ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

Date:

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಗಂಗಾಮತ ಸಮಾಜದ ಮುಖಂಡ ಹೆಚ್.ಕೆ ವೆಂಕಟೇಶ್ ಆಗ್ರಹಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಗಂಗಾಮತ ಸಮಾಜ, ಬೆಸ್ತರ ಚಾರಿಟಬಲ್ ಟ್ರಸ್ಟ್, ಸ್ವಾಮಿ ವಿವೇಕಾನಂದ-ಭಗತ್‌ಸಿಂಗ್‌ ಚಾರಿಟಬಲ್‌ ಟ್ರಸ್ಟ್ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಉಪ ತಹಶೀಲ್ದಾರ್ ಸುರೇಶ್‌ ನಾಯ್ಕ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಆರೋಪಿ ಗಿರೀಶ್ ಸಾವಂತ್ ಎಂಬಾನಿಗೆ ಕಾನೂನಿನ ಅಡಿಯಲ್ಲಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ನೊಂದ ಕುಟಂಬಕ್ಕೆ ಪರಿಹಾರ ನೀಡಬೇಕು. ಹೆಣ್ಣು ಮಕ್ಕಳ ಮೇಲೆ ಕೊಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗಾಮತ ಸಮಾಜದ ತಾಲ್ಲೂಕು ಘಟಕದ ಸಂಚಾಲಕ ಕೆ.ದೇವೇಂದ್ರಪ್ಪ ಮಾತನಾಡಿ, “ಅಂಜಲಿ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸಮಾಜದ ಬಾಂಧವರಿಂದ ಹಣ ಸಂಗ್ರಹಿಸಿ ನೊಂದ ಕುಟುಂಭಕ್ಕೆ ಕೊಡುವುದಾಗಿ ಗಂಗಾಮತ ಸಮಾಜದ ಸ್ವಾಮೀಜಿ ಹೇಳಿದ್ದಾರೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಗಂಗಾಮತ ಸಮಾಜದಿಂದ ಪರಿಹಾರ ನೀಡುತ್ತೇವೆ” ಎಂದರು.

ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿ, “ರಾಜ್ಯದಲ್ಲಿ ಗಾಂಜಾ ಆಫಿಮು ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದೆ. ಹುಬ್ಬಳಿಯ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗರ ಹತ್ಯೆ ಕೊಲೆ ಪ್ರಕರಣಗಳು ನಡೆದಿದ್ದು ಸರ್ಕಾರ ಕಾನೂನು ಪರಿಪಾಲನೆಯಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಎ.ಬಿ. ಹನುಮಂತಪ್ಪ, ಕೆ.ವಿ.ಚನ್ನಪ್ಪ, ಗಂಗಾಮತ ಸಮಾಜದ ತಾಲ್ಲೂಕು ಗೌರವಾಧ್ಯಕ್ಷ ಕೆ.ರಾಜಪ್ಪ, ಉಪಾಧ್ಯಕ್ಷ ಜೆ.ಹಳದಪ್ಪ, ಕಾರ್ಯಧರ್ಶಿ ಚೀಲೂರು ಲೋಕೇಶ್, ಪದಾಧಿಕಾರಿಗಳಾದ ನರಸಿಂಹಪ್ಪ, ಮಲ್ಲಿಕಾರ್ಜುನ್, ಶಿವಪ್ಪ, ಹೆಚ್.ಚನ್ನೇಶ್ ಸೇರಿದಂತೆ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...