ದಾವಣಗೆರೆ | ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ಮತದಾರಿಂದ ಮತದಾನ ಬಹಿಷ್ಕಾರಕ್ಕೆ ತೀರ್ಮಾನ

Date:

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ನಗರಸಭೆ ವ್ಯಾಪ್ತಿಯ ಹತ್ತನೇ ವಾರ್ಡಿನ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ನಂಬರ್ 48ರ ಸಾರ್ವಜನಿಕರಿಂದ 1356 ಮತಗಳು ಇರುವ ಪ್ರದೇಶದಲ್ಲಿ ಈ ಬಾರಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡ ವಾರ್ಡಿನ ಮುಖಂಡ ಮೂರ್ತಿ ಎಚ್ ಕೆ ಮಾತನಾಡಿ, “ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಮತದಾನ ಮಾಡದೆ ಬಹಿಷ್ಕಾರ ಹಾಕಲಾಗುವುದು” ಎಂದು ಹೇಳಿದರು.

“ಭಾರತ್ ಆಯಿಲ್ ಮಿಲ್ ಕಾಂಪೌಂಡ್ ವಿನಾಯಕ ನಗರ, ಪೌರಕಾರ್ಮಿಕರ ಬಡಾವಣೆಯಲ್ಲಿ ಅತಿಹೆಚ್ಚು ಬಡ ಕೂಲಿ ಕಾರ್ಮಿಕರು ಜೀವನ ನಡೆಸುತ್ತಾರೆ ಹಾಗೂ ಅತಿ ಹೆಚ್ಚು ಅವಿದ್ಯಾವಂತರಿದ್ದಾರೆ. ಸುಮಾರು 50ರಿಂದ 60 ವರ್ಷಗಳ ಕಾಲ ಇಲ್ಲಿನ ಬಡಾವಣೆಯ ಸ್ಥಳದಲ್ಲಿಯೇ ಜೀವನ ನಡೆಸಿಕೊಂಡು ಹೋಗುತ್ತಿದ್ದು, ಮೂಲಭೂತ ಸೌಕರ್ಯಗಳಾದ ಚರಂಡಿ, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರ, ಸಮುದಾಯ ಭವನ, ಯುಜಿಡಿ ಕಾಮಗಾರಿ, ಶೌಚಾಲಯ ಸ್ವಚ್ಛತೆ ಸೇರಿದಂತೆ ಇನ್ನು ಹಲವಾರು ಮೂಲ ಸೌಕರ್ಯಗಳನ್ನು ಸರ್ಕಾರ ನಮಗೆ ಒದಗಿಸಿಲ್ಲ. ಜತೆಗೆ ಇಲ್ಲಿನ ಬಡಾವಣೆಯನ್ನು ಸ್ಲಂ ಏರಿಯಾ ಎಂದು ಗುರುತಿಸಿದ್ದರೂ ಕೂಡಾ  ಈವರೆಗೆ ರಾಜ್ಯ ಸರ್ಕಾರವಾಗಲಿ ಸ್ಥಳೀಯ ಆಡಳಿತವಾಗಲಿ ಹಕ್ಕುಪತ್ರಗಳನ್ನು ನೀಡುತ್ತಿಲ್ಲ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಕೂಡಾ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ಅನ್ಯಾಯ ಧೋರಣೆ ಅನುಸರಿಸುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾರ್ಡಿನ ಬೂತ್ ಸಂಖ್ಯೆ 48ರ 1356 ಮತದಾರರು ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕವಾಗಿ ಮತದಾನದಿಂದು ದೂರ ಉಳಿದು ಮತದಾನ ಬಹಿಷ್ಕಾರ ಮಾಡಲು ತೀರ್ಮಾನ ಮಾಡಿರುತ್ತೇವೆ ಎಂದು ಹೇಳಿದರು.

ಸ್ಥಳೀಯ ನಿವಾಸಿ ಕರಿಯಮ್ಮ ಮಾತನಾಡಿ, “ನಮಗೆ ಇಲ್ಲಿ ಶೌಚಾಲಯ ಇಲ್ಲದೇ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಹೋಗಬೇಕು. ಅಲ್ಲಿ ಸಮಸ್ಯೆ ಅಥವಾ ಜನಸಂದಣಿ ಹೆಚ್ಚಾದರೆ ದೂರದಲ್ಲಿರುವ ಜಾಲಿ ಗಿಡಗಳನ್ನು ಆಶ್ರಯಿಸಬೇಕಿದೆ. ಅಲ್ಲಿಗೆ ಹೋಗುವಾಗ ಕೆಲವು ಗಂಡಸರು, ಕುಡುಕರು ಅಸಹ್ಯವಾಗಿ ನೋಡುತ್ತಾರೆ. ಸರಿಯಾದ ನೀರಿನ ವ್ಯವಸ್ಥೆ, ಚರಂಡಿ, ರಸ್ತೆಗಳಿಲ್ಲ. ಈ ಬಗ್ಗೆ ಯಾವ ಜನಪ್ರತಿನಿಧಿಗಳೂ ಗಮನ ಹರಿಸಿಲ್ಲ. ಹೀಗಾದರೆ ಯಾವ ಉಪಯೋಗಕ್ಕಾಗಿ ನಾವು ಮತದಾನ ಮಾಡಬೇಕು” ಎಂದು ಅಸಹನೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಪ್ರಕರಣ ಮುಚ್ಚಿಹಾಕುವ ಹುನ್ನಾನಡೆದಿದೆ: ಗೋಮಾರದಹಳ್ಳಿ ಮಂಜುನಾಥ್

ಕೃಷ್ಣ ಎಂ, ಯಮನೂರ, ಹನುಮಂತಪ್ಪ, ರಮೇಶ್ ಬನ್ನಿಮಟ್ಟಿ, ಪರಶುರಾಮ.ಡಿ, ಅಣ್ಣಪ್ಪ, ಗೀತಮ್ಮ, ಕವಿತಾ ಎಂ ಕೆ, ಅಕ್ಕಮ್ಮ, ಕವಿತಾ, ರಶ್ಮಿ, ಲಕ್ಷ್ಮಮ್ಮ, ಪ್ರೇಮ, ನೀಲಮ್ಮ ಸೇರಿದಂತೆ ವಾರ್ಡಿನ ಹಲವಾರು ಮುಖಂಡರುಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...