ದಾವಣಗೆರೆ | ಕೃಷಿಗಾಗಿ ರೂಢಿಗತ, ನಕಾಶೆಯಲ್ಲಿರುವ ದಾರಿ ಬಿಡಿಸಿಕೊಡುವಂತೆ ಡಿಸಿ ಸೂಚನೆ

Date:

ಕೃಷಿಗೆ ಪೂರಕವಾದ ರೂಢಿಗತ, ನಕಾಶೆ ದಾರಿಗಳನ್ನು ಒತ್ತುವರಿ ಮಾಡಿಕೊಂಡಿದ್ದಲ್ಲಿ, ಅವುಗಳನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡಲು ಅನುಕೂಲ ಕಲ್ಪಿಸುವುದು ಎಲ್ಲ ತಹಶೀಲ್ದಾರರ ಜವಾಬ್ದಾರಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಎಂ.ವಿ ವೆಂಕಟೇಶ್ ತಿಳಿಸಿದರು.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರೈತಸ್ನೇಹಿಯಾಗಿ ಕೆಲಸ ಮಾಡಲು ಸರ್ಕಾರ ಹೊರಡಿಸಿರುವ ಸುತ್ತೋಲೆಯಂತೆ ರೂಢಿಗತ, ನಕಾಶೆಗಳಲ್ಲಿ ರಸ್ತೆಗಳಿದ್ದು, ಅವುಗಳನ್ನು ಯಾರಾದರೂ ಮುಚ್ಚಿದ್ದರೆ, ಅಂತಹ ದಾರಿಯನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಹೊಲಗಳಿಗೆ ಹೋಗಲು ಅನುಕೂಲ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳನ್ನು ಸಕಾಲದಲ್ಲಿ ಕಟಾವು ಮಾಡಿ ಹೊರ ತರದಿದ್ದಲ್ಲಿ ಹಾಳಾಗುವ ಸಂಭವವಿರುತ್ತದೆ. ಆದ್ದರಿಂದ ಸರ್ಕಾರದ ಸುತ್ತೋಲೆಯ ಮೂಲಕ ನಕಾಶೆಯಲ್ಲಿ ಇಲ್ಲದ ದಾರಿ ರೂಢಿಗತವಾಗಿದ್ದಲ್ಲಿ, ಅದನ್ನು ದಾರಿ ಎಂದು ಪರಿಗಣಿಸಿ ಯಾರಾದರೂ ಇದಕ್ಕೆ ಅಡ್ಡಿಪಡಿಸಿದಲ್ಲಿ ಇದನ್ನು ಬಿಡಿಸಿಕೊಡುವ ಜವಾಬ್ದಾರಿ ಕಂದಾಯ ಇಲಾಖೆ ಅಧಿಕಾರಿಗಳದ್ದಾಗಿರುತ್ತದೆ. ನಕಾಶೆ ದಾರಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಕೂಡಲೆ ಆ ದಾರಿಯನ್ನು ತೆರವು ಮಾಡಿಸುವ ಮೂಲಕ ಜನರು ಓಡಾಡಲು ಅವಕಾಶ ಕಲ್ಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರು ತಮ್ಮ ಜಮೀನುಗಳಿಗೆ ಹೋಗಲು ರೂಢಿಗತ, ನಕಾಶೆ ದಾರಿ ಇಲ್ಲದ ಕಾರಣ ಅನೇಕ ಸಮಸ್ಯೆ ಎದುರಿಸುತ್ತಿರುವುದನ್ನು ಮನಗಂಡು ಸುತ್ತೋಲೆಯ ಮೂಲಕ ಪರಿಹರಿಸುವ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ಯಾವುದೇ ದೂರು ರೈತರಿಂದ ಬಂದಲ್ಲಿ ಕೂಡಲೇ ಕ್ರಮಕ್ಕೆ ಮುಂದಾಗಬೇಕು” ಎಂದು ತಹಶೀಲ್ದಾರ್‌ ಅವರಿಗೆ ಸೂಚನೆ ನೀಡಿದರು.

“ಬಗರ್ ಹುಕುಂ ಅಡಿ ಜಮೀನು ಮಂಜೂರು ಮಾಡಲು ಮಾಯಕೊಂಡ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ತಾಲೂಕುಗಳಲ್ಲಿ ಭೂ ಮಂಜೂರಾತಿಗೆ ನಮೂನೆ-57ರಲ್ಲಿ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಮಾಡಲು ಸಮಿತಿ ಕಾರ್ಯಾರಂಭ ಮಾಡಬೇಕಾಗಿದೆ. ಈ ಹಿಂದಿಗಿಂತ ಈಗ ಡಿಜಿಟೆಲ್ ಮಾದರಿಯಲ್ಲಿ ಭೂ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ” ಎಂದರು.

“ಸಾಗುವಳಿ ಮಾಡಲಾಗುತ್ತಿರುವ ಜಮೀನಿಗೆ ಜಿಯೋಫೆನ್ಸಿಂಗ್, ಎಷ್ಟು ವರ್ಷಗಳಿಂದ ಸಾಗುವಳಿ ಮಾಡಲಾಗುತ್ತಿದೆ ಎಂಬ ಸ್ಯಾಟಲೈಟ್ ಛಾಯಾಚಿತ್ರ, ಸರ್ವೆ ಇಲಾಖೆಯಿಂದ ಸಾಗುವಳಿ ಭೂಮಿಗೆ ಸ್ಕೆಚ್ ಪಡೆದು ಸಮಿತಿಯಲ್ಲಿ ಪರಿಶೀಲನೆ ಮಾಡಿದ ನಂತರ ಭೂ ಮಂಜೂರಾತಿ ಮಾಡಲು ನಿಯಮಾವಳಿ ರೂಪಿಸಲಾಗಿದೆ. ಸಮಿತಿ ಸಭೆಯ ನಡಾವಳಿಯನ್ನು ದಾಖಲಿಸುವಾಗ ಡಿಜಿಟಲ್ ಮಾದರಿಯಲ್ಲಿ ದಾಖಲಿಸುವ ಮೂಲಕ ಸಭೆಯಲ್ಲಿ ಭಾಗವಹಿಸುವ ಸದಸ್ಯರ ಹಾಜರಾತಿಯನ್ನು ಬಯೋಮೆಟ್ರಿಕ್ ಮೂಲಕ ಪಡೆದುಕೊಳ್ಳಲಾಗುತ್ತದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ರೈತ ಮುಖಂಡರು ಗ್ರಾಮಗಳಲ್ಲಿ ಸ್ಮಶಾನ ಜಾಗದ ಸಮಸ್ಯೆ ಇದೆ ಎಂದಾಗ, ಸ್ಮಶಾನ ಭೂಮಿಯ ಅಭಿವೃದ್ದಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಮೂಲಕ ಅಭಿವೃದ್ದಿಪಡಿಸಲು ಸಿಇಒ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುಗಾಶ್ರೀ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ತಹಶೀಲ್ದಾರ್ ಅಶ್ವಥ್, ಎಲ್ಲ ತಾಲೂಕಿನ ಎಡಿಎಲ್‍ಆರ್ ಹಾಗೂ ರೈತ ಮುಖಂಡರುಗಳಾದ ರವಿಕುಮಾರ್, ಕೊಳೆನಹಳ್ಳಿ ಸತೀಶ್ ಸೇರಿದಂತೆ ಹಲವು ರೈತ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...