ದಾವಣಗೆರೆ | ಹರಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ; ಪಂಚಮಸಾಲಿ ಮಹಾಸಭಾ ಖಂಡನೆ

Date:

ಹರಿಹರದ ಪಂಚಮಸಾಲಿ ಪೀಠದಲ್ಲಿ ಜನವರಿ 14ರಂದು ನಡೆಯಲಿರುವ ಹರಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಲು ತೀರ್ಮಾನ ಕೈಗೊಂಡಿರುವುದಕ್ಕೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಖಂಡನೆ ವ್ಯಕ್ತಪಡಿಸಿದೆ.

ದಾವಣಗೆರೆಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ಆ‌ರ್ ವಿ ಅಶೋಕ್ ಗೋಪನಾಳ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಆಡಳಿತವನ್ನು ದುರ್ಬಳಕೆ ಮಾಡಿಕೊಂಡು ಪಂಚಮಸಾಲಿ ಸಮಾಜದ ನ್ಯಾಯಯುತ ಬೇಡಿಕೆಯಾದ 2ಎ ಮೀಸಲಾತಿ ನೀಡುವುದನ್ನು ವಿರೋಧಿಸಿ, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಲಾಗಿದೆ.  ಪಂಚಮಸಾಲಿ ಸಮಾಜದ 200ಕ್ಕೂ ಹೆಚ್ಚು ಹೋರಾಟಗಾರರು ಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಈ ನೋವಿನ ನೆನಪು ಹಸಿಯಾಗಿರುವಾಗಲೇ ಹರಿಹರದ ಶ್ರೀಗಳು, ಲಾಠಿ ಚಾರ್ಜ್ ಮಾಡಲು ಕಾರಣರಾದ ಮುಖ್ಯಮಂತ್ರಿಗಳನ್ನು ಆಹ್ವಾನಿಸಿರುವುದು ಖಂಡನೀಯ” ಎಂದಿದ್ದಾರೆ.

“ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರು 2ಎ ಮೀಸಲಾತಿ ವಿರೋಧ ಮಾಡಿದಾಗಲೂ ಅವರನ್ನು ಕರೆದು ಸನ್ಮಾನ ಮಾಡಿದ್ದೀರಿ. ಈಗ ಸಿದ್ದರಾಮಯ್ಯನವರು ಮೀಸಲಾತಿಗೆ ಬಹಿರಂಗ ವಿರೋಧ ಮಾಡಿ, ಆಡಳಿತ ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಯಿಂದ ಲಾಠಿ ಚಾರ್ಜ್ ಮಾಡಿಸಿರುವವರನ್ನು ಪೀಠಕ್ಕೆ ಕರೆದು ಸನ್ಮಾನ ಕಾರ್ಯಕ್ರಮ ನಡೆಸುತ್ತಿರುವುದು ಏನನ್ನು ಸೂಚಿಸುತ್ತದೆ ಎಂಬುದನ್ನು ಶ್ರೀಗಳು ತಿಳಿದುಕೊಳ್ಳಬೇಕಿದೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್, ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಧಾರವಾಡ ಪೀಠ ನೋಟಿಸ್

“ಈ ರೀತಿ ನಿರ್ಧಾರಗಳಿಂದ ಶ್ರೀಗಳು ಸಮಾಜದ ನ್ಯಾಯಯುತ ಬೇಡಿಕೆಗಳನ್ನು ವಿರೋಧಿಸುತ್ತಿರುವ ರಾಜಕಾರಣಿಗಳ ಪರವಿದ್ದಾರೋ, ಅವರ ಒಲವು ಸಮಾಜದ ಪರವಿದೆಯೋ? ಈ ವಿಷಯಗಳನ್ನು ಚರ್ಚೆ ಮಾಡುವುದು ಅನಿವಾರ್ಯವಾಗಿದೆ. ಸಮಾಜದ ಒಳತಿಗಾಗಿ ಶ್ರಮಿಸುವ ದಾವಣಗೆರೆ ಜಿಲ್ಲೆಯ ಹಾಲಿ ಸಚಿವರು, ಮಾಜಿ ಸಚಿವರು, ಹಾಲಿ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರನ್ನು, ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಾಮಾಜಿಕ ಸೇವಾ ಮುಖಂಡರನ್ನು ಸೇರಿಸಿ ಕಾರ್ಯಕ್ರಮ ಮಾಡಿದರೆ, ಅವರನ್ನೂ ಕೂಡಾ ಪ್ರೋತ್ಸಾಹಿಸಿದಂತಾಗುತ್ತದೆ” ಎಂದರು.

ಸುದ್ದಿಗೋಷ್ಠಿಯಲ್ಲಿ ವಕೀಲ ಹೆಚ್ ಎಸ್ ಯೋಗೇಶ್, ಮಂಜು ಪೈಲ್ವಾನ್, ಕಲ್ಲೇಶಪ್ಪ ಕಾರಿಗನೂರು, ಗಿರೀಶ್ ಮರಡಿ, ಅಭಿ ಕಾಟನ್ ಬಕೇಶ್, ಕೊಳೇನಹಳ್ಳಿ ನಾಗರಾಜ್, ಕ್ಯಾರಕಟ್ಟೆ ಕೊಟ್ರೇಗೌಡರು, ಶಂಕರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...