ದಾವಣಗೆರೆ | ‘ಭೀಮಾ ಕೋರೆಗಾಂವ್ ವಿಜಯೋತ್ಸವ’ ಸಂಭ್ರಮ

Date:

ದಾವಣಗೆರೆಯ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು, ಮುಖಂಡರು ‘ಭೀಮಾ ಕೋರೆಗಾಂವ್ ವಿಜಯೋತ್ಸವ’ವನ್ನು ಸಂಭ್ರಮಿಸಿದರು.

ದಲಿತ ಸಂಘರ್ಷ ಸಮಿತಿ(ಪ್ರೊ ಕೃಷ್ಣಪ್ಪ ಸ್ಥಾಪಿತ) ನೇತೃತ್ವದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ನೆನಪಿಗಾಗಿ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಹಲವಾರು ಪ್ರಗತಿಪರ, ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗವಹಿಸಿ ಡಾ.ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಂಜಿನ ಮೆರವಣಿಗೆ ನಡೆಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದರು.

ಈ ವೇಳೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾತನಾಡಿ “ಭೀಮಾ ಕೋರೆಗಾಂವ್ ದಲಿತರ ಐತಿಹಾಸಿಕ ಗೆಲುವು. ಬಾಬಾ ಸಾಹೇಬ್ ಅಂಬೇಡ್ಕರ್ ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಇದರ ಬಗ್ಗೆ ತಿಳಿದು ಸಂಶೋಧನೆ ನಡೆಸಿ 1927ರಲ್ಲಿ ಭೇಟಿ ನೀಡಿ ಇತಿಹಾಸದ ಬಗ್ಗೆ ಬೆಳಕು ಚೆಲ್ಲಿದ್ದಾರೆ. 28,000ದಷ್ಟು ಪೇಶ್ವೆಗಳ ಸೈನಿಕರನ್ನು 500 ಜನ ಸೈನಿಕರ ಮಹರ್ ರೆಜಿಮೆಂಟ್ ಸೋಲಿಸಿದ ಮಹತ್ವದ ದಿನವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತಿ ತಾರತಮ್ಯ, ಕನಿಷ್ಠ ಸೌಲಭ್ಯ ನೀಡದೇ ಅತ್ಯಂತ ನಿಕೃಷ್ಟವಾಗಿ ಕಾಣುವ ಮರಾಠ ಪೇಶ್ವೆಗಳನ್ನು ಸೋಲಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಬ್ರಿಟಿಷರು ಮಹರ್ ಸೈನಿಕರ ಸಹಾಯ ಪಡೆದು ಪೇಶ್ವೆಗಳನ್ನು ಸೋಲಿಸಿದರು, ‘ಅದಕ್ಕೂ ಮೊದಲು ಸಹಾಯ ಮಾಡುತ್ತೇವೆ’ ಎಂದು ಬಂದ ಸಿದ್ದನಾಕನ ನೇತೃತ್ವದ ಮಹರ್ ಸೈನಿಕರನ್ನು ಪೇಶ್ವೆಗಳು ಅವಮಾನ ಮಾಡಿ ಹೊರತಳ್ಳಿದ್ದರು. ಇದು ದಲಿತರನ್ನು ಅವಮಾನಿಸಿದ್ದ ಪೇಶ್ವೆಗಳ ವಿರುದ್ಧ ದಲಿತರು ಆತ್ಮಗೌರವ, ಹಕ್ಕುಗಳಿಗಾಗಿ ಹೋರಾಡಿದ ಐತಿಹಾಸಿಕ ದಿನ” ಎಂದು ಸ್ಮರಿಸಿದರು.

ವಕೀಲ ಅನಿಸ್ ಪಾಷಾ ಮಾತನಾಡಿ, “ಇದು ದಲಿತರ ವಿಜಯೋತ್ಸವದ ಬಗ್ಗೆ ಬೆಳಕು ಚೆಲ್ಲಿದ ದಿನವಾಗಿದ್ದು, ಈ ವಿಜಯೋತ್ಸವವನ್ನು ಹಿಂದಿನಿಂದಲೂ ಆಚರಿಸುತ್ತ ಬಂದಿದ್ದಾರೆ. ಆದರೆ 2018ರಲ್ಲಿ ಸರ್ಕಾರ ಮತ್ತು ಕೋಮುಶಕ್ತಿಗಳು ಸುಳ್ಳು ಆರೋಪಗಳನ್ನು ಮಾಡಿ ಈ ಆಚರಣೆ ತಡೆಗಟ್ಟಲು, ಹತ್ತಿಕ್ಕಲು ಅನೇಕರನ್ನು ಬಂಧಿಸಿ ಜೈಲಿಗೆ ಹಾಕಿದೆ. ಆದರೆ ಈ ವಿಜಯೋತ್ಸವ ಅಂಬೇಡ್ಕರ್ ಸ್ವತಃ ಶೋಧಿಸಿ ತಿಳಿಸಿದ ಇತಿಹಾಸವಾಗಿದ್ದು, ದಲಿತರ ಆತ್ಮಾಭಿಮಾನದ ಪ್ರತೀಕವಾಗಿದೆ” ಎಂದರು.

ನೆರಳು ಬೀಡಿ ಕಾರ್ಮಿಕ ಸಂಘಟನೆಯ ಜಬೀನ ಖಾನಂ ಮಾತನಾಡಿ, “ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಘಟನೆಗಳು ಸೇರಿ ಭೀಮಾ ಕೋರೆಗಾವ್ ವಿಜಯೋತ್ಸವ ಆಚರಿಸುತ್ತಿದ್ದೇವೆ. ಇದು ದಲಿತರ ಪಾಲಿಗೆ ಮಹತ್ವದ್ದು, ಏಕೆಂದರೆ ಇದು ದಲಿತರ ಸ್ವಾಭಿಮಾನದ ಸಂಕೇತವಾಗಿದೆ” ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ಮುಖಂಡ ಹೆಗ್ಗೆರೆ ರಂಗಪ್ಪ ಮಾತನಾಡಿ, “ಭೀಮಾ ಕೋರೆಗಾಂವ್ ವಿಜಯೋತ್ಸವ ಸ್ವಾಭಿಮಾನ, ಸ್ವಾತಂತ್ರ್ಯದ ಗೆಲುವಾಗಿದೆ. ಅಸ್ಪೃಶ್ಯತೆಯ ಆಚರಣೆ, ಅಸಮಾನತೆ ಮತ್ತು ದಲಿತರನ್ನು ಅತ್ಯಂತ ಹೀನ ಸ್ಥಿತಿಯಲ್ಲಿ ನಡೆಸಿಕೊಂಡು ಆಡಳಿತ ನಡೆಸುತ್ತಿದ್ದ ಪೇಶ್ವೆಗಳ ಬಾಜಿರಾಯನಿಗೆ ಕನಿಷ್ಠ ಸೌಲಭ್ಯ ಕೇಳಿದರೂ ನೀಡದೇ ಹೊರ ತಳ್ಳಿದ್ದರು. ಪೇಶ್ವೆಗಳ ಪರವಾಗಿ ಯುದ್ಧ ಮಾಡುತ್ತೇನೆಂದರೂ ಅಪಹಾಸ್ಯ ಮಾಡಿ ಹೊರತಳ್ಳಿದ ಪೇಶ್ವೆಗಳ ವಿರುದ್ಧ ಬ್ರಿಟಿಷ್ ಮಹರ್ ರೆಜಿಮೆಂಟಿನ ಕೇವಲ 500 ಮಂದಿ ಸೈನಿಕರು 28,000 ಮಂದಿ ಸೈನಿಕರನ್ನು ಸೋಲಿಸಿ ವಿಜಯ ದಾಖಲಿಸಿದ ದಿನವಾಗಿದೆ. ಅಂದು ಬ್ರಿಟಿಷರು ಯುದ್ಧದಲ್ಲಿ ಇವರು ಮಾಡಿದ ಸಹಾಯಕ್ಕಾಗಿ ಇವರು ಕೇಳಿದ ಸಾರ್ವತ್ರಿಕ ಶಿಕ್ಷಣವನ್ನು ಜಾರಿಗೊಳಿಸುತ್ತಾರೆ.‌ ಹಾಗಾಗಿ ಇದು ದಲಿತರ ಮೊದಲ ಗೆಲುವು, ಸ್ವಾಭಿಮಾನದ ಗೆಲುವಾಗಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ | ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು: ಸತೀಶ್ ಜಾರಕಿಹೊಳಿ

ಈ ಸಂಭ್ರಮಾಚರಣೆಯಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಮುಖಂಡರಾದ ಸಿದ್ದರಾಮಣ್ಣ, ರವಿ ನಾರಾಯಣ್, ರುದ್ರಮುನಿ, ವಿಜಯಮ್ಮ, ಪ್ರದೀಪ್, ಬೇತೂರು ಹನುಮಂತಪ್ಪ, ನಾಗರಾಜ್, ಮಹಾಂತೇಶ್, ಬಿ ಹನುಮಂತಪ್ಪ, ಚಿತ್ರಲಿಂಗಪ್ಪ, ತುರ್ಚಘಟ್ಟ ನಾಗರಾಜ್, ತುರ್ಚಘಟ್ಟ ಖಾಲಿದ್ ಅಲಿ, ಮಹಾಂತೇಶ್ ಹಾಲವರ್ತಿ, ಹಾಲೇಶ್ ಕುಂದುವಾಡ, ತ್ಯಾಗರಾಜ್ ಹುಚ್ಚವ್ವನಹಳ್ಳಿ, ಜೀವನ್ ಆಣಬೇರು, ಹನುಮಂತ ಕಡ್ಲೆಬಾಳು, ನಾಗರಾಜ್ ಆನೆಕೊಂಡ, ಮಂಜು ಮಾಗಾನಳ್ಳಿ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...