ದಾವಣಗೆರೆ | ಬಿಜೆಪಿಗರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನಿಸಿದ್ದಾರೆ: ಜಿಗ್ನೇಶ್ ಮೇವಾನಿ

Date:

ಬಸವಣ್ಣನ ಜನ್ಮ ಭೂಮಿಯಲ್ಲಿ ಆರೆಸ್ಸೆಸ್‌ನವರನ್ನು ಓಡಿಸುವ ಸಮಾವೇಶವನ್ನು ಮಾಡುತ್ತಿರುವುದಕ್ಕಾಗಿ ನಿಮಗೆ ಅಭಿನಂಧನೆಗಳು. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಆದರೆ ನೀವು ಸಂವಿಧಾನವನ್ನು ಮನೆ ಮನೆಗೆ ಕೊಂಡುಹೋಗಬೇಕೆಂದು ತೀರ್ಮಾನ ಮಾಡಿದ್ದೀರಿ ಎಂದು ಹೋರಾಟಗಾರ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಶ್ಲಾಘನೆ ವ್ಯಕ್ತಪಡಿಸಿದರು.

ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಮಾತನಾಡಿದ ಅವರು, “ಈ ಭಾರತ ಭೂಮಿ ಮೋದಿ ಮತ್ತು ಅಮಿತ್‌ ಶಾ, ಮೋಹನ್ ಭಾಗವತ್ ಅವರ ಅಪ್ಪನ ಭೂಮಿಯಲ್ಲ. ಇದು ಬಸವಣ್ಣ, ಮಹಾವೀರ, ಸೂಫಿ ಸಂತರು, ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ಪಾಕುಲ್ಲಾ ಅವರ ಭೂಮಿಯಾಗಿದೆ. ಭಗತ್‌ ಸಿಂಗ್ ಅವರಂತಹ ಕ್ರಾಂತಿ ಕಾರಿ ತನ್ನ ಜೀವ ನೀಡಿದ್ದಾರೆ. ಇಂತಹ ಭೂಮಿಯನ್ನು ನಾವು ನಾಶ ಮಾಡಲು ಬಿಡುವುದಿಲ್ಲ. ಈ ಭೂಮಿಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಹೊಸ ಪೀಳಿಗೆಯವರಾದ ನಾವುಗಳು ಕೈಗೆತ್ತಿಕೊಳ್ಳಬೇಕಿದೆ” ಎಂದು ಕರೆ ನೀಡಿದರು.

“ನಾನು ಗುಜರಾತ್‌ನಿಂದ ಬರುತ್ತಿದ್ದೇನೆ . ಅಲ್ಲಿ ಚುನಾವಣೆಗಾಗಿ 2002ರಲ್ಲಿ ಗಲಭೆ ಮಾಡಿದರು. ನಂತರ ಮೋದಿ ಅವರ ಮೇಲಿನ ಕೊಳೆ ತೊಳೆಯಲು ವೈಬ್ರಂಟ್ ಗುಜರಾತ್ ಎಂಬ ಕಾರ್ಯಕ್ರಮ ಮಾಡಲಾಯಿತು. ಅಲ್ಲಿ ಬಂಡವಾಳ ಶಾಹಿಗಳಿಗೆ ಎಲ್ಲವನ್ನು ದಾರಾಳವಾಗಿ ನೀಡಲಾಯಿತು. ಈಗಿನ ಎಲ್ಲ ಬಂಡವಾಳಶಾಹಿಗಳು ಮೋದಿ ಮತ್ತು ಆರೆಸ್ಸೆಸ್ ಪರವಾಗಿದ್ದಾರೆ. ಎಲ್ಲೆಲ್ಲೂ ಕೂಡ ಸಂಘಪರಿವಾರದ ವಿರುದ್ಧವಾಗಿ ಸಂವಿಧಾನದ ಶಾಖೆಗಳನ್ನು ತೆರೆಯಬೇಕಾಗಿದೆ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಂವಿಧಾನ ಸಂರಕ್ಷಣೆ

“ಚುನಾವಣಾ ರಾಜಕೀಯದಿಂದ ಮಾತ್ರ ಎಲ್ಲವೂ ಸರಿಯಾಗುವುದಿಲ್ಲ. ಹೌದು ಅವರನ್ನು ಗುಜರಾತ್‌ ಸೇರಿದಂತೆ ಎಲ್ಲಡೆ ಸೋಲಿಸಬೇಕು ಎಂಬುವುದು ನಿಜವೇ ಆಗಿದೆ. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು, ಅದು ಸಂಘರ್ಷ, ಸಂಘರ್ಷ ಮತ್ತು ಸಂಘರ್ಷ. ಅದು ಸೋಲಾಗಲಿ ಅಥವಾ ಗೆಲುವಾಗಲಿ, ಹೋರಾಟ ಮಾಡುತ್ತಲೇ ಇರಬೇಕು” ಎಂದರು.

“ಬಸವಣ್ಣನವರ ಈ ನೆಲದಲ್ಲಿ, ಬಾಬಾಸಾಹೇಬರ ಸಮಾನತೆ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಬಿಜೆಪಿಯವರು ತೀರ್ಮಾನ ಮಾಡಿರುವ ಹೊತ್ತಿನಲ್ಲಿ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಹೇಳಿದರು.

ಸಂವಿಧಾನ ಸಂರಕ್ಷಣೆ 1

“ಗುಜರಾತ್ ಗಲಭೆ ನಡೆಸಿ ಅಲ್ಪಸಂಖ್ಯಾತರ ಮಾರಣ ಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನಂತೆ ಫೋಸ್ ಕೊಡಿ ಅಂತ ಹೇಳಿದರು. ಅವರುಗಳನ್ನು ಕರೆದು ಅವರಿಗೆ ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆಂದು ಹೇಳಿದರು, ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳು ಮಾಡುತ್ತಿದ್ದಾರೆ. ಇಡೀ ದೇಶದ ಬಂಡವಾಳಿಗರಿಂದು ಅದಾನಿ ಅಂಬಾನಿಗಳಂತೆ ಮೋದಿ ಪಡೆಯ ಜತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳಿಗೆ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶದಲ್ಲಿ ಬೌದ್ಧಿಕ ವಲಯವೂ ಕೂಡ ಜಾತಿ, ಧರ್ಮ, ಪಕ್ಷಗಳಾಗಿ ವಿಭಜಿತ ಗೊಂಡಿದೆ; ನಾಡೋಜ ಬರಗೂರು ರಾಮಚಂದ್ರಪ್ಪ.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿರೆಂದು ಸ್ನೇಹಿತ ಪರಕಾಲ ಪ್ರಭಾಕರ್ ಹೇಳಿದರು, ನನಗೂ ನಾಗರಿಕರಿಗಿಂತ ಯಾರು ಬೀದಿಗಿಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ನನಗೆ ಹೆಚ್ಚು ನಂಬಿಕೆ. ನಾವು ಚುನಾವಣೆಯಲ್ಲಿ ಆರೆಸ್ಸೆಸ್ ಬಿಜೆಪಿಯನ್ನು ಸೋಲಿಸಬೇಕು. ಆದರೆ ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು, ಭಗತ್ ಸಿಂಗ್ ಕೂಡಾ ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಹೇಳಿದ್ದರು. ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್‌ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಹೋರಾಟದ ಭಾಗವಾಗುತ್ತೇನೆ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...