ದಾವಣಗೆರೆ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಎಐಕೆಕೆಎಂಎಸ್‌ನಿಂದ ಪ್ರತಿಭಟನೆ

Date:

ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ರೈತರ ಜೀವನೋಪಾಯಕ್ಕೆ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಹಾಗೂ ಸದಸ್ಯರು ದಾವಣಗೆರೆ ನಗರದ ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿ, ನಂತರ ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿಭಟನೆ ಯಲ್ಲಿ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ಸತೀಶ್ ಕೈದಾಳೆ, ಹಲವು ದಶಕಗಳಿಂದಲೂ ಕಂದಾಯ ಹಾಗೂ ಅರಣ್ಯದಂಚಿನ ಜಮೀನಿನಲ್ಲಿ ರಾಜ್ಯದಾದ್ಯಂತ ಬಡ ರೈತರು ಸಾಗುವಳಿ ಮಾಡುತ್ತಿದ್ದಾರೆ. ಆದರೆ ಹಿಂದಿನ ಸರ್ಕಾರವಾಗಲಿ, ಈಗ ಅಧಿಕಾರದಲ್ಲಿರುವ ಸರ್ಕಾರವಾಗಲಿ ಉಳುಮೆಗೆ ಅವಕಾಶ ಕೊಟ್ಟಿದ್ದರು. ಸಾಗುವಳಿ ಮಾಡುತ್ತಿರುವ ಎಲ್ಲರಿಗೂ ಹಕ್ಕುಪತ್ರವನ್ನು ನೀಡಲು ಅವಶ್ಯಕ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

1002032647

ಶಾಸನಬದ್ದವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರು ಸಮಾಜದಲ್ಲಿನ ಇತರೆ ಜನರಂತೆ ನಿಶ್ಚಿತ ಬದುಕು ರೂಪಿಸಿಕೊಳ್ಳಲಾಗದೆ ದಶಕಗಳಿಂದ ತೀವ್ರ ಮಾನಸಿಕ ತೋಳಲಾಟದಲ್ಲಿದ್ದು, ಜರ್ಜರಿತರಾಗಿದ್ದಾರೆ. ಅಲ್ಲದೇ, ಅವರ ಕುಟುಂಬ ಹಾಗೂ ಮಕ್ಕಳ ಭವಿಷ್ಯವು ತೀವ್ರ ಅಭದ್ರತೆಯಿಂದ ಕೂಡಿದೆ. ಬಹುತೇಕ ಸಾಗುವಳಿದಾರರು ಅನಕ್ಷರಸ್ಥರಾಗಿದ್ದು, ಕೃಷಿಯ ಮೇಲೆಯೇ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಹಕ್ಕುಪತ್ರ ಕೊಡದೆ ಇರುವುದರಿಂದ ಕೃಷಿ, ಬೆಳೆ ಸಾಲ, ಕೃಷಿ ಪರಿಕರಗಳ ಮೇಲಿನ ಸಾಲ, ಹಾಗೂ ಇನ್ನಿತರ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಅಲ್ಪಾವದಿ ಸಾಲವು ದೊರೆಯದ ಕಾರಣ ಬಹುತೇಕ ಬಡ ರೈತ, ಕೃಷಿ ಕಾರ್ಮಿಕರು ಬೇರೆ ದಾರಿಯಿಲ್ಲದೆ ಖಾಸಗಿ ಸಾಲಕ್ಕೆ ಮೊರೆ ಹೋಗಿ ತೀವ್ರ ಸಂಕಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ತಕ್ಷಣ ಎಲ್ಲಾ ತಾಲೂಕಿನ ತಹಶೀಲ್ದಾರ್ ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ಕರೆದು, ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ಕೊಡಲು ಕ್ರಮ ಕೈಗೊಳ್ಳಬೇಕು. ಆ ಸಭೆಗೆ ಎಲ್ಲಾ ರೈತ ಸಂಘಟನೆಗಳು ಒಳಗೊಂಡು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಭೂ ಮಂಜೂರಾತಿ ಸಮಿತಿಯನ್ನು ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

1002032654

ದಾವಣಗೆರೆ ಜಿಲ್ಲೆಯಲ್ಲಿ ಬಾಕಿ ಇರುವ ಅರ್ಜಿ ಪರಿಶೀಲಿಸಿ ರೈತರಿಗೆ ಕೂಡಲೇ ಹಕ್ಕುಪತ್ರ ಕೊಡಬೇಕು. ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರ ಮೇಲೆ ಅರಣ್ಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ನಿಲ್ಲಿಸಿ ಮತ್ತು ರೈತರ ಮೇಲೆ ಹಾಕಿರುವ ಎಲ್ಲಾ ಕೇಸ್ ಗಳನ್ನು ರದ್ದು ಮಾಡಬೇಕು. ಎಲ್ಲಾ ಬಗರ್ ಹುಕುಂ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ಹಾಗೂ ಈಗಾಗಲೇ ರೈತರಿಗೆ ಕೊಡುತ್ತಿರುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಖಿಲ ಭಾರತ ಉಪಾಧ್ಯಕ್ಷ ಡಾ ಸುನೀತ್ ಕುಮಾರ್, ರಾಜ್ಯ ಕಾರ್ಯದರ್ಶಿ ಭಗವಾನ್ ರೆಡ್ಡಿ, ರಾಜ್ಯ ಉಪಾಧ್ಯಕ್ಷರಾದ ನಾಗಮಾಳ್, ದಾವಣಗೆರೆ ಜಿಲ್ಲಾ ಅಧ್ಯಕ್ಷ ಮಧು ತೊಗಲೇರಿ, ಕಾರ್ಯದರ್ಶಿ ನಾಗಸ್ಮಿತ, ಉಪಾಧ್ಯಕ್ಷರಾದ ಬಸವರಾಜಪ್ಪ ನೀರ್ಥಡಿ, ಉಪಾಧ್ಯಕ್ಷ ಭೀಮಣ್ಣ ಮಾಯಕೊಂಡ, ಸಹ ಕಾರ್ಯದರ್ಶಿ ನಾಗರಾಜ ರಾಮಗೊಂಡನಹಳ್ಳಿ, ಸಹ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

1002032653
1002032652
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...