ದಾವಣಗೆರೆ | ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

Date:

ಗ್ರಾಮೀಣ ಜನರಿಗೆ ಶುದ್ಧವಾದ ನೀರು ಕೊಡುವ ಉದ್ದೇಶದಿಂದ ಸರ್ಕಾರ ನಿರ್ಮಿಸಿರುವ ಗ್ರಾಮೀಣ ಶುದ್ಧ ನೀರಿನ ಘಟಕಗಳು ಜಗಳೂರು ತಾಲೂಕಿನಾದ್ಯಂತ ಜನಪ್ರತಿನಿಧಿಗಳ, ಅಧಿಕಾರಿಗಳ  ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೆ ನಿಷ್ಪ್ರಯೋಜಕವಾಗಿ ಧೂಳು ತಿನ್ನುತ್ತಿವೆ. ಮತ್ತೊಂದೆಡೆ ಶುದ್ಧ ಕುಡಿಯುವ ನೀರಿಗಾಗಿ ಜನರು ಹಪಹಪಿಸುತ್ತಿದ್ದಾರೆ. ಶುದ್ಧ ನೀರು ಸಿಗದೆ ಫ್ಲೋರೈಡ್‌ಯುಕ್ತ ಬೋರ್‌ವೆಲ್ ನೀರನ್ನೇ ಆಶ್ರಯಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಶುದ್ದಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಒಂದು ವರ್ಷವೂ ಚಾಲ್ತಿಯಲ್ಲಿ ಇಲ್ಲದೇ ಕೆಟ್ಟುನಿಂತಿವೆ. ಇದು ಕೇವಲ ಒಂದೆರಡು ಹಳ್ಳಿಗಳ ಪರಿಸ್ಥಿತಿ ಅಲ್ಲ. ಬಹುತೇಕ ಗ್ರಾಮಗಳಲ್ಲಿ ಈ ಸಮಸ್ಯೆ ತಲೆದೋರಿದೆ.

ಶುದ್ಧ ನೀರಿನ ಘಟಕ ಕೆಟ್ಟುನಿಂತಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸುವಂತಹ ವಾತಾವರಣ ನಿರ್ಮಾಣವಾಗಿದೆ. ಪಟ್ಟಣ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಕೂಡಾ ಆರೋಗ್ಯದ ದೃಷ್ಟಿಯಿಂದ ಶುದ್ದ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ನೂರಾರು ಕೋಟಿ ವೆಚ್ಚ ಮಾಡಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಆದರೆ ಶೇ.90ರಷ್ಟು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ದುರಸ್ತಿಗೊಂಡಿದ್ದು, ಅವುಗಳನ್ನು ಸರಿಪಡಿಸುವಂತಹ ಕೆಲಸ ಅವುಗಳ ನಿರ್ವಾಹಣೆ ಜವಾಬ್ದಾರಿ ಹೊತ್ತ ಇಲಾಖೆಯಾಗಲಿ ಅಥವಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಾಗಲಿ, ಸ್ಥಳೀಯ ಮಟ್ಟದ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇದರ ಬಗ್ಗೆ ಗಮನ ಕೊಡದೇ ಇರುವುದು ಹಳ್ಳಿ ಜನರ ದೌರ್ಭಾಗ್ಯವೇ ಸರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ತಿಂಗಳುಗಳೇ ಕಳೆದರೂ ಈವರೆಗೂ ಇದನ್ನು ಯಾರೂ ದುರಸ್ತಿಗೊಳಿಸಿಲ್ಲ. ಗ್ರಾಮ ಪಂಚಾಯಿತಿ ಕೇಂದ್ರದ ಗುರು ಸಿದ್ದಾಪುರ ಗ್ರಾಮದ ಕುಡಿಯುವ ನೀರಿನ ಘಟಕ ಕೂಡ ಕೆಟ್ಟು ನಿಂತಿದ್ದು, ಗ್ರಾಮಗಳಲ್ಲಿ ಫ್ಲೋರೈಡ್ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಖಾಯಿಲೆಗಳಿಗೆ ಗುರಿಯಾಗಿದ್ದಾರೆ.  ಇಲ್ಲಿನ ಜನ  ಒಂದಲ್ಲ ಒಂದು ಅನಾರೋಗ್ಯಕ್ಕೆ ಸಿಲುಕಿ ಪರದಾಡುತ್ತಿದ್ದಾರೆ. ನಿತ್ಯವೂ ಹತ್ತಿರದ ತಾಲೂಕು ಕೇಂದ್ರ ಜಗಳೂರಿನ ಆಸ್ಪತ್ರೆಗಳಿಗೆ, ದಾವಣಗೆರೆ ಆಸ್ಪತ್ರೆಗಳಿಗೆ ಅಲೆದಾಡುವಂತಾಗಿದೆ.

“ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ಲೋಕಸಭಾ ಚುನಾವಣೆಯ ಮತ ಪ್ರಚಾರಕ್ಕೆ ಬಂದಾಗ ಶಾಸಕರ ಗಮನಕ್ಕೂ ತಂದಿದ್ದೇವೆ. ಆದರೂ ಕೂಡಾ ಈವರೆಗೂ ದುರಸ್ತಿಯಾಗಿಲ್ಲ. ಕೇವಲ ಮತಯಾಚನೆಗೆ ಗ್ರಾಮಕ್ಕೆ ಬರುತ್ತಾರೆ. ಜನರ ಅಹವಾಲುಗಳನ್ನು ಜನಪ್ರತಿನಿಧಿಗಳು ಆಲಿಸಬೇಕು. ಶೀಘ್ರವೇ ಶುದ್ದ ನೀರಿನ ವ್ಯವಸ್ಥೆ ಮಾಡಿಕೊಡಬೇಕು” ಎಂದು ತಾಲೂಕಿನ ದಸಂಸ ಮುಖಂಡ ಸತೀಶ್ ಹಾಗೂ ಗ್ರಾಮಸ್ಥ ಅಂಜಿನಪ್ಪ ಒತ್ತಾಯಿಸಿದರು.

“ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಅಧಿಕಾರಿ ಸಾಧೀಖ್ ಉಲ್ಲಾ ಖಾನ್ ಕಚೇರಿಯಲ್ಲಿ ಸಿಗುವುದೇ ಕಷ್ಟ, ಬಂದರೂ ಕಚೇರಿ ಬಿಟ್ಟು ಗ್ರಾಮಗಳತ್ತ ತಿರುಗಿ ನೋಡುವುದಿಲ್ಲ, ಕೇವಲ ಇಲಾಖೆ ಕಡತ- ಬಿಲ್‌ಗಳಿಗೆ ಸಹಿ ಮಾಡಲು ಹಣ ಡ್ರಾ ಮಾಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಈ ಮೊದಲು ಬರಗಾಲದಿಂದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದರೂ ತನಗೇನು ಸಂಬಂಧವೇ ಇಲ್ಲದಂತೆ ಇದ್ದರು. ಪಿಡಿಒಗಳೂ ಕೂಡ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಿಲ್ಲ. ಇಂತಹ ಅಧಿಕಾರಿಗಳಿಂದ ತಾಲೂಕು ಆಡಳಿತಕ್ಕೆ ಕೆಟ್ಟ ಹೆಸರು. ಇವರಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಲೂ ಸಾಧ್ಯವಿಲ್ಲ. ಶಾಸಕರು ಇಂತಹ ಅಧಿಕಾರಿಗಳ ಮೇಲೆ ಕಣ್ಣಿಟ್ಟು ಕೆಲಸ ಮಾಡಿಸಬೇಕು. ಇಲ್ಲದಿದ್ದರೆ ಬೇರೆ ಕಡೆ ಎತ್ತಂಗಡಿ ಮಾಡಬೇಕು” ಎನ್ನುತ್ತಿದ್ದಾರೆ ಸಾರ್ವಜನಿಕರು.

ಈ ಬಗ್ಗೆ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಗುರು ಸಿದ್ದಾಪುರ ಪಂಚಾಯಿತಿಯ ಪಿಡಿಒ ವಾಸು, “ಸಮಸ್ಯೆ ಪರಿಹಾರಕ್ಕೆ ನಾವು ಪ್ರಯತ್ನಿಸುತ್ತಿದ್ದು, ಈವರೆಗೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಅಡ್ಡಿಯಾಗಿತ್ತು. ಗ್ರಾಮ ಪಂಚಾಯಿತಿ ವತಿಯಿಂದ ದುರಸ್ತಿ ಮಾಡಲು ಕ್ರಮ ಕೈಗೊಂಡಿದ್ದು, ಅನುಮೋದನೆ ಪಡೆದು ಶೀಘ್ರವಾಗಿ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುತ್ತೇವೆ” ಎಂದು ಉತ್ತರಿಸಿದರು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಈ ದಿ.ಕಾಮ್‌ಗೆ ಪ್ರತಿಕ್ರಿಯಿಸಿದ್ದು, “ಶುದ್ಧ ಕುಡಿಯುವ ನೀರಿನ ಘಟಕವನ್ನು ಗ್ರಾಮ ಪಂಚಾಯಿತಿಯವರಿಗೆ ಹಸ್ತಾಂತರ ಮಾಡಿದ್ದು, ಅವರೇ ನಿರ್ವಹಣೆ ಮಾಡಬೇಕು. ಆದರೂ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುತ್ತೇವೆ” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

“ಶೀಘ್ರದಲ್ಲೇ ಕ್ರಮ ಕೈಗೊಂಡು ಗ್ರಾಮಗಳ ಜನರು ಫ್ಲೋರೈಡ್‌ಯುಕ್ತ ನೀರು ಕುಡಿಯುವುದನ್ನು ತಪ್ಪಿಸಿ ಸ್ಥಳೀಯರ ಆರೋಗ್ಯ ಕಾಪಾಡಬೇಕು” ಎಂದು ಗ್ರಾಮಸ್ಥರು, ಸಾರ್ವಜನಿಕರು ಆಗ್ರಹಿಸಿದರು.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...