ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ

Date:

ರಾಷ್ಟ್ರೀಯ ನಾಯಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.

“ಅಮೆರಿಕ ಕೆನಡಾ ಇತರೆ ಬೇರೆ ದೇಶದಲ್ಲೂ ಕೂಡ ಇಂದು ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದ್ದು, ಸಾಮಾನ್ಯ ಜನರ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸುವ ಮೂಲಕ ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಆಯ್ಕೆಗಳನ್ನು ಹಾಗೂ ಜನರ ಮೇಲೆ ಹೇರಿಕೆಯನ್ನು ಮಾಡಲಾಗುತ್ತಿದೆ‌” ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರವು ಇಡೀ ಸಿಬಿಐ, ಐಟಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷದ ನಾಯಕರನ್ನು ಬಂಧಿಸುವ ಕೆಲಸ ನಡೆಸುತ್ತಿದೆ. ಹಾಗೆಯೇ ಸಂವಿಧಾನದ ಆಶಯಗಳನ್ನು ಧಿಕ್ಕರಿಸಿ ತಮ್ಮದೇ ವಿರೋಧ ನೀತಿಗಳ ಮೂಲಕ ಸರ್ಕಾರ ನಡೆಸುತ್ತಿದೆ. ದೇಶದ ಯುವಜನರಿಗೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಬಡವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ತುಳಿಯುತ್ತಿದ್ದಾರೆ. ಉದ್ಯೋಗ ಮಾಡುವ ಜನರಿಗೆ ಸರಿಯಾದ ಅವಕಾಶಗಳಿಲ್ಲದೆ ಹಲವಾರು ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುತ್ತಿವೆ. ಬಡತನ ಹೆಚ್ಚಾಗಿದೆ. ಆದರೂ ಕೂಡ ಕೇಂದ್ರ ಸರ್ಕಾರವು ವಿಪಕ್ಷದ ನಾಯಕರನ್ನು ಬಂಧಿಸುವಲ್ಲಿ ಮುಳುಗಿದೆ. ಈ ನಿಟ್ಟಿನಲ್ಲಿ ಕೂಡಲೇ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಹಾಗೂ ನಿಷ್ಪಕ್ಷವಾಗಿ ದೇಶಾದ್ಯಂತ ಚುನಾವಣೆ ನಡೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ ಸಭೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ ಎಸ್ ಶಿವಕುಮಾರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಿ ಆರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್ ಎಸ್ ಕೆ, ಕಾರ್ಯದರ್ಶಿಗಳಾದ ರವೀಂದ್ರ ಕೆ, ಸುರೇಶ್, ಸಿಡ್ಲಪ್ಪ, ಲಕ್ಷ್ಮಣ ನಾಯ್ಕ್, ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ಧರ್ಮಾ ನಾಯ್ಕ್, ಹರಿಹರ ತಾಲೂಕು ಅಧ್ಯಕ್ಷ ಬಸವರಾಜ್ ಜಿ ಎಚ್, ಮಹಮ್ಮದ್ ಯೂಸಫ್, ಮಲ್ಲೇಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...