ದಾವಣಗೆರೆ | ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆ ಈಡೇರಿಸದ ಬಜೆಟ್;‌ ಅನುದಾನಕ್ಕೆ ಆಗ್ರಹ

Date:

2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎಸ್‌ ಎಲ್‌ ಆನಂದಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಪ್ರತಿ ಬಾರಿಯ ಆಯವ್ಯಯದಲ್ಲಿ ಸ್ಲಂ ನಿವಾಸಿಗಳು ನಿರೀಕ್ಷೆ ಮಾಡುವ ಬೇಡಿಕೆಗಳಾದ ವಸತಿ ಹಕ್ಕು ಖಾತ್ರಿ, ಸ್ಲಂ ಅಭಿವೃದ್ಧಿ ಮಸೂದೆ, ಸ್ಲಂ ಜನಸಂಖ್ಯೆಗೆ ಅನುಗುಣವಾಗಿ ಪಾಲು, ಲ್ಯಾಂಡ್ ಬ್ಯಾಂಕ್ ನೀತಿ, ನಿವೇಶನ ರಹಿತರ ಸಮಸ್ಯೆ, ನಗರ ಉದ್ಯೋಗ ಖಾತ್ರಿ, ಹಕ್ಕು ಪತ್ರ ಮತ್ತು ಕ್ರಯಪತ್ರಗಳ ತ್ವರಿತ ನೋಂದಣಿಗಳ ಬಗ್ಗೆ ಉಲ್ಲೇಖವಿರಲಿ ಪ್ರಸ್ತಾಪ ಕೂಡ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ವಸತಿ ಇಲಾಖೆಯ ಅಡಿಯಲ್ಲಿ 6ನೇ ಗ್ಯಾರಂಟಿಯಾಗಿ ಪ್ರಧಾನ ಮಂತ್ರಿ ಅವಾಸ್ ಯೋಜನೆ ಫಲಾನುಭವಿ ವಂತಿಕೆಯನ್ನು ಪೂರ್ಣವಾಗಿ ಭರಿಸಲು ತೀರ್ಮಾನಿಸಿದ್ದು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ 1,18,359 ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಶೀಘ್ರವಾಗಿ 48,796 ಮನೆಗಳನ್ನು ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸುವುದಾಗಿ ಹೇಳಲಾಗಿದೆ. ಅಲ್ಲದೇ ಫಲಾನುಭವಿ ವಂತಿಕೆಯನ್ನು 1ಲಕ್ಷಕ್ಕೆ ಏರಿಕೆ ಮಾಡಿರುವುದು, ರಾಜ್ಯ ಕೊಳಗೇರಿ ಜನರ ಸರ್ವತೋಮುಖ ಅಭಿವೃದ್ಧಿಗೆ ಸರಿಸುಮಾರು 1 ಸಾವಿರ ಕೋಟಿ ಬೇಕಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಆಯವ್ಯಯದಲ್ಲಿ ನಗರಗಳ ಜೀವನಾಡಿಯಾಗಿ ಕೊಳಗೇರಿಗಳಲ್ಲಿ ವಾಸ ಮಾಡುತ್ತಿರುವ ಜನಗಳಿಗೆ ಹಾಗೂ ಕೊಳಗೇರಿ ಪ್ರದೇಶಗಳ ಮೂಲ ಸೌಕರ್ಯನ್ನೊಳಗೊಂಡ ಅಭಿವೃದ್ಧಿಗೆ, ಕೊಳಗೇರಿ ನಿವಾಸಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಂಡು ಶೀಘ್ರವೇ ಅನುದಾನ ತೆಗೆದಿರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಚಿವ ಮಧು ಬಂಗಾರಪ್ಪ

ಪ್ರಧಾನ ಕಾರ್ಯದರ್ಶಿ ಜಿ ಎಚ್ ರೇಣುಕಾ ಯಲ್ಲಮ್ಮ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಉಪ ಹಂಚಿಕೆ ಅಡಿಯಲ್ಲಿ 39,000 ಕೋಟಿ ನಿಗದಿ ಮಾಡಿದ್ದು, ಇದು ನೇರವಾಗಿ ಕೈ ಸೇರಬೇಕಿದೆ. ಅಧಿಕಾರಿಗಳ ಜಾತಿ ತಾರತಮ್ಯ, ಬೇಜವಾಬ್ದಾರಿ ಮನೋಧೋರಣೆಯಿಂದಾಗಿ ಪ್ರತಿ ವರ್ಷ ಖರ್ಚಾಗಾದೆ ಉಳಿಕೆ ಆಗುತ್ತಿರುವ ಅನುದಾನದ ಬಳಕೆಯ ಬಗ್ಗೆ ಸರ್ಕಾರ ಗಮನ ವಹಿಸಬೇಕು. ಅಂತಹ ಅಧಿಕಾರಿಗಳ ಮೇಲೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯಿದೆಯ ಸೆಕ್ಷನ್ 24ರ ಕರ್ತವ್ಯ ಲೋಪದಡಿಯಲ್ಲಿ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಸಮಿತಿಯ ಅಧ್ಯಕ್ಷ ಎಂ ಶಬೀರ್‌ ಸಾಬ್, ಮಂಜುಳಾ, ಮಹಮ್ಮದ್ ಯೂಸುಫ್, ಮೆಹಬೂಬ್ ಸಾಬ್‌, ಜಂಶಿದಾಬಾನು ಸೇರಿದಂತೆ ಇತರ ಸದಸ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...