ಬೀದರ್ | ದಾಸ ಸಾಹಿತ್ಯ ಸಂಶೋಧನೆಗೆ ‘ಪ್ರೊ. ವಸಂತ ಕುಷ್ಟಗಿ’ ಕೊಡುಗೆ ಅನನ್ಯ

Date:

ಭಕ್ತಿ ಸಾಹಿತ್ಯವು ಬದುಕಿನ ವಿಕಾಸಕ್ಕೆ ನೇರ ಸಂಸ್ಕಾರ ನೀಡಿ, ಶಾರೀರಿಕ ಮತ್ತು ಸಾಮಾಜಿಕ ಸ್ವಾಸ್ಥ್ಯಗಳನ್ನು ಸಂರಕ್ಷಿಸುವ ಸಾಧನಾ ಮಾರ್ಗವಾಗಿದೆ ಎಂದು ಔರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗ ಮುಖ್ಯಸ್ಥ ಡಾ. ಸಂಜೀವಕುಮಾರ ತಾಂದಳೆ ನುಡಿದರು.

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು ಬೀದರ ವತಿಯಿಂದ ನಗರದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಸ ಸಾಹಿತ್ಯ ಸಂಶೋಧಕರು ‘ಪ್ರೊ. ವಸಂತ ಕುಷ್ಟಗಿ ಅವರ ಬದುಕು ಮತ್ತು ಬರಹ’ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದಾಸರು ಜ್ಞಾನ ಸುಧೆಯನ್ನು ಹರಿಸಿ ವಿಶ್ವವನ್ನು ನೆಮ್ಮದಿಯಾಗಿರಿಸಲು ಸತ್ವದ ಸಾರವನ್ನು ಸುಲಭವಾಗಿ ಕನ್ನಡದಲ್ಲಿ ನೀಡಿದ್ದಾರೆ ಎಂದರು.

ಸಪ್ತಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಅನೀಲಕುಮಾರ ಜಾಧವ, ಪ್ರೊ. ವಸಂತ ಕುಷ್ಟಗಿ ಅವರ ಬದುಕು ಮತ್ತು ಬರಹ ಕುರಿತು ಉಪನ್ಯಾಸ ನೀಡಿ, ಪ್ರೊ. ಕುಷ್ಟಗಿ ತಮ್ಮ ಇಡೀ ಜೀವನನ್ನು ಸಾಹಿತ್ಯ ಸೇವೆ ವಿಶೇಷವಾಗಿ ದಾಸ ಸಾಹಿತ್ಯ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ಮುಡಿಪಾಗಿದ್ದರು. ಅವರ ಕನ್ನಡ ಸಾಹಿತ್ಯದ ಸಂಶೋಧನಾ ಮತ್ತು ಸಂಪಾದಿತ ಕೃತಿಗಳು ಅತ್ಯಮೂಲ್ಯಗಳಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಕಾರ್ಯದರ್ಶಿ ಗೋವಿಂದರಾವ ತಾಂದಳೆ ಮಾತನಾಡಿ, ಜೀವನಕ್ಕೆ ಸಂಸ್ಕಾರ ನೀಡುವ ಸಾಹಿತ್ಯ ಪ್ರಚಾರ ನಿರಂತರವಾಗಿ ಜರುಗಲಿ ಎಂದು ಆಶಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೈಗಳಿಗೆ ಬೇಡಿ ಹಾಕಿಕೊಂಡು ಪ್ರತಿಭಟನೆ

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಅಧ್ಯಕ್ಷ ಡಾ. ರವೀಂದ್ರ ಲಂಜವಾಡಕರ ಮಾತನಾಡಿ, ಕರ್ನಾಟಕ ಭಕ್ತಿ ಪಂಥದ ಸಾಹಿತ್ಯವು ಬದುಕಿಗೆ ಇಂಬನ್ನು ನೀಡುತ್ತದೆ. ಇಂತಹ ವಿಶ್ವಮಾನ್ಯ ಸಾಹಿತ್ಯವ್ನು ನಿರಂತರ ಪ್ರಚಾರ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಹೇಶ ಮೈಲೂರಕರ್, ಭಾಗ್ಯಶ್ರೀ ಝಡ್, ಇವಾಂಗಲಿ, ಸೌಮ್ಯ ಕೆ, ಜೆಸ್ಸಿಕಾ ರಾಣಿ , ಸಾಕ್ಷಿ ವಿ, ಕೀರ್ತನೆಗಳು ಮತ್ತು ಕುಷ್ಟಗಿ ರಸಿಸಿರುವ ಕವಿತೆ ಹಾಡಿದರು. ಮಹೇಬೂಬ್ ಉಸ್ತಾದ್ ನಿರೂಪಿಸಿದರು, ಕಾವೇರಿ ಸ್ವಾಗತಿಸಿದರು, ದುರ್ಗಾಂಜಲಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...