ದಾವಣಗೆರೆ | ಒಳಮೀಸಲಾತಿ ತೀರ್ಪು ಶೀಘ್ರ ಜಾರಿಗೊಳ್ಳಬೇಕು: ದಸಂಸ ಮುಖಂಡ ಹೆಚ್ ಮಲ್ಲೇಶ್

Date:

ಸುಪ್ರೀಂಕೋರ್ಟಿನ ಒಳಮೀಸಲಾತಿ ತೀರ್ಪನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಚ್.ಮಲ್ಲೇಶ್ ಆಗ್ರಹಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯಗಳನ್ನು ಮೇಲೆತ್ತಲು ಸಹಾಯವಾಗುತ್ತದೆ ಎಂದು ಸ್ವಾತಂತ್ರ್ಯದ ನಂತರ ಮೀಸಲಾತಿಯನ್ನು ಅಳವಡಿಸಿದರು. ಅದರಂತೆ ಪರಿಶಿಷ್ಟ ಜಾತಿ ಒಳಗಿನ ಕೆಲ ಬಲಿಷ್ಠ ಮತ್ತು ಸಶಕ್ತ ಜಾತಿಗಳು ಮೀಸಲಾತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದಿರುವುದು ಮೀಸಲಾತಿ ಹಂಚಿಕೆಯಲ್ಲಿ ಕಾಣುತ್ತದೆ. ಕೆಲವು ಶೋಷಿತ ಸಮುದಾಯಗಳು ಮೀಸಲಾತಿ ಪ್ರಯೋಜನದಿಂದ ದೂರವೇ ಉಳಿದಿವೆ. ದೇಶದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ದಶಕಗಳ ಕಾಲದ ದೊಡ್ಡ ಪ್ರಮಾಣದ ನಿರಂತರ ಹೋರಾಟ. ಅಸಮಾನತೆಗೆ ಒಳಗಾದವರಿಗೆ ಸಮಾನ ಹಂಚಿಕೆ ಆಗಬೇಕಾದರೆ ಒಳಮೀಸಲಾತಿ ಜಾರಿ ಆಗಬೇಕು. ಈ ಕಾರಣದಿಂದ ಪರಿಶಿಷ್ಟ ಜಾತಿಗಳಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಉದ್ದೇಶದಿಂದ ಆ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಕಲಿಸಲು ಒಳ ಮೀಸಲಾತಿ ನೀಡುವ ಸಂವಿದಾನಿತ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಸಾರಿದೆ ಎಂದು ತಿಳಿಸಿದರು.

IMG 20240803 WA1419

ಪರಿಶಿಷ್ಟ ಜಾತಿಗಳು ಸಾಮಾಜಿಕವಾಗಿ ಏಕ ರೂಪಿಯಾಗಿಲ್ಲ ಎಂದು 7 ನ್ಯಾಯಾಮೂರ್ತಿಗಳ ಸಂವಿಧಾನ ಪೀಠವು ತಿಳಿಸಿದೆ. ಇ.ವಿ. ಚನ್ನಯ್ಯ ಮತ್ತು ಆಂಧ್ರಪ್ರದೇಶ ಸರ್ಕಾರದ ನಡುವಿನ ಪ್ರಕರಣದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಅವಕಾಶ ಇಲ್ಲ. ಏಕೆಂದರೆ ಪರಿಶಿಷ್ಟ ಜಾತಿ ಎಂಬುದೆ ಏಕರೂಪಿ ವರ್ಗ ಎಂದು ಸುಪ್ರೀಂ ಕೋರ್ಟಿನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ 2004 ರಲ್ಲಿ ನೀಡಿದ್ದ ತೀರ್ಪನ್ನು ಏಳು ನ್ಯಾಯಮೂರ್ತಿಗಳ ತೀರ್ಪು ರದ್ದುಪಡಿಸಿದೆ. ಸಂವಿಧಾನದ 15ನೇ ಹಾಗೂ 16ನೇ ವಿಧಿಗಳ ಅಡಿಯಲ್ಲಿ ಇರುವ ಅಧಿಕಾರವನ್ನು ಬಳಸಿ ರಾಜ್ಯ ಸರ್ಕಾರವು ಸಾಮಾಜಿಕ ಹಿಂದುಳಿದಿರುವಿಕೆಯ ಮಟ್ಟವನ್ನು ಗುರುತಿಸಲು ಹಾಗೂ ಮೀಸಲಾತಿಯಂತಹ ವಿಶೇಷ ಅವಕಾಶಗಳನ್ನು ಕಲ್ಪಿಸಲು ಮುಕ್ತವಾಗಿದೆ ಎಂದು ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಅಧಿವೇಶನ ಕರೆಯುವುದರ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿ ಮಾಡಬೇಕೆಂದು ಮಲ್ಲೇಶ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕಣ್ಣಾಳ್‌ ಅಂಜಿನಪ್ಪ, ಜಿ.ಎಸ್.ಲೋಕೇಶ್, ಸಮಾದಪ್ಪ, ನಿಂಗರಾಜ, ಅಣ್ಣಪ್ಪ ತಣಿಗೆರೆ, ಹೆಚ್.ಸಿ.ಮಲ್ಲಪ್ಪ, ಮಾಲತೇಶ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...