ದಾವಣಗೆರೆ | ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಘೋಷಣೆಗೆ ಭಾರೀ ವಿರೋಧ

Date:

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ ಅವರ ಧರ್ಮಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಮತ್ತು ಮುಖಂಡರು ಪತ್ರಿಕ ಹೇಳಿಕೆ ನೀಡಿದ್ದು, “ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸುವಂತೆ ಬಿಜೆಪಿ ಹೈಕಮಾಂಡ್ ಗಮನ ಸೆಳೆಯಲು ಮಾಜಿ ಸಚಿವ ರೇಣುಕಾಚಾರ್ಯ ಮತ್ತು ತಂಡದಿಂದ ಮಾಜಿ ಸಚಿವ ಎಸ್‌ ಎ ರವೀಂದ್ರನಾಥ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಬಳಿಕ ʼಸಿದ್ದೇಶ್ ಹಠಾವೋ ಬಿಜೆಪಿ ಬಚಾವೋ. ಗೋ ಬ್ಯಾಕ್ ಸಿದ್ದೇಶ್ʼ ಎಂಬ ಘೋಷಣೆ ಕೇಳಿಬಂದಿದೆ. ಬಿಜೆಪಿಯ ಒಬ್ಬ ಕಾರ್ಯಕರ್ತ ಸಂಸದ ಸಿದ್ದೇಶ್ವರ ಅವರ ಪತ್ನಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ಪೆಟ್ರೋಲ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಇದೆನ್ನೆಲ್ಲ ಸೂಕ್ಷ್ಮವಾಗಿ ಗಮನಿಸುತ್ತಿರುವ ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್‌ನವರು ಗಂಭೀರವಾಗಿ ಪರಿಗಣಿಸಿ ಕೆಲ ಪ್ರಮುಖ ನಾಯಕರು ಒಂದು ಹಂತಕ್ಕೆ ಬಂದಿದ್ದು, ಬಿಜೆಪಿಯ ಬಣಗಳ ರಾಜಕೀಯ ನಿಲ್ಲಿಸಿ, ಗೆಲುವು ಗುರಿಯಾಗಿಸಿ ಪರ್ಯಾಯವಾಗಿ ವೀರಶೈವ ಪಂಚಮಸಾಲಿ ಸಮಾಜಕ್ಕೆ ಸೇರಿದ ದಾವಣಗೆರೆ ಜಿಲ್ಲೆಯ ಪ್ರಥಮ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ. ಎಚ್ ಶಿವಪ್ಪನವರ ಪುತ್ರ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿ ಮಾಡಿದರೆ ಗೆಲುವು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಮಾಜಿ ಶಾಸಕ ಶಿವಶಂಕರ್ ಅವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ. ಅವರ ತಂದೆ ಸಚಿವರಾಗಿ ತಾವು ಆಗ್ನೇಯ ಪದವಿಧರರ ಕ್ಷೇತ್ರದ ಪರಿಷತ್ ಸದಸ್ಯರಾಗಿ ಹರಹರ ಶಾಸಕರಾಗಿ ಆನೇಕ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಎಲ್ಲ ಸಮಾಜದವರ ಜೋತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಿಂದ ಈ ಎಲ್ಲ ವಿಷಯಗಳು ಎನ್‌ಡಿಎ ಕೂಟದ ನಾಯಕರ ಗಮನಕ್ಕೆ ತಂದು ದಾವಣಗೆರೆ ಲೋಕಸಭಾ ಚುನಾವಣೆಗೆ ಎನ್‌ಡಿಎ ಕೂಟದ ಅಭ್ಯರ್ಥಿಯನ್ನಾಗಿ ಶಿವಶಂಕರ್ ಅವರನ್ನು ಘೋಷಿಸಲು ಒತ್ತಾಯಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ವೀರಶೈವ, ಪಂಚಮಸಾಲಿ ಸಮಾಜದವರ ಮಹತ್ತರವಾದ ಪಾತ್ರ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರೆ ಇಷ್ಟು ದೊಡ್ಡ ಸಮಾಜಕ್ಕೆ ಜಿಲ್ಲೆಯಲ್ಲಿ ಒಬ್ಬ ಶಾಸಕ ಅಥವಾ ಸಂಸದ ಇಲ್ಲದೇ ಇರುವುದು ಸಹಜವಾಗಿ ಸಮಾಜದ ಒಳಗೆ ನೋವಿದೆ. ಇದೆಲ್ಲಾ ಸರಿಹೋಗಬೇಕಾದರೆ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಎನ್‌ಡಿಎ ಕೂಟದ ಬಿಜೆಪಿ ಅಥವಾ ಜೆಡಿಎಸ್‌ನಿಂದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಅವರನ್ನು ಅಭ್ಯರ್ಥಿ ಮಾಡಿದರೆ ಮಾತ್ರ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧ್ಯವಿದೆ. ವೀರಶೈವ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಒಂದು ನ್ಯಾಯ ಸಿಗಬಹುದೇನೋ” ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...