ದಾವಣಗೆರೆ | ಬಿಜೆಪಿಯಲ್ಲಿ ನಾಯಕರು ಮತ್ತು ಮಾಜಿ ಶಾಸಕರ ಆರೋಪ ಪ್ರತ್ಯಾರೋಪಗಳದ್ದೇ ಸದ್ದು!

Date:

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಬಿಜೆಪಿಯಲ್ಲಿ ಒಳ ಜಗಳ ನಡೆಯುತ್ತಲೇ ಇದೆ. ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ರೇಣುಕಾಚಾರ್ಯ ಅವರು ತಮ್ಮದೇ ಪಕ್ಷದ ಕೆಲವು ನಾಯಕರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಅವರು ಎರಡು ದಿನಗಳ ಹಿಂದೆ ಜಗಳೂರಿನ ಮಾಜಿ ಶಾಸಕ ಗುರುಸಿದ್ದನಗೌಡರ ಉಚ್ಛಾಟನೆಯನ್ನು ಪ್ರಶ್ನಿಸಿ ರಾಜ್ಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸಿರುವ ದಾವಣಗೆರೆಯ ಬಿಜೆಪಿ ಮುಂಖಡರು ರೇಣುಕಾಚಾರ್ಯ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ ವೀರೇಶ್ ಹನಗವಾಡಿ, “ಜಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಗುರುಸಿದ್ದನಗೌಡ ಅವರೇ ನೇರ ಕಾರಣ” ಎಂದು ಆರೋಪಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಗುರುಸಿದ್ದನಗೌಡ ಮತ್ತವರ ಮಕ್ಕಳು ನೇರವಾಗಿ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ್ದಾರೆ. ಆ ಬಗ್ಗೆ ಬಿಜೆಪಿ ಅಭ್ಯರ್ಥಿ ರಾಮಚಂದ್ರಪ್ಪ ಅವರು ಜಿಲ್ಲಾ ಸಮಿತಿಯ ಗಮನಕ್ಕೆ ತಂದಿದ್ದರು. ಬಳಿಕ ನಡೆದ ಕೋರ್ ಸಮಿತಿಯಲ್ಲಿ ಚರ್ಚಿಸಿ, ಪಕ್ಷದ ಶಿಸ್ತು ಸಮಿತಿಗೆ ಕಳಿಸಲಾಗಿತ್ತು. ಶಿಸ್ತುಪಾಲನಾ ಸಮಿತಿಯ ಸೂಚನೆ ಮೇರೆಗೆ ಗುರುಸಿದ್ದನಗೌಡ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುಸಿದ್ದನಗೌಡ ಅವರ ಉಚ್ಚಾಟನೆಯು ಬಿಜೆಪಿ ಜಿಲ್ಲಾ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಸಂದರ್ಭದಲ್ಲಿ ಮಾತೆತ್ತದ ರೇಣುಕಾಚಾರ್ಯ ನಂತರ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದರು. ಪಕ್ಷದ ಶಿಸ್ತಿನ ಸಿಪಾಯಿ, ಕಟ್ಟಾಳು ಎಂದು ಹೇಳಿಕೊಂಡಿದ್ದರು. ಆದರೆ, ಈಗ ಪ್ರಚಾರಕ್ಕಾಗಿ ಮತ್ತು ಪಕ್ಷದಲ್ಲಿ ಗೊಂದಲ ಮೂಡಿಸುವ ಉದ್ದೆಶದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ ಮುಖಂಡರು ಪ್ರತ್ಯಾರೋಪ ಮಾಡಿದ್ದಾರೆ.

ರೇಣುಕಾಚಾರ್ಯ ಅವರ ಹೇಳಿಕೆ ಪಕ್ಷಕ್ಕೆ ಕಪ್ಪುಚುಕ್ಕೆ ಇದ್ದಂತೆ. ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಅವರು ತಮ್ಮ ನಿಲುವು ಸ್ಪಷ್ಟವಾಗಿ ತಿಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಹೇಳಿದ್ದಾರೆ.

“ನಮ್ಮವರೇ ನಮ್ಮನ್ನು ಸೋಲಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿ. ಗುರುಸಿದ್ದನಗೌಡ ಅವರು ನೇರವಾಗಿ ವಿಪಕ್ಷಗಳ ಜೊತೆಗೆ ಪ್ರಚಾರ ನಡೆಸಿದ್ದರು ಎಂಬುದನ್ನು ಲಿಖಿತ ರೂಪದಲ್ಲಿ ಮತ್ತು ದಾಖಲೆ ಸಮೇತ ದೂರು ಸಲ್ಲಿಸಲಾಗಿತ್ತು. ಪಕ್ಷದ ತೀರ್ಮಾನದಂತೆ ಉಚ್ಚಾಟನೆ ಮಾಡಲಾಗಿದೆ. ಆದರೂ, ಟಿ. ಗುರುಸಿದ್ದನಗೌಡ ಅವರ ವಿರುದ್ಧ ಯಾವುದೇ ದ್ವೇಷ ಇಲ್ಲ. ಗುರುಸಿದ್ದನಗೌಡರೆ ಉಚ್ಚಾಟನೆ ವಿಷಯಕ್ಕೂ ಮತ್ತು ಸಂಸದ ಸಿದ್ದೇಶ್ವರ ಅವರಿಗೆ ಯಾವುದೇ ಸಂಬಂಧವೇ ಇಲ್ಲ” ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಸ್. ವಿ.ರಾಮಚಂದ್ರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...