ದಾವಣಗೆರೆ | ಕ್ರಾಂತಿಯ ಬದುಕಿನಲ್ಲಿ ಬದ್ಧತೆ ಮುಖ್ಯ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Date:

ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸತೀಶ್ ಜಾರಕಿಹೊಳಿ ಫೌಂಡೇಶನ್ ದಾವಣಗೆರೆ ನಗರದ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆ ಏರ್ಪಡಿಸಿದ್ದ “ಕಲೆಗಳ ಕಲರವ” ಸಮಾರೋಪ ಹಾಗೂ ”ಬುದ್ಧನ ಬೆಳಕು” ನಾಟಕ ಪ್ರದರ್ಶನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಕಲೆಯ ಮೂಲಕ ಕ್ರಾಂತಿಯನ್ನು ಮಾಡುವ ನಿಟ್ಟಿನಲ್ಲಿ ಫೌಂಡೇಶನ್ ಮಾಡುತ್ತಿರುವ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕ್ರಾಂತಿಯ ಬದುಕಿನಲ್ಲಿ ಬದ್ಧತೆಯೂ ಮುಖ್ಯವಾಗುತ್ತದೆಂಬ ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕವಾಗಿ ಮೆಚ್ಚುಗೆಯ ಮಾತನಾಡುವ, ಭರವಸೆಗಳನ್ನು ನೀಡುವ ರಾಜಕಾರಣಿಗಳಿಗೆ, ಸಾಹಿತಿಗಳಿಗೆ, ಸ್ವಾಮೀಜಿಗಳಿಗೆ ಕೊರತೆ ಇಲ್ಲ. ಆದರೆ ನುಡಿದಂತೆ ನಡೆಯುವುದು ವಿರಳ. ಆಡಿದ ಮಾತುಗಳನ್ನು ಬದುಕಿನಲ್ಲಿ ಸಾಕಾರಗೊಳಿಸಿಕೊಳ್ಳುವುದು ಮುಖ್ಯ” ಎಂಬ ಆಶಯವನ್ನು ಶ್ರೀಗಳು ವ್ಯಕ್ತಪಡಿಸಿದರು.

ಜಾನಪದ ತಜ್ಞ ಡಾ. ಎಂ ಜಿ ಈಶ್ವರಪ್ಪ ಮಾತನಾಡಿ, “ಸತೀಶ್ ಜಾರಕಿಹೊಳಿಯವರು ಕ್ರಾಂತಿಕಾರರು. ಅವರು ಸ್ಮಶಾನವೊಂದರಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಭೂಮಿಯ ಮೇಲಿನ ಎಲ್ಲ ಜಾಗವೂ ಶ್ರೇಷ್ಠ. ಯಾವುದೂ ಕನಿಷ್ಠವಲ್ಲವೆಂದು ಪ್ರತಿಪಾದಿಸಿದವರು. ಎಲ್ಲರೂ ನಾವು ಬೇರೆ ಬೇರೆ ಎಂಬ ಮನೋಭಾವನೆಯಿಂದ ಸಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ಒಂದು ಅನ್ವೇಷಣಾ ನಾಟಕ ಹೊರತರುತ್ತಿರುವುದು ಉತ್ತಮ ಬೆಳವಣಿಗೆ” ಎಂದರು.

ಪತ್ರಕರ್ತ ಬಿ ಎನ್ ಮಲ್ಲೇಶ್ ಮಾತನಾಡಿ, “ಬುದ್ಧನನ್ನು ಓದುವ ಮೂಲಕ ಭಾರತ ಮಾತ್ರವಲ್ಲ ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು. ಬುದ್ಧನನ್ನು ಅಪ್ಪಿಕೊಂಡರೆ ರಾಜಕೀಯ, ಧರ್ಮ, ಜಾತಿ ಸಮಸ್ಯೆಗಳು ತನಗೆ ತಾನೇ ನಿವಾರಣೆಯಾಗುತ್ತವೆ. ಎಲ್ಲರೂ ರಸ್ತೆ ಮೇಲಿನ ಕಸವನ್ನು ಹೊಡೆಯುತ್ತಿದ್ದೇವೆಯೇ ವಿನಃ ಮನಸಿನ ಕಸವನ್ನು ಹೊಡೆಯುತ್ತಿಲ್ಲ. ಶಾಂತಿ ಒಂದೇ ಎಲ್ಲದಕ್ಕೂ ಪರಿಹಾರ ನೀಡಬಲ್ಲದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕೇಂದ್ರ ಬರ ಅಧ್ಯಯನ ತಂಡ ಭೇಟಿ; ರೈತರಿಂದ ಮಾಹಿತಿ

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ.ರಾಮಚಂದ್ರಪ್ಪ ಮಾತನಾಡಿ, “ಒಂದು ಆರೋಗ್ಯಪೂರ್ಣ ಸಮಾಜವನ್ನು ನಿರ್ಮಿಸುವಂತಹ ಶಕ್ತಿ ಸಾಹಿತ್ಯ ಮತ್ತು ಕಲೆಗೆ ಇದೆ. ಈ ನಾಟಕ ರಾಜ್ಯದಲ್ಲಿ ಮೊದಲ ಪ್ರಯೋಗವಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...