ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರಕಾರ ಹಿಂದೇಟು ಹಾಕುತ್ತಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

2023 -24 ಮತ್ತು 2024-24 ನೇ ಸಾಲಿನಲ್ಲಿ 25,391 ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅಭಿವೃದ್ಧಿಯ ಹಣವನ್ನು ದುರ್ಬಳಕ್ಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಣವನ್ನು ಅದೇ ಸಮಾಜದ ಅಭಿವೃದ್ಧಿಗೆ ವಾಪಸ್ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಸಮರ್ಪಕವಾಗಿ ನೀಡುತ್ತಿಲ್ಲ. ವಿದೇಶದಲ್ಲಿ ಎಸ್.ಸಿ, ಎಸ್.ಟಿ. ವ್ಯಾಸಂಗ ಮಾಡಲು ಪ್ರಬುದ್ಧ ಯೋಜನೆ ರದ್ದು ಮಾಡಲಾಗಿದೆ. ಪುನಃ ಆರಂಭಿಸಬೇಕೆಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ ಜಾರಿಯಾಗುವವರೆಗೂ ಕೇಂದ್ರ ಮತ್ತು ರಾಜ್ಯದ ಎಲ್ಲಾ ಉದ್ಯೋಗ ನೇಮಕಾತಿಗಳನ್ನು ಸ್ಥಗಿತಗೊಳಿಸಬೇಕು, ಖಾಸಗಿ ಉದ್ಯೋಗ ಕ್ಷೇತ್ರ ಮತ್ತು ಗುತ್ತಿಗೆ ನೇಮಕಾತಿಗಳಲ್ಲಿಯೂ ಎಸ್.ಸಿ, ಎಸ್.ಟಿ ಮೀಸಲಾತಿ ಜಾರಿ ಮಾಡಬೇಕು. ಕೇಂದ್ರ ಸರ್ಕಾರ ಕೂಡಲೇ ಎಸ್‌ಸಿ, ಎಸ್‌ಟಿ ಅಭಿವೃದ್ಧಿಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆ ರಚಿಸಿ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಹಣ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಉಪಾಧ್ಯಕ್ಷ ರಂಗಪ್ಪ ಕೋತಿಗುಡ್ಡ, ಎಂ. ಮನೋಹರ ಸಿರವಾರ, ರಾಜು ಬೊಮ್ಮ ನಾಳ, ಜಯರಾಜ್ ಟೈಗರ್, ಬಸವರಾಜ ನಾಡಂಗಿ ಕಲ್ಮಲ, ಹುಲುಗಪ್ಪ, ಯೇಸು, ಮೌನೇಶ, ಚಂದ್ರಪ್ಪ, ಬಸವರಾಜ, ಮಾರೆಪ್ಪ, ವಿಜಯ ಕುಮಾರ, ಆನಂದಪ್ಪ, ರಾಜಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...