ದಾವಣಗೆರೆ | ಮಹಿಳೆಯ ಮೇಲೆ ಕರಡಿ ದಾಳಿ

Date:

ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರ ಗ್ರಾಮದಲ್ಲಿ ನಡೆದಿದೆ.

45 ವರ್ಷದ ಹನುಮಕ್ಕ ಎಂಬುವರು ಕರಡಿ ದಾಳಿಗೊಳಗಾಗಿವವರು. ತೀವ್ರ ಗಾಯಗೊಂಡ ಅವರನ್ನು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸಂಬಂಧಿಕರೊಬ್ಬರು ಮಾಹಿತಿ ನೀಡಿದ್ದಾರೆ.

“ನಿತ್ಯದಂತೆ ಹೊಲದ ಕೆಲಸಕ್ಕೆ ತೆರಳುವಾಗ ಅದೇ ದಾರಿಯಲ್ಲಿ ತನ್ನ ಎರಡು ಮರಿಗಳೊಂದಿಗೆ ತೆರಳುತ್ತಿದ್ದ ಕರಡಿ ಹನುಮಕ್ಕನವರ ಮೇಲೆ ಏಕಾಏಕಿ ದಾಳಿ ಮಾಡಿದೆ. ದಾಳಿಯ ವೇಳೆ ಕಿರುಚಾಡಿದ ಹನುಮಕ್ಕನನ್ನು ನೋಡಿ ಅಲ್ಲೇ ಹತ್ತಿರದಲ್ಲಿದ್ದ ಕುರಿಗಾಹಿಗಳಿಬ್ಬರು ಓಡಿಬಂದು ಕೂಗಾಟ ನಡೆಸಿದ್ದರಿಂದ ಕರಡಿ ಓಡಿಹೋಗಿದೆ. ಕೂಡಲೇ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಕಳಿಸಲಾಗಿದೆ” ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ರೈತರ ಜಮೀನಿನ ದಾಖಲೆಯಲ್ಲಿ ವಕ್ಪ್‌ ಹೆಸರು ತೆಗೆಯಲು ಆಗ್ರಹಿಸಿ ಕಿಸಾನ್ ಸಂಘದಿಂದ ಪ್ರತಿಭಟನೆ

ವಲಯ ಅರಣ್ಯ ಅಧಿಕಾರಿ ಶ್ರೀನಿವಾಸ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮಹಿಳೆ ಎಂದಿನಂತೆ ಜಮೀನಿಗೆ ತೆರಳುತ್ತಿರುವಾಗ ಕೊಣಚಿಕಲ್ ಗುಡ್ಡದ ಕಡೆಗೆ ತೆರಳುತ್ತಿರುವ ಕರಡಿ ತನ್ನ ಮರಿಗಳೊಂದಿಗೆ ಅದೇ ಮಾರ್ಗದಲ್ಲಿ ಹೋಗಿತ್ತಿದ್ದು, ಆ ಸಮಯದಲ್ಲಿ ಎದುರಾದ ಮಹಿಳೆ ಮೇಲೆ ದಾಳಿ ನಡೆಸಿದೆ. ದಾಳಿಯಿಂದ ಪಾರಾದ ವಿಷಯ ತಿಳಿದ ನಮ್ಮ ಅರಣ್ಯ ಇಲಾಖೆ ಸಿಬ್ಬಂದಿ ಕೆಲವೇ ಹೊತ್ತಿನಲ್ಲಿ ತೆರಳಿ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಅರಣ್ಯ ಇಲಾಖೆ ವತಿಯಿಂದ ₹60,000ದವರೆಗೂ ಚಿಕಿತ್ಸಾ ವೆಚ್ಚ ಭರಿಸಲು ಅವಕಾಶವಿರುವುದರಿಂದ ಉತ್ತಮ ಚಿಕಿತ್ಸೆಯನ್ನು ಕೊಡಿಸಲಾಗುತ್ತದೆ. ಸದ್ಯ ವೈದ್ಯರು ಯಾವುದೇ ಜೀವಾಪಾಯವಿಲ್ಲವೆಂದು ತಿಳಿಸಿದ್ದಾರೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...