ದಾವಣಗೆರೆ | ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಎಐಯುಟಿಯುಸಿ ಪ್ರತಿಭಟನೆ

Date:

ಸುಮಾರು 20 ರಿಂದ 25 ವರ್ಷಗಳಿಂದ ಸಿ ಮತ್ತು ಡಿ ದರ್ಜೆಯ ಖಾಯಂ ಸ್ವರೂಪದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಮತ್ತು ನೇರ ನೇಮಕಾತಿಗೆ ಒತ್ತಾಯಿಸಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ನೌಕರರ ಸಂಘವು ದಾವಣಗೆರೆಯಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು.

ದಾವಣಗೆರೆ ನಗರದ ಮಧ್ಯಭಾಗದಲ್ಲಿರುವ ರಾಜ್ಯದ ಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಎನ್ನುವ ಹೆಗ್ಗಳಿಕೆಗೆ ಪ್ರಾರಂಭವಾದ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 90ಕ್ಕೆ ಹೆಚ್ಚು ನೌಕರರು ವಿಶ್ವವಿದ್ಯಾನಿಲಯದ ಸಿ ಮತ್ತು ಡಿ ದರ್ಜೆಯ ದೀರ್ಘಕಾಲಿನ ಕಾಯಂ ಸ್ವರೂಪದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದು, ಇವರಿಗೆ ಬೆಂಗಳೂರು ಮೂಲದ ಕೆಎಸ್ಎಲ್ 9 ಎನ್ನುವ ಏಜೆನ್ಸಿಯೊಂದು ಗುತ್ತಿಗೆ ಪಡೆದುಕೊಂಡು ವೇತನವನ್ನು ಕೊಡುತ್ತಿದೆ. ಈ ವ್ಯವಸ್ಥೆಯನ್ನು ನಿಲ್ಲಿಸಿ ನೇರ ನೇಮಕಾತಿ ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಸಿ ಮತ್ತು ಡಿ ಗ್ರೂಪ್ ನೌಕರರ ಸಂಘದ 90ಕ್ಕೂ ಹೆಚ್ಚು ನೌಕರರು ಎಐಯುಟಿಯುಸಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದ್ದಾರೆ. ನೌಕರರು ಸ್ಥಳದಲ್ಲಿಯೇ ಊಟ ತಿಂಡಿಗಳನ್ನು ತಯಾರಿಸಿಕೊಂಡು ಮುಷ್ಕರ ನೆಡೆಸುತ್ತಿದ್ದು ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ಬಗ್ಗೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಸಂಚಾಲಕ, ನೌಕರರ ಸಂಘ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಕೈದಾಳು, “ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳಲ್ಲಿ 90ಕ್ಕೂ ಹೆಚ್ಚು ಹಿಂದುಳಿದ ನೌಕರರು ಸುಮಾರು 20-25 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದು, ಇವರು ನೇರ ನೇಮಕಾತಿಗೆ ಅರ್ಹರಾಗಿದ್ದಾರೆ.‌ ಬೆಂಗಳೂರಿನ ಏಜೆನ್ಸಿ ಒಂದಕ್ಕೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಟೆಂಡರ್ ಕೊಟ್ಟಿದ್ದಾರೆ. ಈ ಏಜೆನ್ಸಿಯವರು ಸಕಾಲಕ್ಕೆ ನೌಕರರಿಗೆ ವೇತನ ನೀಡದೆ 20ರಿಂದ 25ನೇ ತಾರೀಕಿನವರೆಗೆ ವಿಳಂಬ ಮಾಡುತ್ತಾರೆ ಮತ್ತು ಒಮ್ಮೊಮ್ಮೆ 2 ರಿಂದ 3 ತಿಂಗಳ ತನಕ ವೇತನ ನೀಡುವುದಿಲ್ಲ.‌ ಸಾಂದರ್ಭಿಕ ರಜೆ ಹಾಗೂ ಇತರ ಭತ್ಯೆಗಳನ್ನು ನೀಡದೆ ಶೋಷಿಸುತ್ತಿದ್ದಾರೆ. ಈ ವಿರುದ್ಧ ಮಾತೆತ್ತಿದರೆ ಅವರನ್ನು ಕೆಲಸದಿಂದ ತೆಗೆಯುವ ಮಾತನಾಡುತ್ತಾರೆ. ಈ ಮೂಲಕ ನೌಕರರು ದೌರ್ಜನ್ಯ ಎದುರಿಸುತ್ತಿದ್ದಾರೆ.‌ ಹಾಗಾಗಿ ಏಜೆನ್ಸಿಯನ್ನು ರದ್ದುಗೊಳಿಸಿ ನೌಕರರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಪ್ರಾಚಾರ್ಯರಾಗಲಿ, ವಿಶ್ವವಿದ್ಯಾನಿಲಯದ ಕುಲಪತಿಗಳು ಅಥವಾ ಉಪಕುಲಪತಿಗಳಾಗಲಿ ಸಮಸ್ಯೆಗಳನ್ನು ಆಲಿಸಲು ಇದುವರೆಗೆ ಭೇಟಿ ನೀಡಿಲ್ಲ. ಇದು ಅವರ ನಿರ್ಲಕ್ಷವನ್ನು ತೋರಿಸುತ್ತದೆ. ಈ ಕೂಡಲೇ ಸಂಬಂಧಪಟ್ಟವರು ನೌಕರರ ಅಹವಾಲುಗಳನ್ನು ಪರಿಗಣನೆಗೆ ತೆಗೆದುಕೊಂಡು ನೇರ ನೇಮಕಾತಿ ಮಾಡಿಕೊಳ್ಳಲು ಸಂಘಟನೆಯ ಮೂಲಕ ನಾವು ಆಗ್ರಹಪಡಿಸುತ್ತೇವೆ.‌ ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.

ಯುಬಿಜಿಟಿ ಕಾಲೇಜಿನಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಹೊರಗುತ್ತಿಗೆ ನೌಕರ ತುಕಾರಾಂ ಮಾತನಾಡಿ, ಕಾಲೇಜಿನ ಮತ್ತು ವಿಶ್ವವಿದ್ಯಾಲಯದ ಪ್ರಾಚಾರ್ಯರು ಕಾಲೇಜಿನಲ್ಲಿ ಅಕ್ರಮ ಗಳಲ್ಲಿ ತೊಡಗಿದ್ದಾರೆ. 60 ವರ್ಷ ನಂತರ ನಿವೃತ್ತರಾದ ನೌಕರರೊಬ್ಬನನ್ನು 50,000 ಸಂಬಳಕ್ಕೆ ಮರು ನೇಮಕಾತಿ ಮಾಡಿಕೊಂಡಿದ್ದು, ಇತರರನ್ನು ಕಡೆಗಣಿಸಿದ್ದಾರೆ. 60 ವರ್ಷದ ನಂತರ ನಿವೃತ್ತಿ ಅಂದಮೇಲೆ ಅವರನ್ನು ಮರು ನೇಮಕ ಮಾಡಿಕೊಳ್ಳುವುದು ಏಕೆ? ಇದರಲ್ಲಿ ಕಮಿಷನ್ ಪಡೆಯುವ ದುರ್ಲಾಭವಿದ್ದು, ಯುವ ಸಮೂಹದ ನಿರುದ್ಯೋಗಿಗಳು ಇದರಿಂದ ವಂಚಿತರಾಗುತ್ತಿದ್ದಾರೆ. ನಮ್ಮಂತ ನೌಕರರಿಗೆ ಕನಿಷ್ಠ ಮರ್ಯಾದೆ ಗೌರವವನ್ನು ಕೊಡದೆ ಹೀನಾಯವಾಗಿ ನಡೆಸಿಕೊಳ್ಳುತ್ತಾರೆ ಎಂದು ಆರೋಪಿಸಿದರು.

ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಮಹಿಳೆ ನಿರ್ಮಲಾ ಮಾತನಾಡಿ, ಹೊರಗುತ್ತಿಗೆ ಏಜೆನ್ಸಿ ಪ್ರತಿ ತಿಂಗಳು ಸಂಬಳವನ್ನು ವಿಳಂಬ ಮಾಡುತ್ತಿದ್ದು ಇದರಿಂದ ನಮ್ಮ ಜೀವನ ನಡೆಯುವುದಾದರೂ ಹೇಗೆ. ಇದನ್ನೇ ಆಧಾರವಾಗಿಟ್ಟುಕೊಂಡು ಜೀವನ ನಡೆಸುತ್ತಿದ್ದೇವೆ. ಈ ಬಗ್ಗೆ ಪ್ರಾಚಾರ್ಯರನ್ನು ಅಥವಾ ಕಾಲೇಜಿನ ಸಿಬ್ಬಂದಿಗಳನ್ನು ಪ್ರಶ್ನಿಸಿದರೆ ನಮಗೂ ಇದಕ್ಕೆ ಸಂಬಂಧವಿಲ್ಲ ಅನ್ನುತ್ತಾರೆ. ಯಾವುದೇ ಸಮಸ್ಯೆಗಳಾದರೂ ಕಾಲೇಜಿನ ಸಿಬ್ಬಂದಿ ಮತ್ತು ಪ್ರಾಚಾರ್ಯರು ಸ್ಪಂದಿಸುವುದಿಲ್ಲ. ಏಜೆನ್ಸಿಯವರು ಬೆಂಗಳೂರಿನಲ್ಲಿ ಇರುತ್ತಾರೆ. ಅವರು ನಮ್ಮ ಸಂಕಷ್ಟಕ್ಕೆ ಸ್ಪಂದಿಸುವುದಿಲ್ಲ. 20 ರಿಂದ 25 ವರ್ಷಗಳವರೆಗೂ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದೇವೆ. ಈ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದರೆ ಕೆಲಸದಿಂದ ತೆಗೆಯುವ ಮಾತನಾಡುತ್ತಾರೆ ಅಥವಾ ಬೇರೆ ವಿಭಾಗಗಳಿಗೆ ವರ್ಗಾವಣೆಗೊಳಿಸುವ ಮಾತನಾಡುತ್ತಾರೆ. ನಮ್ಮನ್ನೇ ಗುರಿಯಾಗಿಟ್ಟುಕೊಂಡು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದು ಅಳಲನ್ನು ತೋಡಿಕೊಂಡರು.

ಇದನ್ನು ಓದಿದ್ದೀರಾ? ರಾಯಚೂರು | ರೈತರ ಸಮಸ್ಯೆಯ ಬಗ್ಗೆ ಡಿ ಕೆ ಶಿವಕುಮಾರ್ ಉಡಾಫೆ ವರ್ತನೆ : ಚಾಮರಸ ಮಾಲಿ ಪಾಟೀಲ್ ಆರೋಪ

ಪ್ರತಿಭಟನೆಯಲ್ಲಿ ಸಿ ಮತ್ತು ಡಿ ಗ್ರೂಪ್ ಸಂಘದ ಉಪಾಧ್ಯಕ್ಷ ಪರಮೇಶ್ವರಪ್ಪ, ಕಾರ್ಯದರ್ಶಿ ತಿಪ್ಪೆಸ್ವಾಮಿ ಅಣಬೇರ್,ಮತ್ತು ಮಂಜುನಾಥ್ ಕುಕ್ಕವಾಡ, ಇತರ ಪದಾಧಿಕಾರಿಗಳು ಮತ್ತು ನೌಕರರಾದ ಶಿವಮೂರ್ತಿ, ವಿನೋದ, ಜಯದೇವಪ್ಪ, ಮಲ್ಲಿಕಾರ್ಜುನ್, ಪ್ರಸನ್ನ, ಪ್ರಶಾಂತ್, ಪ್ರವೀಣ, ಬಸವರಾಜ್, ಹನುಮಂತಪ್ಪ, ಮಂಜು, ಗಣೇಶ, ಮಾಂತೇಶ, ಕುಮಾರಸ್ವಾಮಿ ಹಾಗೂ ಇನ್ನಿತರರು ನೌಕರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...