ದಾವಣಗೆರೆ | ಲಂಚದ ಆರೋಪ; ಕರ ವಸೂಲಿಗಾರ ಅಮಾನತು

Date:

ಖಾತೆ ವರ್ಗಾವಣೆಗೆ ಲಂಚ ಪಡೆದ ಆರೋಪದಡಿ ದಾವಣಗೆರೆ ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಕರ ವಸೂಲಿಗಾರ ಎನ್ ಶಿವಣ್ಣ ಎಂಬುವರನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆಯ ಆಯುಕ್ತರೂ ಆದ ಶಿಸ್ತು ಪ್ರಾಧಿಕಾರಿ ರೇಣುಕಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಎನ್.ಶಿವಣ್ಣ ಅವರು ಲಂಚ ಸ್ವೀಕರಿಸುತ್ತಿರುವ ದೃಶ್ಯವಿರುವ ವಿಡಿಯೋವನ್ನು ಆಯುಕ್ತರ ವಾಟ್ಸ್ ಆ್ಯಪ್‌ಗೆ ಕಳುಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಜಿಲ್ಲಾಧಿಕಾರಿಯೂ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದರು. ಇದೀಗ ವಿಚಾರಣೆ ಬಾಕಿ ಇಟ್ಟು ಅಮಾನತುಗೊಳಿಸಿದ್ದಾರೆ.

“ವಿಡಿಯೋದಲ್ಲಿರುವ ದೃಶ್ಯವನ್ನು ಅವಲೋಕಿಸಿದಾಗ 500ರ ನೋಟು ಎಣಿಸಿ, ನಂತರ ತಮ್ಮ ಜೇಬಿಗೆ ಇಟ್ಟುಕೊಳ್ಳುತ್ತಿರುವುದು ಸ್ಪಷ್ಟವಾಗಿವುದರಿಂದ ಲಂಚ ಪಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ” ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ ವಸೂಲಿಗಾರರು ಜವಾಬ್ದಾರಿಯುತ ಖಾಯಂ ನೌಕರರಾಗಿದ್ದು, ಆನ್‌ಲೈನ್‌ ತಂತ್ರಾಂಶದ ಮೂಲಕ ಸೃಷ್ಟಿಸಿರುವ ಚಲನ್ ಪಡೆದು ಬ್ಯಾಂಕ್ ಮೂಲಕ ಖಾತಾ ವರ್ಗಾವಣೆ ಶುಲ್ಕ ಪಾವತಿಸುವುದು ಸರಿಯಾದ ನಿಯಮ. ಆದರೆ ನೀವು, ಸಾರ್ವಜನಿಕರಿಂದ ನೇರವಾಗಿ ಹಣ ಪಡೆದು ಖಾತಾ ವರ್ಗಾವಣೆ ಶುಲ್ಕ ಪಾವತಿಸುತ್ತೇನೆಂದು ಹೇಳುತ್ತಿರುವುದು ತಮ್ಮ ಸಮಜಾಯಿಷಿ ಉತ್ತರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ವೇತನ 6,000 ರೂ. ಹೆಚ್ಚಳಕ್ಕೆ ಒತ್ತಾಯ

“ಖಾಯಂ ನೌಕರ ಆಗಿರುವ ಶಿವಣ್ಣ ಅವರು ಸಾರ್ವಜನಿಕರಿಂದ ಹಣವನ್ನು ನೇರವಾಗಿ ತೆಗೆದುಕೊಳ್ಳುತ್ತಿರುವುದು ಮತ್ತು ಹೆಚ್ಚಿನ ಹಣಕ್ಕೆ ಒತಾಯಿಸುತ್ತಿರುವುದು ವಾಟ್ಸಾಪ್ ವಿಡಿಯೋದಲ್ಲಿ ಕಂಡು ಬಂದಿದೆ. ಈ ವಿಡಿಯೋವನ್ನು ಕಳುಹಿಸಿ ಕ್ರಮ ತೆಗೆದುಕೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ಅವರ ಮೇಲಿನ ಆರೋಪ ಸಾಬೀತಾಗಿದೆ. ಅದರಿಂದ ಸರ್ಕಾರಿ ಭ್ರಷ್ಟಾಚಾರ ತಡೆ ಕಾಯ್ದೆಗಳ ಪ್ರಕಾರ ಅವರನ್ನು ಸದ್ಯ ಅಮಾನತು ಮಾಡಿದ್ದು, ವಿಚಾರಣೆ ಮುಂದುವರಿಸಲಾಗಿದೆ” ಎಂದು ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...