಚೇತನ್, ಬಾಬು, ನಿಂಗರಾಜಮ್ಮ, ಪದ್ಮ, ತಾಂಡವೇಶ್ವರ ದೇವಸ್ಥಾನದ ಅರ್ಚಕ ದೀಪು ದೀಕ್ಷಿತ್, ಕಿರಿಯ ಕಾರ್ಯಪಾಲಕ ಇಂಜಿನಿಯರ್ ಕೆಂಪರಾಜು, ಸಹಾಯ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್, ಗುತ್ತಿಗೆದಾರರಾದ ಅಭಿನಂದನ್, ಚಂದನ್, ಶ್ಯಾಮ್ ಹಾಗೂ ಗ್ರಾಮಸ್ಥರು, ಸ್ಥಳೀಯ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರುಗಳು ಕಾಮಗಾರಿ ಚಾಲನಾ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...