ದಾವಣಗೆರೆ | ಇಪಿಎಸ್ ನಾಯಕರ ವಿರುದ್ಧ ದೆಹಲಿ ಪೊಲೀಸರ ದಬ್ಬಾಳಿಕೆ; ನೌಕರರ ಭವಿಷ್ಯ ನಿಧಿ ಸಂಸ್ಥೆ ಖಂಡನೆ

Date:

ಹಳೆಯ ಇಪಿಎಸ್-95 ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ಇಪಿಎಸ್ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸಿದ ದಬ್ಬಾಳಿಕೆ ಖಂಡಿಸಿ ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಕಾರ್ಮಿಕ ಮಂತ್ರಾಲಯದ ಅಡಿಯಲ್ಲಿ ಬರುವ ನೌಕರರ ಭವಿಷ್ಯ ನಿಧಿ ಸಂಸ್ಥೆ ಕಾರ್ಯಕರ್ತರು ಜಿಲ್ಲಾ ಕಚೇರಿ ಬಳಿ ಇಪಿಎಸ್-95 ರಾಷ್ಟ್ರೀಯ ಆಂದೋಲನ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷ ಕೆ ಎಂ ಮರುಳ ಸಿದ್ದಯ್ಯ ಮಾತನಾಡಿ, “ದೇಶದ ಕೈಗಾರಿಕಾ, ಸಾರ್ವಜನಿಕ, ಸಹಕಾರಿ ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸಿದ 70 ಲಕ್ಷ ನಿವೃತ್ತ ನೌಕರರು ಅಂದರೆ ಇಪಿಎಸ್-95 ಪಿಂಚಣಿದಾರರು ಅತಿ ಅಲ್ಪ ಮೊತ್ತದ ಪಿಂಚಣಿ ಪಡೆಯುತ್ತಿದ್ದು, ನಮ್ಮ ಬೆವರಿನ ಹನಿಯ ಹಣವನ್ನು ಕೊಡಲು ಭವಿಷ್ಯ ನಿಧಿ ಕಚೇರಿಯ ಅಧಿಕಾರಿಗಳು ನಮಗೆ ಸೇರಬೇಕಾದ ಪಿಂಚಣಿ ನೀಡುತ್ತಿಲ್ಲ” ಎಂದು ಆರೋಪಿಸಿದರು.

“ಪಿಂಚಿಣಿದಾರರು ಅತ್ಯಂತ ಹೀನ ಸ್ಥತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದೆಹಲಿಯಲ್ಲಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿನ ಪೊಲೀಸರು ಅವರ ಮೇಲೆ ಅಮಾನುಷವಾಗಿ ವರ್ತಿಸಿ, ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿವೃತ್ತ ಸೇನಾಧಿಕಾರಿ, ಹಿರಿಯ ನಾಗರಿಕ ಅಶೋಕ ರಾವುತ್ ಅವರನ್ನು ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಆ ಮೂಲಕ ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ದೆಹಲಿ ಘಟನೆ ಖಂಡಿಸಿ, ನಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು” ಎಂದು ಆಗ್ರಹಿಸಿದರು.

ಇಪಿಎಸ್ ಪಿಂಚಣಿ ಪಡೆಯುವ ನೌಕರರಿಗೆ ಕನಿಷ್ಠ ₹7,500 ಪಿಂಚಣಿ, ತುಟ್ಟಿಭತ್ಯೆ, ವೈದ್ಯಕೀಯ ಚಿಕಿತ್ಸೆಯ ವೆಚ್ಚ, ಪೂರ್ಣ ಪ್ರಮಾಣದ ಪಿಂಚಣಿ ಜೊತೆ ಇತರೆ ಸವಲತ್ತುಗಳನ್ನು ನೀಡಬೇಕು. ಇಪಿಎಫ್ ಅಧಿಕಾರಿಗಳ ನಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಇಪಿಎಸ್-95 ಪಿಂಚಣಿದಾರರ ಬೇಡಿಕೆಗಳು ಈಡೇರುತ್ತಿಲ್ಲ. ಈ ಕುರಿತು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾರ್ಮಿಕ ಮಂತ್ರಾಲಯ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಅಧಿಕಾರಿಗಳು ಗಮನ ಹರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಆ.20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಂ ಬಿ ಸಿದ್ದಲಿಂಗಯ್ಯ, ಪಿ ನಿಜಗುಣ, ಟಿ ಮಂಜುನಾಥ್, ಗಂಗಾಧರ, ಮಲ್ಲಿಕಾರ್ಜುನ ತಂಗಡಗಿ, ಕೆ ವಿರೂಪಾಕ್ಷಪ್ಪ, ದತ್ತಪ್ಪ ಶೆಟ್ಟರ್, ಚಂದ್ರಪ್ಪ, ಸೋಮಶೇಖರ್, ಎಂ ಬಸವರಾಜ್, ಮಹೇಶ್ವರಪ್ಪ, ಪ್ರಭಾಕರ್, ಮಂಜುನಾಥ್ ಸೂಡಂಬಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...